Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?

2021ರ ಡಿಸೆಂಬರ್ ತಿಂಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಘೋಷಿಸಲಾದ ರಜಾ ದಿನಗಳ ಪಟ್ಟಿ ಇಲ್ಲಿದೆ. ಗ್ರಾಹಕರು ಶಾಖೆಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಉತ್ತಮ.

Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on: Nov 30, 2021 | 10:59 AM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಂಚಿಕೊಂಡ ರಜಾದಿನಗಳ ಪಟ್ಟಿಯ ಪ್ರಕಾರ, ಎಲ್ಲ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್​ಗಳು 2021ರ ಡಿಸೆಂಬರ್‌ನಲ್ಲಿ 12 ದಿನಗಳವರೆಗೆ ಮುಚ್ಚುತ್ತವೆ. ಅರ್ಥಾತ್ ಇಷ್ಟು ದಿನ ಬ್ಯಾಂಕ್​ಗಳಿಗೆ ರಜಾದಿನಗಳಿವೆ. ಹಬ್ಬಗಳು ಮತ್ತು ಮುಂಬರುವ ಕ್ರಿಸ್​ಮಸ್ ಹಾಗೂ ಹೊಸ ವರ್ಷದ ಆಚರಣೆಗಳ ದೃಷ್ಟಿಯಿಂದ ಮುಂದಿನ ತಿಂಗಳು ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು ಏಳು ರಜಾದಿನಗಳನ್ನು ಘೋಷಿಸಲಾಗಿದೆ. ಬ್ಯಾಂಕ್ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಮತ್ತು ಕೆಲವು ಖಾಸಗಿ ಬ್ಯಾಂಕ್​ಗಳಲ್ಲಿ ಭಿನ್ನವಾಗಿರುತ್ತವೆ ಎಂಬುದನ್ನು ಸಹ ಗಮನಿಸಬೇಕು. ಅಲ್ಲದೆ, ರಜಾದಿನಗಳನ್ನು ಮೂರು ವರ್ಗಗಳ ಅಡಿಯಲ್ಲಿ ಪಟ್ಟಿ ಮಾಡಲಾಗಿದೆ: ನೆಗೋಷಿಯೆಬಲ್ ಇನ್​​ಸ್ಟ್ರುಮೆಂಟ್ಸ್ ಕಾಯ್ದೆ ಅಡಿಯಲ್ಲಿ ರಜಾದಿನಗಳು, ನೆಗೋಷಿಯೇಬಲ್ ಇನ್​ಸ್ಟ್ರುಮೆಂಟ್ಸ್ ಕಾಯ್ದೆ ಅಡಿಯಲ್ಲಿ ರಜಾದಿನಗಳು ಮತ್ತು ರಿಯಲ್ ಟೈಮ್ ಗ್ರಾಸ್ ಸೆಟಲ್​ಮೆಂಟ್ ಹಾಲಿಡೇ, ಮತ್ತು ಬ್ಯಾಂಕ್​ಳ ಖಾತೆಗಳನ್ನು ಮುಚ್ಚುವುದು.

ಡಿಸೆಂಬರ್‌ನಲ್ಲಿ ಬ್ಯಾಂಕ್ ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ: ಡಿಸೆಂಬರ್ 3: ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಹಬ್ಬದ ನಿಮಿತ್ತ ಗೋವಾದಲ್ಲಿ ಬ್ಯಾಂಕ್​ಗಳಿಗೆ ರಜಾ

ಡಿಸೆಂಬರ್ 5: ಭಾನುವಾರ

ಡಿಸೆಂಬರ್ 11: ಎರಡನೇ ಶನಿವಾರ

ಡಿಸೆಂಬರ್ 12: ಭಾನುವಾರ

ಡಿಸೆಂಬರ್ 18: ಯೂ ಸೋ ಸೋ ಥಾಮ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮೇಘಾಲಯದಲ್ಲಿ ಮಾತ್ರ ಬ್ಯಾಂಕ್‌ಗಳಿಗೆ ರಜಾ.

ಡಿಸೆಂಬರ್ 19: ಭಾನುವಾರ

ಡಿಸೆಂಬರ್ 24: ಕ್ರಿಸ್​ಮಸ್​ ಈವ್

ಡಿಸೆಂಬರ್ 25: ಕ್ರಿಸ್​ಮಸ್/ನಾಲ್ಕನೇ ಶನಿವಾರ

ಡಿಸೆಂಬರ್ 26: ಭಾನುವಾರ

ಡಿಸೆಂಬರ್ 27: ಕ್ರಿಸ್​ಮಸ್ ಆಚರಣೆ (ಐಜ್ವಾಲ್‌ನಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು)

ಡಿಸೆಂಬರ್ 30: ಶಿಲ್ಲಾಂಗ್‌ನಲ್ಲಿ ಬ್ಯಾಂಕ್‌ಗಳು ರಜಾ

ಡಿಸೆಂಬರ್ 31: ಹೊಸ ವರ್ಷದ ಮುನ್ನಾದಿನದಂದು ಐಜ್ವಾಲ್‌ನಲ್ಲಿ ಬ್ಯಾಂಕ್‌ಗಳು ರಜಾ

ಇದನ್ನೂ ಓದಿ: Fixed Deposits: ಎಸ್​ಬಿಐ, ಎಚ್​ಡಿಎಫ್​ಸಿ ಬ್ಯಾಂಕ್, ಆಕ್ಸಿಸ್​ ಬ್ಯಾಂಕ್, ಐಸಿಐಸಿಐ ಬ್ಯಾಂಕ್​ ಎಫ್​ಡಿ ದರಗಳು ಇಂತಿವೆ

ತಾಜಾ ಸುದ್ದಿ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ