AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಆನ್​ಲೈನ್ ಮೂಲಕ ಲಿಂಕ್ ಮಾಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 09, 2023 | 2:26 PM

Share

ನವದೆಹಲಿ: ಎಲ್​ಐಸಿ ಪಾಲಿಸಿ ಮತ್ತು ಪ್ಯಾನ್ ಕಾರ್ಡ್(PAN Card) ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ (LIC) ತಿಳಿಸಿದೆ. ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ಯಾನ್ ಮತ್ತು ಪಾಲಿಸಿಯನ್ನು ಲಿಂಕ್ ಮಾಡುವಂತೆ ಗ್ರಾಹಕರಿಗೆ ಎಲ್​​ಐಸಿ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಎಲ್​ಐಸಿ ಇಂಡಿಯಾ ವೆಬ್​​ಸೈಟ್​​ (linkpan.licindia.in/UIDSeedingWebApp/getPolicyPANStatus) ಮೂಲಕ ಪಾಲಿಸಿ ಮತ್ತು ಪ್ಯಾನ್ ಲಿಂಕ್ ಮಾಡಬಹುದಾಗಿದೆ ಎಂದೂ ಸಂಸ್ಥೆ ತಿಳಿಸಿದೆ. ಮೊದಲಿಗೆ ಮೇಲೆ ಉಲ್ಲೇಖಿಸಿರುವ ಲಿಂಕ್ ಕ್ಲಿಕ್ ಮಾಡಿ. ಪಾಲಿಸಿ ಸಂಖ್ಯೆ, ಪ್ಯಾನ್ ವಿವರ ಹಾಗೂ ಕ್ಯಾಪ್ಚಾ ಕೋಡ್ ನಮೂದಿಸಿ. ನಂತರ ಸಬ್​ಮಿಟ್ ಬಟನ್ ಕ್ಲಿಕ್ ಮಾಡಿ. ಅಷ್ಟರಲ್ಲಿ ಎಲ್​ಐಸಿ ಪ್ಯಾನ್​ ಲಿಂಕ್​ ಸ್ಥಿತಿಗತಿ ವಿವರ ಕಾಣಿಸಲಿದೆ. ಒಂದು ವೇಳೆ ಪಾಲಿಸಿ ಜತೆ ಪ್ಯಾನ್ ಲಿಂಕ್ ಆಗಿಲ್ಲವೆಂದಾದರೆ, ‘ಪ್ಯಾನ್ ವಿವರ ನೋಂದಣಿ ಮಾಡಲು ಇಲ್ಲಿ ಕ್ಲಿಕ್ ಮಾಡಿ’ ಎಂಬ ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿದಾಗ ಮತ್ತೊಂದು ವೆಬ್​ ಪುಟ ತೆರೆದುಕೊಳ್ಳುತ್ತದೆ.

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?

  1. ಎಲ್​​ಐಸಿ ಇಂಡಿಯಾದ ಈ (linkpan.licindia.in/UIDSeedingWebApp/home) ಲಿಂಕ್​​​ ಕ್ಲಿಕ್ ಮಾಡಿ.
  2. ಜನ್ಮ ದಿನಾಂಕ, ಲಿಂಗ ಹಾಗೂ ಪ್ಯಾನ್ ಸಂಬಂಧಿತ ವಿವರ ಭರ್ತಿ ಮಾಡಿ.
  3. ಇ-ಮೇಲ್​ ವಿಳಾಸ ಮತ್ತು ಪ್ಯಾನ್ ಕಾರ್ಡ್ ವಿವರ ಭರ್ತಿ ಮಾಡಿ.
  4. ಪ್ಯಾನ್​ ಕಾರ್ಡ್​​ನಲ್ಲಿ ಇರುವಂತೆಯೇ ನಿಮ್ಮ ಹೆಸರನ್ನು ಉಲ್ಲೇಖಿಸಿ. ನಂತರ ಫೋನ್ ನಂಬರ್, ಪಾಲಿಸಿ ಸಂಖ್ಯೆ ಭರ್ತಿ ಮಾಡಿ.
  5. ಕ್ಯಾಪ್ಚಾ ಭರ್ತಿ ಮಾಡಿದ ಬಳಿಕ ‘ಗೆಟ್ ಒಟಿಪಿ’ ಕ್ಲಿಕ್ ಮಾಡಿ. ನಂತರ ಒಟಿಪಿ ಭರ್ತಿ ಮಾಡಿ. ಪಾಲಿಸಿ ಮತ್ತು ಪ್ಯಾನ್ ಲಿಂಕ್​ಗೆ ನಿಮ್ಮ ಮನವಿಯನ್ನು ಸ್ವೀಕರಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು