AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder: ಎಲ್​ಪಿಜಿ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಪ್ರಮುಖ ನಗರಗಳಲ್ಲಿ ಬೆಲೆ ವಿವರ ಹೀಗಿದೆ

ಸರ್ಕಾರಿ ಸ್ವಾಮ್ಯದ ತೈಲ ಮಾರ್ಕೆಟಿಂಗ್ ಕಂಪೆನಿಗಳು ಎಲ್​ಪಿಜಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯಲ್ಲಿ ಆಗಸ್ಟ್ 17ನೇ ತಾರೀಕಿನಂದು 25 ರೂಪಾಯಿ ಬೆಲೆ ಏರಿಕೆ ಮಾಡಿವೆ.

LPG Cylinder: ಎಲ್​ಪಿಜಿ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಪ್ರಮುಖ ನಗರಗಳಲ್ಲಿ ಬೆಲೆ ವಿವರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Aug 17, 2021 | 11:38 PM

Share

ಸರ್ಕಾರಿ ಸ್ವಾಮ್ಯದ ತೈಲ ರೀಟೇಲರ್​ಗಳು ಎಲ್​ಪಿಜಿ ಅನಿಲ್ ಸಿಲಿಂಡರ್​ಗಳು ಅಥವಾ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು ಆಗಸ್ಟ್​ 17, 2021ರ ಮಂಗಳವಾರ ಏರಿಕೆ ಮಾಡಿವೆ. ಕಳೆದ ಬಾರಿ ಜುಲೈ 1ನೇ ತಾರೀಕಿನಂದು ಹೆಚ್ಚಳ ಮಾಡಲಾಗಿತ್ತು. ಆಗ 25.50 ರೂಪಾಯಿ ಏರಿಸಲಾಗಿತ್ತು. ಇದೀಗ ಬೆಲೆ ಹೆಚ್ಚಳದ ನಂತರ ನಾಲ್ಕು ಮೆಟ್ರೋ ನಗರಗಳಲ್ಲಿನ ಹಿಂದಿನ ದರ ಮತ್ತು ಈಗಿನ ದರದ ವಿವರ ಇಲ್ಲಿ ನೀಡಲಾಗಿದೆ. ನವದೆಹಲಿ: ಈಗಿನ ದರ- ರೂ. 859.5 ಮತ್ತು ಹಿಂದಿನ ದರ- ರೂ. 834.5 ಮುಂಬೈ; ಈಗಿನ ದರ- ರೂ. 859.5 ಮತ್ತು ಹಿಂದಿನ ದರ- ರೂ. 834.5 ಕೋಲ್ಕತ್ತಾ: ಈಗಿನ ದರ- ರೂ. 886 ಮತ್ತು ಹಿಂದಿನ ದರ- ರೂ. 861 ಚೆನ್ನೈ: ಈಗಿನ ದರ- ರೂ. 875.5 ಮತ್ತು ಹಿಂದಿನ ದರ- ರೂ. 850.5

ಎಲ್​ಪಿಜಿ ಸಿಲಿಂಡರ್​ಗಳ ದರವು 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಈ ಏರಿಕೆಯ ನಂತರ ದರವು 897.5 ರೂಪಾಯಿ ಆಗಿದೆ. ಸಾಮಾನ್ಯವಾಗಿ ತೈಲ ಮಾರ್ಕೆಟಿಂಗ್ ಕಂಪೆನಿಗಳು ಪ್ರತಿ ತಿಂಗಳ ಮೊದಲ ದಿನದಂದು ಬೆಲೆ ಏರಿಕೆ ಮಾಡುತ್ತವೆ. ಇಲ್ಲಿ ಉಲ್ಲೇಖ ಮಾಡಬೇಕಾದ ಅಂಶ ಏನೆಂದರೆ, ದೆಹಲಿಯಲ್ಲಿ ಈ ವರ್ಷದ ಆರಂಭದಲ್ಲಿ- ಅಂದರೆ 2021ರ ಶುರುವಿನಲ್ಲಿ ಸಿಲಿಂಡರ್ ಬೆಲೆ 694 ರೂಪಾಯಿ ಇತ್ತು. ಇದೀಗ ಎಂಟು ತಿಂಗಳಲ್ಲಿ 165 ರೂಪಾಯಿ ಹೆಚ್ಚಳ ಆಗಿದೆ. ಇನ್ನು ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ದರ 862.5 ಆಗುತ್ತದೆ.

ಅಡುಗೆ ಅನಿಲ ಸಿಲಿಂಡರ್ ದರವನ್ನು ನಿಗದಿ ಮಾಡುವಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಎಷ್ಟಿದೆ ಎಂಬುದನ್ನು ಹಾಗೂ ಡಾಲರ್ ವಿರುದ್ಧದ ರೂಪಾಯಿ ಮೌಲ್ಯವನ್ನು ಪ್ರಮುಖವಾಗಿ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿನ ಏರಿಕೆಯಿಂದಾಗಿ ಸಾಮಾನ್ಯ ಜನರ ಮೇಲೆ ದೊಡ್ಡ ಮಟ್ಟದ ಪರಿಣಾಮ ಆಗುತ್ತದೆ.

ಇದನ್ನೂ ಓದಿ: LPG Price Increase: 19 ಕೇಜಿ ತೂಕದ ಎಲ್​ಪಿಜಿ ಸಿಲಿಂಡರ್ 73.5 ರೂಪಾಯಿ ಏರಿಕೆ

(LPG Cooking Gas Cylinder Price Hiked By Rs 25 On August 17th)

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!