AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಆನ್​ಲೈನ್ ಮೂಲಕ ಲಿಂಕ್ ಮಾಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 09, 2023 | 2:26 PM

Share

ನವದೆಹಲಿ: ಎಲ್​ಐಸಿ ಪಾಲಿಸಿ ಮತ್ತು ಪ್ಯಾನ್ ಕಾರ್ಡ್(PAN Card) ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ (LIC) ತಿಳಿಸಿದೆ. ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ಯಾನ್ ಮತ್ತು ಪಾಲಿಸಿಯನ್ನು ಲಿಂಕ್ ಮಾಡುವಂತೆ ಗ್ರಾಹಕರಿಗೆ ಎಲ್​​ಐಸಿ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಎಲ್​ಐಸಿ ಇಂಡಿಯಾ ವೆಬ್​​ಸೈಟ್​​ (linkpan.licindia.in/UIDSeedingWebApp/getPolicyPANStatus) ಮೂಲಕ ಪಾಲಿಸಿ ಮತ್ತು ಪ್ಯಾನ್ ಲಿಂಕ್ ಮಾಡಬಹುದಾಗಿದೆ ಎಂದೂ ಸಂಸ್ಥೆ ತಿಳಿಸಿದೆ. ಮೊದಲಿಗೆ ಮೇಲೆ ಉಲ್ಲೇಖಿಸಿರುವ ಲಿಂಕ್ ಕ್ಲಿಕ್ ಮಾಡಿ. ಪಾಲಿಸಿ ಸಂಖ್ಯೆ, ಪ್ಯಾನ್ ವಿವರ ಹಾಗೂ ಕ್ಯಾಪ್ಚಾ ಕೋಡ್ ನಮೂದಿಸಿ. ನಂತರ ಸಬ್​ಮಿಟ್ ಬಟನ್ ಕ್ಲಿಕ್ ಮಾಡಿ. ಅಷ್ಟರಲ್ಲಿ ಎಲ್​ಐಸಿ ಪ್ಯಾನ್​ ಲಿಂಕ್​ ಸ್ಥಿತಿಗತಿ ವಿವರ ಕಾಣಿಸಲಿದೆ. ಒಂದು ವೇಳೆ ಪಾಲಿಸಿ ಜತೆ ಪ್ಯಾನ್ ಲಿಂಕ್ ಆಗಿಲ್ಲವೆಂದಾದರೆ, ‘ಪ್ಯಾನ್ ವಿವರ ನೋಂದಣಿ ಮಾಡಲು ಇಲ್ಲಿ ಕ್ಲಿಕ್ ಮಾಡಿ’ ಎಂಬ ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿದಾಗ ಮತ್ತೊಂದು ವೆಬ್​ ಪುಟ ತೆರೆದುಕೊಳ್ಳುತ್ತದೆ.

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?

  1. ಎಲ್​​ಐಸಿ ಇಂಡಿಯಾದ ಈ (linkpan.licindia.in/UIDSeedingWebApp/home) ಲಿಂಕ್​​​ ಕ್ಲಿಕ್ ಮಾಡಿ.
  2. ಜನ್ಮ ದಿನಾಂಕ, ಲಿಂಗ ಹಾಗೂ ಪ್ಯಾನ್ ಸಂಬಂಧಿತ ವಿವರ ಭರ್ತಿ ಮಾಡಿ.
  3. ಇ-ಮೇಲ್​ ವಿಳಾಸ ಮತ್ತು ಪ್ಯಾನ್ ಕಾರ್ಡ್ ವಿವರ ಭರ್ತಿ ಮಾಡಿ.
  4. ಪ್ಯಾನ್​ ಕಾರ್ಡ್​​ನಲ್ಲಿ ಇರುವಂತೆಯೇ ನಿಮ್ಮ ಹೆಸರನ್ನು ಉಲ್ಲೇಖಿಸಿ. ನಂತರ ಫೋನ್ ನಂಬರ್, ಪಾಲಿಸಿ ಸಂಖ್ಯೆ ಭರ್ತಿ ಮಾಡಿ.
  5. ಕ್ಯಾಪ್ಚಾ ಭರ್ತಿ ಮಾಡಿದ ಬಳಿಕ ‘ಗೆಟ್ ಒಟಿಪಿ’ ಕ್ಲಿಕ್ ಮಾಡಿ. ನಂತರ ಒಟಿಪಿ ಭರ್ತಿ ಮಾಡಿ. ಪಾಲಿಸಿ ಮತ್ತು ಪ್ಯಾನ್ ಲಿಂಕ್​ಗೆ ನಿಮ್ಮ ಮನವಿಯನ್ನು ಸ್ವೀಕರಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ