AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ

ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2021 | 12:50 PM

Share

ಎಲ್​ಪಿಜಿ (ಲಿಕ್ವಿಡ್​ ಪೆಟ್ರೋಲಿಯಂ ಗ್ಯಾಸ್​) ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಇಂದು ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿದ್ದು, ಅದರ ಅನ್ವಯ ಗೃಹ ಬಳಕೆ ಸಿಲಿಂಡರ್​ ಬೆಲೆ (ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ) 25 ರೂ.ಹೆಚ್ಚಾಗಿದೆ. ಅಂದರೆ ದೆಹಲಿಯಲ್ಲಿ ಇಂದಿನಿಂದ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್​ ಬೆಲೆ 834.50 ರೂ.ಆಗಿದೆ. ಹಾಗೇ, ರಾಷ್ಟ್ರರಾಜಧಾನಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್​ ಸಿಲಿಂಡರ್ ಬೆಲೆ 76 ರೂ. ಹೆಚ್ಚಾಗಿದ್ದು, ಇಂದಿನಿಂದ 1,550 ರೂ.ಆಗಿದೆ.

ಈ ಹಿಂದೆ 14.2 ಕೆಜಿ ಸಿಲಿಂಡರ್​​ ಬೆಲೆ ದೆಹಲಿ ಮತ್ತು ಮುಂಬೈಗಳಲ್ಲಿ  809 ರೂ.ಇತ್ತು. ಅದೀಗ  834.5 ರೂ. ಗೆ ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ. ಅದರಂತೆ ಇಂದು ಹೆಚ್ಚಾಗಿದ್ದು, ಅದರ ಅನ್ವಯ ಪ್ರಮುಖ ನಗರಗಳಲ್ಲಿ 14 ಕೆಜಿ ಗೃಹಬಳಕೆ ಗ್ಯಾಸ್ ಸಿಲಿಂಡರ್​ ದರ ಹೀಗಿದೆ.. ದೆಹಲಿ- 834.50 ರೂ. ಕೋಲ್ಕತ್ತ-861 ರೂ. ಮುಂಬೈ-834.50 ರೂ. ಚೆನ್ನೈ -850.50 ರೂ.

ಇನ್ನು 19 ಕೆಜಿ ಎಲ್​ಪಿಜಿ ಸಿಲಿಂಡರ್​ ಗ್ಯಾಸ್​ ಬೆಲೆ 76 ರೂಪಾಯಿ ಹೆಚ್ಚಾಗಿದ್ದು, ಮಹಾನಗರಗಳಲ್ಲೀಗ ಸಾವಿರ ರೂಪಾಯಿ ದಾಟಿದೆ. ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್​ ಬೆಲೆ 1473.50 ರೂ., ಕೋಲ್ಕತ್ತ, ಮುಂಬೈ, ಚೆನ್ನೈಗಳಲ್ಲಿ  ಕ್ರಮವಾಗಿ 1,544.50 ರೂ. 1,1422 ರೂ. ಮತ್ತು 1,603 ರೂ.ಆಗಿದೆ.

ಇದನ್ನೂ ಓದಿ: ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

LPG Cylinder Price Increased By Oil Marketing Companies

Published On - 12:39 pm, Thu, 1 July 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!