AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ

ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2021 | 12:50 PM

Share

ಎಲ್​ಪಿಜಿ (ಲಿಕ್ವಿಡ್​ ಪೆಟ್ರೋಲಿಯಂ ಗ್ಯಾಸ್​) ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಇಂದು ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿದ್ದು, ಅದರ ಅನ್ವಯ ಗೃಹ ಬಳಕೆ ಸಿಲಿಂಡರ್​ ಬೆಲೆ (ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ) 25 ರೂ.ಹೆಚ್ಚಾಗಿದೆ. ಅಂದರೆ ದೆಹಲಿಯಲ್ಲಿ ಇಂದಿನಿಂದ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್​ ಬೆಲೆ 834.50 ರೂ.ಆಗಿದೆ. ಹಾಗೇ, ರಾಷ್ಟ್ರರಾಜಧಾನಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್​ ಸಿಲಿಂಡರ್ ಬೆಲೆ 76 ರೂ. ಹೆಚ್ಚಾಗಿದ್ದು, ಇಂದಿನಿಂದ 1,550 ರೂ.ಆಗಿದೆ.

ಈ ಹಿಂದೆ 14.2 ಕೆಜಿ ಸಿಲಿಂಡರ್​​ ಬೆಲೆ ದೆಹಲಿ ಮತ್ತು ಮುಂಬೈಗಳಲ್ಲಿ  809 ರೂ.ಇತ್ತು. ಅದೀಗ  834.5 ರೂ. ಗೆ ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ. ಅದರಂತೆ ಇಂದು ಹೆಚ್ಚಾಗಿದ್ದು, ಅದರ ಅನ್ವಯ ಪ್ರಮುಖ ನಗರಗಳಲ್ಲಿ 14 ಕೆಜಿ ಗೃಹಬಳಕೆ ಗ್ಯಾಸ್ ಸಿಲಿಂಡರ್​ ದರ ಹೀಗಿದೆ.. ದೆಹಲಿ- 834.50 ರೂ. ಕೋಲ್ಕತ್ತ-861 ರೂ. ಮುಂಬೈ-834.50 ರೂ. ಚೆನ್ನೈ -850.50 ರೂ.

ಇನ್ನು 19 ಕೆಜಿ ಎಲ್​ಪಿಜಿ ಸಿಲಿಂಡರ್​ ಗ್ಯಾಸ್​ ಬೆಲೆ 76 ರೂಪಾಯಿ ಹೆಚ್ಚಾಗಿದ್ದು, ಮಹಾನಗರಗಳಲ್ಲೀಗ ಸಾವಿರ ರೂಪಾಯಿ ದಾಟಿದೆ. ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್​ ಬೆಲೆ 1473.50 ರೂ., ಕೋಲ್ಕತ್ತ, ಮುಂಬೈ, ಚೆನ್ನೈಗಳಲ್ಲಿ  ಕ್ರಮವಾಗಿ 1,544.50 ರೂ. 1,1422 ರೂ. ಮತ್ತು 1,603 ರೂ.ಆಗಿದೆ.

ಇದನ್ನೂ ಓದಿ: ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

LPG Cylinder Price Increased By Oil Marketing Companies

Published On - 12:39 pm, Thu, 1 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು