LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 01, 2022 | 8:33 AM

ದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯು (Commercial LPG Cylinder Price) ಇಂದಿನಿಂದ (ಜೂನ್ 1) ₹ 135 ಕಡಿಮೆಯಾಗಲಿದೆ. ಕಳೆದ ಮೇ 1ರಂದು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ₹ 100 ಹೆಚ್ಚಿಸಲಾಗಿತ್ತು. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗುವುದರೊಂದಿಗೆ 19 ಕೆಜಿ ತೂಕದ ಸಿಲಿಂಡರ್ ಬೆಲೆಯು ದೆಹಲಿಯಲ್ಲಿ ಇದೀಗ ₹ 2219ಕ್ಕೆ ಮಾರಾಟವಾಗಲಿದೆ. ಈವರೆಗೆ ವಾಣಿಜ್ಯ ಸಿಲಿಂಡರ್ ಬೆಲೆಯು ₹ 2354 ಇತ್ತು. ಅದೇ ರೀತಿ ಮುಂಬೈನಲ್ಲಿ ₹ 2306ಕ್ಕೆ ಬದಲಾಗಿದೆ ಮುನ್ನು ಮುಂದೆ ₹ 2171.50ಗೆ ವಾಣಿಜ್ಯ ಬಳಕೆ ಸಿಲಿಂಡರ್ ಸಿಗಲಿದೆ. ಕೊಲ್ಕತ್ತಾದಲ್ಲಿ ₹ 2322, ಚೆನ್ನೈನಲ್ಲಿ ₹ 2507ಕ್ಕೆ ವಾಣಿಜ್ಯ ಬಳಕೆ ಸಿಲಿಂಡರ್ ಮಾರಾಟವಾಗುತ್ತಿದೆ.

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು. ಅದಕ್ಕೂ ಮೊದಲು ಮಾರ್ಚ್ 1ರಂದು ₹ 105 ಹೆಚ್ಚಿಸಲಾಗಿತ್ತು.

ಈ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳು ದೇಶದ ವಿವಿಧೆಡೆ 5,000 ಎಲ್​ಪಿಜಿ ಪಂಚಾಯಿತಿಗಳನ್ನು ಆಯೋಜಿಸುವ ಮೂಲಕ ಉಜ್ವಲ ದಿವಸ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಎಲ್​ಪಿಜಿ ಬಳಕೆಯ ಸುಸ್ಥಿರ ಮತ್ತು ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಹೆಚ್ಚು ಜನರು ಎಲ್​ಪಿಜಿ ಬಳಸುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಬಡವರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವುದು ಮತ್ತು ಸಮಾಜದ ಎಲ್ಲ ವರ್ಗಗಳಿಗೆ ಆರ್ಥಿಕ ಉನ್ನತಿಯ ಅನುಕೂಲಗಳನ್ನು ಕಲ್ಪಿಸಿಕೊಡುವುದು ‘ಪ್ರಧಾನ ಮಂತ್ರಿ ಉಜ್ವಲ ಯೋಜನಾ’ದ ಉದ್ದೇಶವಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 1 June 22

ತಾಜಾ ಸುದ್ದಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ