AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಆನ್​ಲೈನ್ ಮೂಲಕ ಲಿಂಕ್ ಮಾಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 09, 2023 | 2:26 PM

Share

ನವದೆಹಲಿ: ಎಲ್​ಐಸಿ ಪಾಲಿಸಿ ಮತ್ತು ಪ್ಯಾನ್ ಕಾರ್ಡ್(PAN Card) ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ (LIC) ತಿಳಿಸಿದೆ. ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ಯಾನ್ ಮತ್ತು ಪಾಲಿಸಿಯನ್ನು ಲಿಂಕ್ ಮಾಡುವಂತೆ ಗ್ರಾಹಕರಿಗೆ ಎಲ್​​ಐಸಿ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಎಲ್​ಐಸಿ ಇಂಡಿಯಾ ವೆಬ್​​ಸೈಟ್​​ (linkpan.licindia.in/UIDSeedingWebApp/getPolicyPANStatus) ಮೂಲಕ ಪಾಲಿಸಿ ಮತ್ತು ಪ್ಯಾನ್ ಲಿಂಕ್ ಮಾಡಬಹುದಾಗಿದೆ ಎಂದೂ ಸಂಸ್ಥೆ ತಿಳಿಸಿದೆ. ಮೊದಲಿಗೆ ಮೇಲೆ ಉಲ್ಲೇಖಿಸಿರುವ ಲಿಂಕ್ ಕ್ಲಿಕ್ ಮಾಡಿ. ಪಾಲಿಸಿ ಸಂಖ್ಯೆ, ಪ್ಯಾನ್ ವಿವರ ಹಾಗೂ ಕ್ಯಾಪ್ಚಾ ಕೋಡ್ ನಮೂದಿಸಿ. ನಂತರ ಸಬ್​ಮಿಟ್ ಬಟನ್ ಕ್ಲಿಕ್ ಮಾಡಿ. ಅಷ್ಟರಲ್ಲಿ ಎಲ್​ಐಸಿ ಪ್ಯಾನ್​ ಲಿಂಕ್​ ಸ್ಥಿತಿಗತಿ ವಿವರ ಕಾಣಿಸಲಿದೆ. ಒಂದು ವೇಳೆ ಪಾಲಿಸಿ ಜತೆ ಪ್ಯಾನ್ ಲಿಂಕ್ ಆಗಿಲ್ಲವೆಂದಾದರೆ, ‘ಪ್ಯಾನ್ ವಿವರ ನೋಂದಣಿ ಮಾಡಲು ಇಲ್ಲಿ ಕ್ಲಿಕ್ ಮಾಡಿ’ ಎಂಬ ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿದಾಗ ಮತ್ತೊಂದು ವೆಬ್​ ಪುಟ ತೆರೆದುಕೊಳ್ಳುತ್ತದೆ.

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?

  1. ಎಲ್​​ಐಸಿ ಇಂಡಿಯಾದ ಈ (linkpan.licindia.in/UIDSeedingWebApp/home) ಲಿಂಕ್​​​ ಕ್ಲಿಕ್ ಮಾಡಿ.
  2. ಜನ್ಮ ದಿನಾಂಕ, ಲಿಂಗ ಹಾಗೂ ಪ್ಯಾನ್ ಸಂಬಂಧಿತ ವಿವರ ಭರ್ತಿ ಮಾಡಿ.
  3. ಇ-ಮೇಲ್​ ವಿಳಾಸ ಮತ್ತು ಪ್ಯಾನ್ ಕಾರ್ಡ್ ವಿವರ ಭರ್ತಿ ಮಾಡಿ.
  4. ಪ್ಯಾನ್​ ಕಾರ್ಡ್​​ನಲ್ಲಿ ಇರುವಂತೆಯೇ ನಿಮ್ಮ ಹೆಸರನ್ನು ಉಲ್ಲೇಖಿಸಿ. ನಂತರ ಫೋನ್ ನಂಬರ್, ಪಾಲಿಸಿ ಸಂಖ್ಯೆ ಭರ್ತಿ ಮಾಡಿ.
  5. ಕ್ಯಾಪ್ಚಾ ಭರ್ತಿ ಮಾಡಿದ ಬಳಿಕ ‘ಗೆಟ್ ಒಟಿಪಿ’ ಕ್ಲಿಕ್ ಮಾಡಿ. ನಂತರ ಒಟಿಪಿ ಭರ್ತಿ ಮಾಡಿ. ಪಾಲಿಸಿ ಮತ್ತು ಪ್ಯಾನ್ ಲಿಂಕ್​ಗೆ ನಿಮ್ಮ ಮನವಿಯನ್ನು ಸ್ವೀಕರಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’