AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Earnings: ಹಣಕಾಸು ವರ್ಷ 2022ಕ್ಕೆ ಎಲ್​ಐಸಿ ನಿವ್ವಳ ಲಾಭ ಶೇ 39ರಷ್ಟು ಏರಿಕೆಯಾಗಿ 4043 ಕೋಟಿಗೆ

2021-22ರ ಹಣಕಾಸು ವರ್ಷಕ್ಕೆ ಎಲ್​ಐಸಿ ನಿವ್ವಳ ಲಾಭವು ಕಳೆದ ವರ್ಷಕ್ಕಿಂತ ಶೇ 39ರಷ್ಟು ಹೆಚ್ಚಾಗಿ 4053 ಕೋಟಿ ರೂಪಾಯಿಯನ್ನು ಮುಟ್ಟಿದೆ.

LIC Earnings: ಹಣಕಾಸು ವರ್ಷ 2022ಕ್ಕೆ ಎಲ್​ಐಸಿ ನಿವ್ವಳ ಲಾಭ ಶೇ 39ರಷ್ಟು ಏರಿಕೆಯಾಗಿ 4043 ಕೋಟಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 30, 2022 | 6:23 PM

Share

ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಮೇ 30ನೇ ತಾರೀಕಿನ ಸೋಮವಾರದಂದು ಪ್ರಕಟಿಸಿರುವ ಹಣಕಾಸಿನ ಫಲಿತಾಂಶದ ಪ್ರಕಾರ, ಮಾರ್ಚ್ 2022ಕ್ಕೆ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ರೂ. 2,409 ಕೋಟಿ ನಿವ್ವಳ ಲಾಭವನ್ನು ವರದಿ ಮಾಡಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ವರದಿಯಾದ ರೂ. 2,917.33 ಕೋಟಿಗೆ ಹೋಲಿಸಿದರೆ ಶೇ 17.41ರಷ್ಟು ಕಡಿಮೆಯಾಗಿದೆ. ಇಡೀ ಹಣಕಾಸು ವರ್ಷದಲ್ಲಿ ಕಂಪೆನಿಯ ನಿವ್ವಳ ಲಾಭವು ರೂ. 4,043.12 ಕೋಟಿ ಎಂದು ವರದಿಯಾಗಿದ್ದು, ಇದು ಹಣಕಾಸು ವರ್ಷ 2021ರಲ್ಲಿ ಇದ್ದ ರೂ. 2,900.56 ಕೋಟಿಗೆ ಹೋಲಿಸಿದರೆ ಶೇ 39.4ರಷ್ಟು ಹೆಚ್ಚಾಗಿದೆ.

ಹಣಕಾಸು ವರ್ಷ 2022ರ ನಾಲ್ಕನೇ ತ್ರೈಮಾಸಿಕದಲ್ಲಿ ಒಟ್ಟು ಆದಾಯವು 2,11,471 ಕೋಟಿ ರೂಪಾಯಿ ಬಂದಿದ್ದು, ಇದು ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ವರದಿಯಾದ 1,89,176 ಕೋಟಿ ಆದಾಯಕ್ಕೆ ಹೋಲಿಸಿದರೆ ಶೇ 11.64ರಷ್ಟು ಹೆಚ್ಚಾಗಿದೆ. ಇತ್ತೀಚೆಗೆ ಭಾರತದ ಅತಿದೊಡ್ಡ ಆರಂಭಿಕ ಸಾರ್ವಜನಿಕ ಕೊಡುಗೆಗೆ (ಐಪಿಒ) ತೆರೆದಿರುವ ಎಲ್ಐಸಿ, ಪ್ರತಿ ಈಕ್ವಿಟಿ ಷೇರಿಗೆ ರೂ. 1.50 ರಷ್ಟು ಲಾಭಾಂಶವನ್ನು ಘೋಷಿಸಿರುವುದು ನಿಯಂತ್ರಕ ಫೈಲಿಂಗ್​ನಿಂದ ತಿಳಿದುಬಂದಿದೆ.

ಪರಿಶೀಲನೆಯಲ್ಲಿರುವ ತ್ರೈಮಾಸಿಕದಲ್ಲಿ ಅದರ ನಿವ್ವಳ ಪ್ರೀಮಿಯಂ ಆದಾಯವು 1,44,158.84 ಕೋಟಿ ರೂಪಾಯಿಗೆ ಏರಿದೆ ಎಂದು ಕಂಪೆನಿಯು ಗಮನ ಸೆಳೆದಿದೆ. ಇದು ಹಣಕಾಸು ವರ್ಷ 2021ರ ನಾಲ್ಕನೇ ತ್ರೈಮಾಸಿಕದಲ್ಲಿ ವರದಿಯಾದ 1,22,290.64 ಕೋಟಿ ರೂಪಾಯಿಗೆ ಹೋಲಿಸಿದರೆ ಶೇ 17.88 ರಷ್ಟು ಏರಿಕೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: LIC Stock Market Debut: 949 ರೂ.ಗೆ ಹಂಚಿದ್ದ ಎಲ್​ಐಸಿ ಷೇರು ಶೇ 9ರಷ್ಟು ಕಡಿಮೆಗೆ 867 ರೂಪಾಯಿಯಲ್ಲಿ ಮಾರುಕಟ್ಟೆ ಲಿಸ್ಟಿಂಗ್

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ