AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 01, 2022 | 8:33 AM

Share

ದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯು (Commercial LPG Cylinder Price) ಇಂದಿನಿಂದ (ಜೂನ್ 1) ₹ 135 ಕಡಿಮೆಯಾಗಲಿದೆ. ಕಳೆದ ಮೇ 1ರಂದು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ₹ 100 ಹೆಚ್ಚಿಸಲಾಗಿತ್ತು. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗುವುದರೊಂದಿಗೆ 19 ಕೆಜಿ ತೂಕದ ಸಿಲಿಂಡರ್ ಬೆಲೆಯು ದೆಹಲಿಯಲ್ಲಿ ಇದೀಗ ₹ 2219ಕ್ಕೆ ಮಾರಾಟವಾಗಲಿದೆ. ಈವರೆಗೆ ವಾಣಿಜ್ಯ ಸಿಲಿಂಡರ್ ಬೆಲೆಯು ₹ 2354 ಇತ್ತು. ಅದೇ ರೀತಿ ಮುಂಬೈನಲ್ಲಿ ₹ 2306ಕ್ಕೆ ಬದಲಾಗಿದೆ ಮುನ್ನು ಮುಂದೆ ₹ 2171.50ಗೆ ವಾಣಿಜ್ಯ ಬಳಕೆ ಸಿಲಿಂಡರ್ ಸಿಗಲಿದೆ. ಕೊಲ್ಕತ್ತಾದಲ್ಲಿ ₹ 2322, ಚೆನ್ನೈನಲ್ಲಿ ₹ 2507ಕ್ಕೆ ವಾಣಿಜ್ಯ ಬಳಕೆ ಸಿಲಿಂಡರ್ ಮಾರಾಟವಾಗುತ್ತಿದೆ.

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು. ಅದಕ್ಕೂ ಮೊದಲು ಮಾರ್ಚ್ 1ರಂದು ₹ 105 ಹೆಚ್ಚಿಸಲಾಗಿತ್ತು.

ಈ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳು ದೇಶದ ವಿವಿಧೆಡೆ 5,000 ಎಲ್​ಪಿಜಿ ಪಂಚಾಯಿತಿಗಳನ್ನು ಆಯೋಜಿಸುವ ಮೂಲಕ ಉಜ್ವಲ ದಿವಸ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಎಲ್​ಪಿಜಿ ಬಳಕೆಯ ಸುಸ್ಥಿರ ಮತ್ತು ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಹೆಚ್ಚು ಜನರು ಎಲ್​ಪಿಜಿ ಬಳಸುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಬಡವರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವುದು ಮತ್ತು ಸಮಾಜದ ಎಲ್ಲ ವರ್ಗಗಳಿಗೆ ಆರ್ಥಿಕ ಉನ್ನತಿಯ ಅನುಕೂಲಗಳನ್ನು ಕಲ್ಪಿಸಿಕೊಡುವುದು ‘ಪ್ರಧಾನ ಮಂತ್ರಿ ಉಜ್ವಲ ಯೋಜನಾ’ದ ಉದ್ದೇಶವಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 1 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ