AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗ್ರಾಹಕರಿಗೆ ಗುಡ್​ ನ್ಯೂಸ್, ವಾಣಿಜ್ಯ ಬಳಕೆಯ ಎಲ್​ಪಿಜಿ​ ಸಿಲಿಂಡರ್​ ಬೆಲೆಯಲ್ಲಿ ಭಾರಿ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) 2023ರ ಮೇ 1 ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.

LPG Cylinder Price: ಗ್ರಾಹಕರಿಗೆ ಗುಡ್​ ನ್ಯೂಸ್, ವಾಣಿಜ್ಯ ಬಳಕೆಯ ಎಲ್​ಪಿಜಿ​ ಸಿಲಿಂಡರ್​ ಬೆಲೆಯಲ್ಲಿ ಭಾರಿ ಇಳಿಕೆ
ಸಿಲಿಂಡರ್
ನಯನಾ ರಾಜೀವ್
|

Updated on:May 01, 2023 | 8:30 AM

Share

ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) 2023ರ ಮೇ 1 ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್(LPG Cylinder) ಬೆಲೆಯನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಮೇ 1, 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ, ಅದರ ಬೆಲೆಗಳು ಇಡೀ ದೇಶದಲ್ಲಿ ಜಾರಿಗೆ ಬಂದಿವೆ. ಹೊಸ ವಾಣಿಜ್ಯ ಅನಿಲ ಬೆಲೆಗಳು ಸೋಮವಾರ, ಮೇ 1 ರಿಂದ ಜಾರಿಗೆ ಬಂದಿವೆ. ಈ ಬಾರಿ ಗ್ಯಾಸ್ ಸಿಲಿಂಡರ್ ಬೆಲೆ ಒಂದೇ ಬಾರಿಗೆ 171.50 ರೂಪಾಯಿ ಇಳಿಕೆಯಾಗಿದೆ.

ಪ್ರಸ್ತುತ 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ . ದೆಹಲಿಯಲ್ಲಿ ವಾಣಿಜ್ಯ LPG ಸಿಲಿಂಡರ್ 1856.50 ರೂ. ಇದರ ದರ ಕೋಲ್ಕತ್ತಾದಲ್ಲಿ ರೂ 1960.50, ಮುಂಬೈನಲ್ಲಿ ರೂ 1808.50 ಮತ್ತು ಚೆನ್ನೈನಲ್ಲಿ ರೂ 2021.50. ತೈಲ ಕಂಪನಿಗಳು ತಮ್ಮ ವೆಬ್‌ಸೈಟ್‌ನಲ್ಲಿ ಹೊಸ ದರಗಳನ್ನು ನವೀಕರಿಸಿವೆ.

ಏಪ್ರಿಲ್ 1, 2023 ರಂದು, ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು ಸಹ ಕಡಿತಗೊಳಿಸಲಾಯಿತು. ನಂತರ ಗ್ಯಾಸ್ ಸಿಲಿಂಡರ್ ಸುಮಾರು 92 ರೂ.ಗಳಷ್ಟು ಅಗ್ಗವಾಗಿದ್ದು, ಮಾರ್ಚ್‌ನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ.ಗಿಂತ ಹೆಚ್ಚಾಗಿದೆ.

ಕೋಲ್ಕತ್ತಾದಲ್ಲಿ ಪ್ರಸ್ತುತ ವಾಣಿಜ್ಯ ಅನಿಲ ಸಿಲಿಂಡರ್ (LPG) ಮತ್ತು ಕೈಗಾರಿಕಾ ಅನಿಲ ಸಿಲಿಂಡರ್ (RSP) ಬೆಲೆ 2,132 ರೂ. ಈ ಎರಡೂ ಬಗೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆ 171.50 ರೂಪಾಯಿ ಇಳಿಕೆಯಾಗಿದೆ. ಇದರ ಪರಿಣಾಮವಾಗಿ, ಕೋಲ್ಕತ್ತಾದಲ್ಲಿ ವಾಣಿಜ್ಯ ವಲಯದಲ್ಲಿ ಬಳಸಲಾಗುವ 19 ಕೆಜಿ ಎಲ್‌ಪಿಜಿ ಮತ್ತು ಆರ್‌ಎಸ್‌ಪಿ ಗ್ಯಾಸ್ ಸಿಲಿಂಡರ್‌ನ ಹೊಸ ಬೆಲೆ 1,960.50 ರೂ.ಗೆ ಇಳಿದಿದೆ. ಈ ಹೊಸ ಬೆಲೆಗಳು ಇಂದಿನಿಂದ ಅಂದರೆ ಮೇ 1 ರಿಂದ ಜಾರಿಗೆ ಬಂದಿವೆ.

01 ಎಪ್ರಿಲ್ 2023 ರಂದು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ ಇದಾದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2028 ರೂ., ಕೋಲ್ಕತ್ತಾದಲ್ಲಿ 2132 ರೂ., ಮುಂಬೈನಲ್ಲಿ 1980 ರೂ. ಮತ್ತು ಚೆನ್ನೈನಲ್ಲಿ 2192.50 ರೂ. ಈ ಹಿಂದೆ 1 ಮಾರ್ಚ್-2023 ರಂದು ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ.2119.50, ಕೋಲ್ಕತ್ತಾದಲ್ಲಿ ರೂ.2221.50, ಮುಂಬೈನಲ್ಲಿ ರೂ.2071.50 ಮತ್ತು ಚೆನ್ನೈನಲ್ಲಿ ರೂ.2268 ಆಗಿತ್ತು.

Published On - 8:23 am, Mon, 1 May 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ