AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಬೆಂಗಳೂರಿನಲ್ಲಿ ಈಗೆಷ್ಟಿದೆ ಗ್ಯಾಸ್ ಬೆಲೆ?

Commercial LPG Cylinder Price Updates: ನಾಲ್ಕು ಮಹಾನಗರಿಗಳಲ್ಲಿ 19 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು 57.50 ರೂಗಳಷ್ಟು ಇಳಿಕೆ ಮಾಡಲಾಗಿದೆ. ಮುಂಬೈನಲ್ಲಿ 1,728 ರೂ ಬೆಲೆಗೆ ಇಳಿದಿದೆ. ಬೆಂಗಳೂರಿನಲ್ಲಿ 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ 1,857 ರೂ ಇದೆ. ಗೃಹಬಳಕೆಯದ್ದು ಸೇರಿದಂತೆ ವಿವಿಧ ಎಲ್​ಪಿಜಿ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ ಎಷ್ಟಿದೆ, ವಿವರ ಇಲ್ಲಿದೆ...

LPG Cylinder Price: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಬೆಂಗಳೂರಿನಲ್ಲಿ ಈಗೆಷ್ಟಿದೆ ಗ್ಯಾಸ್ ಬೆಲೆ?
19 ಕಿಲೋ ವಾಣಿಜ್ಯ ಎಲ್​ಪಿಜಿ ಸಿಲಿಂಡರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 17, 2023 | 10:39 AM

Share

ನವದೆಹಲಿ, ನವೆಂಬರ್ 17: ಆಯಿಲ್ ಮಾರ್ಕೆಟಿಂಗ್ ಕಂಪನಿಗಳು 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಬೆಲೆ (19 KG Commercial LPG Cylinder Price) ಇಳಿಕೆ ಮಾಡಿವೆ. ಆದರೆ, ಸದ್ಯಕ್ಕೆ ಎಲ್ಲಾ ನಗರಗಳಲ್ಲೂ ಬೆಲೆ ಇಳಿಕೆಯಾಗಿಲ್ಲ. ನಾಲ್ಕು ಮೆಟ್ರೋ ನಗರಗಳಲ್ಲಿ ಕಮರ್ಷಿಯಲ್ ಗ್ಯಾಸ್ ಬೆಲೆ ಪ್ರತೀ ಸಿಲಿಂಡರ್​ಗೆ 57.50 ರೂನಷ್ಟು ಕಡಿಮೆ ಆಗಿದೆ. ನವದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈ ಮಹಾನಗರಿಗಳಲ್ಲಿ ಸದ್ಯ ಈ ಬೆಲೆ ಇಳಿಕೆ ಆಗಿರುವುದನ್ನು ಪ್ರಕಟಿಸಲಾಗಿದೆ. ನವೆಂಬರ್ 16, ಅಂದರೆ ನಿನ್ನೆ ಗುರುವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ. ದೀಪಾವಳಿಗೆ ಮುನ್ನ ಸಿಲಿಂಡರ್​ಗೆ 101.5 ರೂನಷ್ಟು ಬೆಲೆ ಏರಿಕೆಯ ಬಿಸಿ ಕಂಡಿದ್ದ ಜನರಿಗೆ ಈಗ ತುಸು ನಿರಾಳ ತರಬಹುದು.

19 ಕಿಲೋ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಹೊಸ ಬೆಲೆ

  • ದೆಹಲಿ: 1,775.5 ರೂ
  • ಕೋಲ್ಕತಾ: 1,885.5 ರೂ
  • ಮುಂಬೈ: 1,728 ರೂ
  • ಚೆನ್ನೈ: 1,942 ರೂ

ಇದನ್ನೂ ಓದಿ: ಸಫಾರಿಯಲ್ಲಿ ಸರ್ಚ್​ನಿಂದ ಆದಾಯ; ಆ್ಯಪಲ್​ಗೆ ಒಂದು ವರ್ಷದಲ್ಲಿ ಗೂಗಲ್ ಕೊಡೋ ಹಣ ಎಷ್ಟು?

ಗೃಹಬಳಕೆ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ಇಲ್ಲ

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಇವತ್ತು ಪ್ರಕಟಿಸಿರುವ ಗ್ಯಾಸ್ ಬೆಲೆ ಇಳಿಕೆ ಕೇವಲ 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳದ್ದು ಮಾತ್ರ. ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ ಯಾವ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಡೊಮೆಸ್ಟಿಕ್ ಗ್ಯಾಸ್ ಬೆಲೆ 14.2 ಕಿಲೋ ಸಿಲಿಂಡರ್​ಗೆ 905.50 ರೂ ಇದೆ.

ಬೆಂಗಳೂರಿನಲ್ಲಿ ಎಲ್​ಪಿಜಿ ಬೆಲೆಗಳು ಪ್ರಸ್ತುತ ಎಷ್ಟಿವೆ?

  • ಗೃಹಬಳಕೆಯ 14.2 ಕಿಲೋ ಎಲ್​ಪಿಜಿ ಸಿಲಿಂಡರ್: 905.50 ರೂ
  • ಗೃಹಬಳಕೆಯ 5 ಕಿಲೋ ಎಲ್​ಪಿಜಿ ಸಿಲಿಂಡರ್: 336 ರೂ
  • 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್: 1,857 ರೂ
  • 47.5 ಕಿಲೋ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್: 4,638 ರೂ

ಇದನ್ನೂ ಓದಿ: ಜಿಯೋ ಫೈನಾನ್ಷಿಯಲ್ ಸರ್ವಿಸಸ್ ನಿರ್ದೇಶಕರಾಗಿ ಇಶಾ ಅಂಬಾನಿ ಸೇರಿದಂತೆ ಮೂವರ ನೇಮಕಕ್ಕೆ ಆರ್​ಬಿಐ ಸಮ್ಮತಿ

ಸತತ ಎರಡು ತಿಂಗಳ ಬೆಲೆ ಏರಿಕೆ ಬಿಸಿ

ತೈಲ ಮಾರುಕಟ್ಟೆ ಕಂಪನಿಗಳು ಪ್ರತೀ ತಿಂಗಳು 1ನೇ ತಾರೀಖು ವಿವಿಧ ಎಲ್​ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಸತತ ಎರಡು ತಿಂಗಳು ಕಮರ್ಷಿಯಲ್ ಗ್ಯಾಸ್ ಬೆಲೆಗಳನ್ನು ಹೆಚ್ಚಿಸಿದ್ದವು. ಅಕ್ಟೋಬರ್ 1ರಂದು 19 ಕಿಲೋ ಕಮರ್ಷಿಯಲ್ ಗ್ಯಾಸ್ ಬೆಲೆಗಳನ್ನು 209 ರೂಗಳಷ್ಟು ಹೆಚ್ಚಿಸಲಾಗಿತ್ತು. ನವೆಂಬರ್ 1ರಂದು ಸುಮಾರು ನೂರು ರೂಗಳಿಗೂ ಹೆಚ್ಚು ಬೆಲೆ ಏರಿಕೆ ಮಾಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ