AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗ್ರಾಹಕರಿಗೆ ಶುಭ ಸುದ್ದಿ, ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ

Commercial Gas Cylinder price in Bangalore: ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಸೋಮವಾರದಿಂದ (ಆಗಸ್ಟ್ 1) ₹ 36 ಕಡಿತವಾಗಿದೆ.

LPG Cylinder Price: ಗ್ರಾಹಕರಿಗೆ ಶುಭ ಸುದ್ದಿ, ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 01, 2022 | 9:44 AM

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ (LPG Commercial Cylinder Price) ಬೆಲೆಯಲ್ಲಿ ಸೋಮವಾರದಿಂದ (ಆಗಸ್ಟ್ 1) ₹ 36 ಕಡಿತವಾಗಿದೆ. ಬೆಂಗಳೂರಿನಲ್ಲಿ ದರ ಪರಿಷ್ಕರಣೆಗೆ ಮೊದಲು 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆಯು ₹ 2,100ಕ್ಕೆ ಮಾರಾಟವಾಗುತ್ತಿತ್ತು. ಇದೀಗ ₹ 36ರ ದರ ಕಡಿತದ ನಂತರ ₹ 2,063.50ಗೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು 1,976, ಕೊಲ್ಕತ್ತಾದಲ್ಲಿ ₹ 2,095.50, ಮುಂಬೈನಲ್ಲಿ ₹ 1,936.50 ಮತ್ತು ಚೆನ್ನೈನಲ್ಲಿ ₹ 2,141ಕ್ಕೆ ಮಾರಾಟವಾಗಲಿದೆ.

ಮೌಲ್ಯವರ್ಧಿತ ತೆರಿಗೆಯಲ್ಲಿ ವ್ಯತ್ಯಯ ಇರುವ ಕಾರಣ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಕಂಡುಬರುತ್ತದೆ.

ಬೆಲೆ ಏರಿಕೆ ಮತ್ತು ಹಣದುಬ್ಬರ ಖಂಡಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿವೆ. ಈ ನಡುವೆ ಕೇಂದ್ರ ಪೆಟ್ರೋಲಿಯಂ ಇಲಾಖೆಯು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಧಾರಣೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಕ್ರಮ ಮಹತ್ವ ಪಡೆದಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿತದಿಂದ ರೆಸ್ಟೊರೆಂಟ್​, ಹೊಟೆಲ್ ಮಾಲೀಕರಿಗೆ ಅನುಕೂಲವಾಗಲಿದೆ. ಆದರೆ ಗೃಹಬಳಕೆ ಸಿಲಿಂಡರ್​ ಬೆಲೆ ಕಡಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್​ಗಳ ಬೆಲೆಯೂ ಕಡಿಮೆಯಾಗಬಹುದು ಎಂಬ ನಿರೀಕ್ಷೆಯನ್ನು ಈ ಬೆಳವಣಿಗೆ ಹುಟ್ಟುಹಾಕಿದೆ.

ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಲ್​ಪಿಜಿ ಧಾರಣೆಯ ನಾಲ್ಕನೇ ಪರಿಷ್ಕರಣೆ ಇದು. ಕಳೆದ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹ 135 ಕಡಿಮೆ ಮಾಡಿತ್ತು.

Published On - 9:37 am, Mon, 1 August 22

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ