AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಡಿಕೆ ನಿರ್ಧಾರಗಳ ಮೇಲೆ ಯಾರ ಪ್ರಭಾವವೂ ಇಲ್ಲ: ವಾಷಿಂಗ್ಟನ್ ಪೋಸ್ಟ್ ವರದಿ ಸುಳ್ಳೆಂದ ಎಲ್​ಐಸಿ

ಎಲ್ಐಸಿಯ ಹೂಡಿಕೆ ನಿರ್ಧಾರಗಳು ಬಾಹ್ಯ ಅಂಶಗಳಿಂದ ಪ್ರಭಾವಿತವಾಗಿವೆ ಎಂಬ ‘ವಾಷಿಂಗ್ಟನ್ ಪೋಸ್ಟ್’ ವರದಿ ಸುಳ್ಳು ಎಂದು ಎಲ್ಐಸಿ ಸ್ಪಷ್ಟಪಡಿಸಿದೆ. ಅದಾನಿ ಗ್ರೂಪ್​ನಲ್ಲಿನ ಹೂಡಿಕೆ ಕುರಿತ ಆರೋಪಗಳು ಆಧಾರರಹಿತ. ಎಲ್ಲಾ ನಿರ್ಧಾರಗಳು ನೀತಿ-ನಿಯಮಗಳ ಪ್ರಕಾರ ಸ್ವತಂತ್ರವಾಗಿರುತ್ತವೆ. ಈ ವರದಿ ಭಾರತದ ಹಣಕಾಸು ಅಡಿಪಾಯ ಹಾಳು ಮಾಡುವ ಹುನ್ನಾರ ಎಂದು ಎಲ್ಐಸಿ ಟೀಕಿಸಿದೆ.

ಹೂಡಿಕೆ ನಿರ್ಧಾರಗಳ ಮೇಲೆ ಯಾರ ಪ್ರಭಾವವೂ ಇಲ್ಲ: ವಾಷಿಂಗ್ಟನ್ ಪೋಸ್ಟ್ ವರದಿ ಸುಳ್ಳೆಂದ ಎಲ್​ಐಸಿ
ಎಲ್​ಐಸಿ
Ganapathi Sharma
|

Updated on: Oct 25, 2025 | 1:30 PM

Share

ನವದೆಹಲಿ, ಅಕ್ಟೋಬರ್ 25: ಭಾರತೀಯ ಜೀವ ವಿಮಾ ನಿಗಮದ (LIC) ಹೂಡಿಕೆ ನಿರ್ಧಾರಗಳು ಬಾಹ್ಯ ಅಂಶಗಳಿಂದ ಪ್ರಭಾವಿತವಾಗಿವೆ ಎಂಬ ‘ವಾಷಿಂಗ್ಟನ್ ಪೋಸ್ಟ್’ ವರದಿಯ ಕುರಿತು ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ಈ ವರದಿ ಸುಳ್ಳಿನಿಂದ ಅಥವಾ ತಪ್ಪು ಮಾಹಿತಿ ಯಿಂದ ಕೂಡಿದೆ ಎಂದು ಎಲ್ಐಸಿ ಸ್ಪಷ್ಟಪಡಿಸಿದೆ. ಈ ವಿಚಾರವಾಗಿ ಎಲ್ಐಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಎಲ್​ಐಸಿ ಪ್ರಕಟಣೆಯಲ್ಲೇನಿದೆ?

ಎಲ್‌ಐಸಿಯ ಹೂಡಿಕೆ ನಿರ್ಧಾರಗಳು ಬಾಹ್ಯ ಅಂಶಗಳಿಂದ ಪ್ರಭಾವಿತವಾಗಿವೆ ಎಂದು ‘ವಾಷಿಂಗ್ಟನ್ ಪೋಸ್ಟ್’ ಮಾಡಿರುವ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ಸತ್ಯಕ್ಕೆ ದೂರವಾದವು. ವರದಿಯಲ್ಲಿ ಉಲ್ಲೇಖಿಸಿರುವಂತೆ, ಅದಾನಿ ಗ್ರೂಪ್​ನಲ್ಲಿ ಹೂಡಿಕೆ ಮಾಡುವ ಸಂಬಂಧ ಎಲ್​ಐಸಿ ಯಾವುದೇ ಮಾರ್ಗಸೂಚಿ ರೂಪಿಸಿಲ್ಲ. ದಾಖಲೆಗಳನ್ನೂ ಸಿದ್ಧಪಡಿಸಿಲ್ಲ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಎಲ್​ಐಸಿ ಸ್ಪಷ್ಟನೆ

ವಿವರವಾದ ಪರಿಶೀಲನೆಯ ನಂತರವೇ, ಹೂಡಿಕೆ ನಿರ್ಧಾರಗಳನ್ನು ಎಲ್ಐಸಿ ಸ್ವತಂತ್ರವಾಗಿ ತೆಗೆದುಕೊಳ್ಳುತ್ತದೆ. ಮಂಡಳಿಯ ಅನುಮೋದಿತ ನೀತಿಗಳ ಪ್ರಕಾರವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಂತಹ ನಿರ್ಧಾರಗಳಲ್ಲಿ ಹಣಕಾಸು ಸೇವೆಗಳ ಇಲಾಖೆ ಅಥವಾ ಯಾವುದೇ ಇತರ ಸಂಸ್ಥೆಯು ಯಾವುದೇ ಪಾತ್ರವನ್ನು ಹೊಂದಿರುವುದಿಲ್ಲ. ಇಂಥ ವಿಚಾರಗಳಲ್ಲಿ ಎಲ್‌ಐಸಿ ಅತ್ಯುನ್ನತ ಮಾನದಂಡಗಳನ್ನು ಹೊಂದಿದೆ ಮತ್ತು ಪಾಲಿಸುತ್ತಿದೆ. ಎಲ್ಲಾ ಹೂಡಿಕೆ ನಿರ್ಧಾರಗಳನ್ನು ಅಸ್ತಿತ್ವದಲ್ಲಿರುವ ನೀತಿಗಳು, ಕಾಯಿದೆಗಳಲ್ಲಿನ ನಿಬಂಧನೆಗಳು ಮತ್ತು ನಿಯಂತ್ರಕ ಮಾರ್ಗಸೂಚಿಗಳಿಗೆ ಅನುಸಾರವಾಗಿ ತೆಗೆದುಕೊಳ್ಳಲಾಗಿದೆ. ಎಲ್ಲಾ ಪಾಲುದಾರರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರತದ ಹಣಕಾಸು ಅಡಿಪಾಯ ಹಾಳು ಮಾಡುವ ಹುನ್ನಾರ: ಎಲ್​ಐಸಿ ಟೀಕೆ

‘ವಾಷಿಂಗ್ಟನ್ ಪೋಸ್ಟ್’ ವರದಿಯಲ್ಲಿ ಉಲ್ಲೇಖಿಸಲಾದ ಅಂಶವು ಎಲ್​ಐಸಿಯ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯ ಬಗ್ಗೆ ಪೂರ್ವಾಗ್ರಹ ಹರಡುವ ಸಂಚಿನಿಂದ ಮಾಡಲಾಗಿದೆ. ಎಲ್​ಐಸಿಯ ಖ್ಯಾತಿ, ವರ್ಚಸ್ಸು ಹಾಗೂ ಭಾರತದಲ್ಲಿನ ಬಲವಾದ ಹಣಕಾಸು ವಲಯದ ಅಡಿಪಾಯವನ್ನು ಹಾಳು ಮಾಡುವ ಹುನ್ನಾರದಿಂದ ಮಾಡಲಾಗಿದೆ ಎಂದು ತೋರುತ್ತಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಅತಿಹೆಚ್ಚು ಫಿಕ್ಸೆಡ್ ಡೆಪಾಸಿಟ್ ರೇಟ್ ಕೊಡುವ ಬ್ಯಾಂಕುಗಳು

ಅದಾನಿ ಗ್ರೂಪ್ ಕೂಡ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು, ಎಲ್‌ಐಸಿ ಹೂಡಿಕೆಗಳನ್ನು ನಿರ್ದೇಶಿಸುವಂಥ ಯಾವುದೇ ಯೋಜನೆಗಳಲ್ಲಿ ನಾವು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಸಂಬಂಧದ ಆರೋಪಗಳು ಅನಗತ್ಯ ರಾಜಕೀಯ ಪ್ರತಿಪಾದನೆಗಳು ಮತ್ತು ಆಧಾರರಹಿತವಾಗಿವೆ ಎಂದು ಅದಾನಿ ಗ್ರೂಪ್ ಹೇಳಿದೆ.

ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮವು ಅದಾನಿ ಗ್ರೂಪ್ ಷೇರುಗಳಲ್ಲಿ ಭಾರಿ ಹೂಡಿಕೆ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ