AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಆನ್​ಲೈನ್ ಮೂಲಕ ಲಿಂಕ್ ಮಾಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 09, 2023 | 2:26 PM

Share

ನವದೆಹಲಿ: ಎಲ್​ಐಸಿ ಪಾಲಿಸಿ ಮತ್ತು ಪ್ಯಾನ್ ಕಾರ್ಡ್(PAN Card) ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ (LIC) ತಿಳಿಸಿದೆ. ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ಯಾನ್ ಮತ್ತು ಪಾಲಿಸಿಯನ್ನು ಲಿಂಕ್ ಮಾಡುವಂತೆ ಗ್ರಾಹಕರಿಗೆ ಎಲ್​​ಐಸಿ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಎಲ್​ಐಸಿ ಇಂಡಿಯಾ ವೆಬ್​​ಸೈಟ್​​ (linkpan.licindia.in/UIDSeedingWebApp/getPolicyPANStatus) ಮೂಲಕ ಪಾಲಿಸಿ ಮತ್ತು ಪ್ಯಾನ್ ಲಿಂಕ್ ಮಾಡಬಹುದಾಗಿದೆ ಎಂದೂ ಸಂಸ್ಥೆ ತಿಳಿಸಿದೆ. ಮೊದಲಿಗೆ ಮೇಲೆ ಉಲ್ಲೇಖಿಸಿರುವ ಲಿಂಕ್ ಕ್ಲಿಕ್ ಮಾಡಿ. ಪಾಲಿಸಿ ಸಂಖ್ಯೆ, ಪ್ಯಾನ್ ವಿವರ ಹಾಗೂ ಕ್ಯಾಪ್ಚಾ ಕೋಡ್ ನಮೂದಿಸಿ. ನಂತರ ಸಬ್​ಮಿಟ್ ಬಟನ್ ಕ್ಲಿಕ್ ಮಾಡಿ. ಅಷ್ಟರಲ್ಲಿ ಎಲ್​ಐಸಿ ಪ್ಯಾನ್​ ಲಿಂಕ್​ ಸ್ಥಿತಿಗತಿ ವಿವರ ಕಾಣಿಸಲಿದೆ. ಒಂದು ವೇಳೆ ಪಾಲಿಸಿ ಜತೆ ಪ್ಯಾನ್ ಲಿಂಕ್ ಆಗಿಲ್ಲವೆಂದಾದರೆ, ‘ಪ್ಯಾನ್ ವಿವರ ನೋಂದಣಿ ಮಾಡಲು ಇಲ್ಲಿ ಕ್ಲಿಕ್ ಮಾಡಿ’ ಎಂಬ ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿದಾಗ ಮತ್ತೊಂದು ವೆಬ್​ ಪುಟ ತೆರೆದುಕೊಳ್ಳುತ್ತದೆ.

ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?

  1. ಎಲ್​​ಐಸಿ ಇಂಡಿಯಾದ ಈ (linkpan.licindia.in/UIDSeedingWebApp/home) ಲಿಂಕ್​​​ ಕ್ಲಿಕ್ ಮಾಡಿ.
  2. ಜನ್ಮ ದಿನಾಂಕ, ಲಿಂಗ ಹಾಗೂ ಪ್ಯಾನ್ ಸಂಬಂಧಿತ ವಿವರ ಭರ್ತಿ ಮಾಡಿ.
  3. ಇ-ಮೇಲ್​ ವಿಳಾಸ ಮತ್ತು ಪ್ಯಾನ್ ಕಾರ್ಡ್ ವಿವರ ಭರ್ತಿ ಮಾಡಿ.
  4. ಪ್ಯಾನ್​ ಕಾರ್ಡ್​​ನಲ್ಲಿ ಇರುವಂತೆಯೇ ನಿಮ್ಮ ಹೆಸರನ್ನು ಉಲ್ಲೇಖಿಸಿ. ನಂತರ ಫೋನ್ ನಂಬರ್, ಪಾಲಿಸಿ ಸಂಖ್ಯೆ ಭರ್ತಿ ಮಾಡಿ.
  5. ಕ್ಯಾಪ್ಚಾ ಭರ್ತಿ ಮಾಡಿದ ಬಳಿಕ ‘ಗೆಟ್ ಒಟಿಪಿ’ ಕ್ಲಿಕ್ ಮಾಡಿ. ನಂತರ ಒಟಿಪಿ ಭರ್ತಿ ಮಾಡಿ. ಪಾಲಿಸಿ ಮತ್ತು ಪ್ಯಾನ್ ಲಿಂಕ್​ಗೆ ನಿಮ್ಮ ಮನವಿಯನ್ನು ಸ್ವೀಕರಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ