AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG cylinder price: ಎಲ್​ಪಿಜಿ ಸಿಲಿಂಡರ್ ದರ ಇಳಿಕೆ; ಯಾವ ನಗರದಲ್ಲಿ ಎಷ್ಟು ಕಡಿಮೆಯಾಯ್ತು? ಇಲ್ಲಿ ನೋಡಿ

ಪ್ರಸಕ್ತ ಹಣಕಾಸು ವರ್ಷದ ಮೊದಲ ದಿನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರವನ್ನು (LPG cylinder rate) ಕಡಿಮೆ ಮಾಡಿವೆ. ಪ್ರತಿ ಸಿಲಿಂಡರ್ ದರ ಸುಮಾರು 92 ರೂ.ನಷ್ಟು ಕಡಿಮೆಯಾಗಿದೆ.

LPG cylinder price: ಎಲ್​ಪಿಜಿ ಸಿಲಿಂಡರ್ ದರ ಇಳಿಕೆ; ಯಾವ ನಗರದಲ್ಲಿ ಎಷ್ಟು ಕಡಿಮೆಯಾಯ್ತು? ಇಲ್ಲಿ ನೋಡಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 01, 2023 | 10:33 AM

Share

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ದಿನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರವನ್ನು (LPG cylinder rate) ಕಡಿಮೆ ಮಾಡಿವೆ. ಪ್ರತಿ ಸಿಲಿಂಡರ್ ದರ ಸುಮಾರು 92 ರೂ.ನಷ್ಟು ಇಳಿಕೆಯಾಗಿದೆ. ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಸಿಲಿಂಡರ್ ಬೆಲೆ ಕಳೆದ ತಿಂಗಳಿನಷ್ಟೇ ಅಸ್ತಿತ್ವದಲ್ಲಿದೆ. ಕಳೆದ ತಿಂಗಳು ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ದರವನ್ನು 50 ರೂ. ಹೆಚ್ಚಿಸಲಾಗಿತ್ತು. ಮಾರ್ಚ್​ ತಿಂಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 350 ರೂ.ನಷ್ಟು ಹೆಚ್ಚಿಸಲಾಗಿತ್ತು. ಇದೀಗ 92 ರೂ. ಇಳಿಕೆ ಮಾಡಲಾಗಿದೆ.

ಇಂಡೇನ್​ ಗ್ಯಾಸ್ ಸಿಲಿಂಡರ್ ದರ ಹೀಗಿದೆ (19 ಕೆಜಿ)

ದೆಹಲಿ – ₹ 2028 ಕೋಲ್ಕತ್ತ – ₹ 2132 ಮುಂಬೈ – ₹ 1980 ಚೆನ್ನೈ – ₹ 2192.50 ಚೆನ್ನೈ – ₹ 2192.50

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ

ಬೆಂಗಳೂರು – ₹1115.5 ಶ್ರೀನಗರ – ₹1,219 ದೆಹಲಿ – ₹1,103 ಪಟ್ನಾ – ₹1,202 ಲೇಹ್- ₹1,340 ಐಜ್ವಾಲ್ – ₹1255 ಅಂಡಮಾನ್ – ₹1179 ಅಹಮದಾಬಾದ್ – ₹1110 ಭೋಪಾಲ್ – ₹1118.5 ಜೈಪುರ – ₹1116.5 ಮುಂಬೈ – ₹1112.5 ಕನ್ಯಾಕುಮಾರಿ – ₹1187 ರಾಂಚಿ – ₹1160.5 ಶಿಮ್ಲಾ – ₹1147.5

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳಂತಲ್ಲದೆ, 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ಗಳ ದರ ಆಗಾಗ ಏರಿಳಿತಗೊಳ್ಳುತ್ತಲೇ ಇರುತ್ತವೆ.

ಸದ್ಯ ದೆಹಲಿಯಲ್ಲಿ ವಾಣಿಜ್ಯ ಬಳಕೆಯೆ ಎಲ್​ಪಿಜಿ ಸಿಲಿಂಡರದ ದರ 2,028 ರೂ. ಆಗಿದೆ. ಕಳೆದೊಂದು ವರ್ಷದಲ್ಲಿ ಈ ಸಿಲಿಂಡರ್ ದರ ದೆಹಲಿಯಲ್ಲಿ 225 ರೂ.ನಷ್ಟು ಇಳಿಕೆಯಾಗಿದೆ.

ಮತ್ತಷ್ಟು ಓದಿ: LPG Subsidy: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ

ಪ್ರಧಾನ ಮಂತ್ರಿ ಉಜ್ವಲ​ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿರುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸುವುದಾಗಿ ಕಳೆದ ವಾರವಷ್ಟೇ ಕೇಂದ್ರ ಸರ್ಕಾರ ಘೋಷಿಸಿತ್ತು. ಉಜ್ವಲ ಯೋಜನೆ ಅಡಿ 9.59 ಕೋಟಿ ಫಲಾನುಭವಿಗಳು ಇದ್ದಾರೆ. ಇವರು 14.2 ಕೆಜಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಪಡೆಯುತ್ತಾರೆ. ಫಲಾನುಭವಿಗಳಿಗೆ ಸರ್ಕಾರ ವರ್ಷಕ್ಕೆ 12 ಸಿಲಿಂಡರ್​ಗಳನ್ನು ತುಂಬಲು ಅನುಮತಿ ನೀಡಿದೆ. ಅಂದರೆ ಒಂದು ವರ್ಷದಲ್ಲಿ 12 ಅಡುಗೆ ಅನಿಲ ಸಿಲಿಂಡರ್​ಗಳ ಮೇಲೆ ಪ್ರತಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ನೀಡಿದಂತಾಗುತ್ತದೆ ಎಂದು ಸಚಿವ ಅನುರಾಗ್ ಠಾಕೂರ್ ಇತ್ತೀಚೆಗೆ ತಿಳಿಸಿದ್ದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ