AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್​ಐಸಿ ಚೇರ್ಮನ್ ಎಂಆರ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 10, 2023 | 4:32 PM

Share

ನವದೆಹಲಿ: ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ (Hindenburg) ಆರೋಪ ಮಾಡಿರುವುದು ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿ ಅದಾನಿ ಸಮೂಹ(Adani Group) ಮ್ಯಾನೇಜ್​ಮೆಂಟ್​​ ಜತೆ ಮಾತುಕತೆ ನಡೆಸಲಿದ್ದೇವೆ. ಆ ಮೂಲಕ ಬಿಕ್ಕಟ್ಟಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಿದ್ದೇವೆ ಎಂದು ಎಲ್​ಐಸಿ (LIC) ಚೇರ್ಮನ್ ಎಂಆರ್ ಕುಮಾರ್ (MR Kumar) ಶುಕ್ರವಾರ ತಿಳಿಸಿದ್ದಾರೆ. ಮುಂದಿನ ಏಳರಿಂದ ಹತ್ತು ದಿನಗಳ ಒಳಗೆ ಅದಾನಿ ಸಮೂಹವನ್ನು ಎಲ್​ಐಸಿ ಸಂಪರ್ಕಿಸಲಿದೆ ಎಂದು ಅವರು ‘ಬ್ಯುಸಿನೆಸ್​ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂಡನ್​​ಬರ್ಗ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್​ಐಸಿಗೂ ನಷ್ಟವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಎಲ್​ಐಸಿ, ಅದಾನಿ ಸಮೂಹದಲ್ಲಿ ಹೆಚ್ಚು ಹೂಡಿಕೆ ಮಾಡಿಲ್ಲ. 36,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಹೂಡಿಕೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಅದಾನಿ ಸಮೂಹ ಕಂಪನಿಗಳಲ್ಲಿ ಎಲ್​ಐಸಿಯ ಒಟ್ಟಾರೆ ಹೂಡಿಕೆ 36,000 ಕೋಟಿ ರೂ. ಆಗಿದೆ. ಜನವರಿ 27ರ ವೇಳೆಗೆ ಅದರ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಆಗಿದೆ ಎಂದು ಎಲ್​ಐಸಿ ತಿಳಿಸಿತ್ತು. ಆದರೆ, ಜನವರಿ 27ರ ನಂತರದ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರ್ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ಹೂಡಿಕೆದಾರರಿಗೂ ಹೇಳಬಯಸುತ್ತೇನೆ. ಶೇ 1ರಷ್ಟು ಅಪಾಯವೂ ಇಲ್ಲ. ಅದಾನಿ ಸಮೂಹದ ಪ್ರಕರಣದಿಂದ ಹೂಡಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಾಗದು. ನಾವು ಆ ಬಗ್ಗೆ ಕಾಳಜಿವಹಿಸಲಿದ್ದೇವೆ. ಅದಾನಿ ಸಮೂಹದಲ್ಲಿ ಎಲ್​ಐಸಿ ಮಾಡಿರುವ ಹೂಡಿಕೆ ಸಮುದ್ರದ ನೀರಿನ ಒಂದು ಬಿಂದಿನಷ್ಟು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ