AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ

ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2021 | 12:50 PM

Share

ಎಲ್​ಪಿಜಿ (ಲಿಕ್ವಿಡ್​ ಪೆಟ್ರೋಲಿಯಂ ಗ್ಯಾಸ್​) ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಇಂದು ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿದ್ದು, ಅದರ ಅನ್ವಯ ಗೃಹ ಬಳಕೆ ಸಿಲಿಂಡರ್​ ಬೆಲೆ (ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ) 25 ರೂ.ಹೆಚ್ಚಾಗಿದೆ. ಅಂದರೆ ದೆಹಲಿಯಲ್ಲಿ ಇಂದಿನಿಂದ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್​ ಬೆಲೆ 834.50 ರೂ.ಆಗಿದೆ. ಹಾಗೇ, ರಾಷ್ಟ್ರರಾಜಧಾನಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್​ ಸಿಲಿಂಡರ್ ಬೆಲೆ 76 ರೂ. ಹೆಚ್ಚಾಗಿದ್ದು, ಇಂದಿನಿಂದ 1,550 ರೂ.ಆಗಿದೆ.

ಈ ಹಿಂದೆ 14.2 ಕೆಜಿ ಸಿಲಿಂಡರ್​​ ಬೆಲೆ ದೆಹಲಿ ಮತ್ತು ಮುಂಬೈಗಳಲ್ಲಿ  809 ರೂ.ಇತ್ತು. ಅದೀಗ  834.5 ರೂ. ಗೆ ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ. ಅದರಂತೆ ಇಂದು ಹೆಚ್ಚಾಗಿದ್ದು, ಅದರ ಅನ್ವಯ ಪ್ರಮುಖ ನಗರಗಳಲ್ಲಿ 14 ಕೆಜಿ ಗೃಹಬಳಕೆ ಗ್ಯಾಸ್ ಸಿಲಿಂಡರ್​ ದರ ಹೀಗಿದೆ.. ದೆಹಲಿ- 834.50 ರೂ. ಕೋಲ್ಕತ್ತ-861 ರೂ. ಮುಂಬೈ-834.50 ರೂ. ಚೆನ್ನೈ -850.50 ರೂ.

ಇನ್ನು 19 ಕೆಜಿ ಎಲ್​ಪಿಜಿ ಸಿಲಿಂಡರ್​ ಗ್ಯಾಸ್​ ಬೆಲೆ 76 ರೂಪಾಯಿ ಹೆಚ್ಚಾಗಿದ್ದು, ಮಹಾನಗರಗಳಲ್ಲೀಗ ಸಾವಿರ ರೂಪಾಯಿ ದಾಟಿದೆ. ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್​ ಬೆಲೆ 1473.50 ರೂ., ಕೋಲ್ಕತ್ತ, ಮುಂಬೈ, ಚೆನ್ನೈಗಳಲ್ಲಿ  ಕ್ರಮವಾಗಿ 1,544.50 ರೂ. 1,1422 ರೂ. ಮತ್ತು 1,603 ರೂ.ಆಗಿದೆ.

ಇದನ್ನೂ ಓದಿ: ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

LPG Cylinder Price Increased By Oil Marketing Companies

Published On - 12:39 pm, Thu, 1 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ