AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು.

LPG Price: ವಾಣಿಜ್ಯ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 01, 2022 | 8:33 AM

ದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯು (Commercial LPG Cylinder Price) ಇಂದಿನಿಂದ (ಜೂನ್ 1) ₹ 135 ಕಡಿಮೆಯಾಗಲಿದೆ. ಕಳೆದ ಮೇ 1ರಂದು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ₹ 100 ಹೆಚ್ಚಿಸಲಾಗಿತ್ತು. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗುವುದರೊಂದಿಗೆ 19 ಕೆಜಿ ತೂಕದ ಸಿಲಿಂಡರ್ ಬೆಲೆಯು ದೆಹಲಿಯಲ್ಲಿ ಇದೀಗ ₹ 2219ಕ್ಕೆ ಮಾರಾಟವಾಗಲಿದೆ. ಈವರೆಗೆ ವಾಣಿಜ್ಯ ಸಿಲಿಂಡರ್ ಬೆಲೆಯು ₹ 2354 ಇತ್ತು. ಅದೇ ರೀತಿ ಮುಂಬೈನಲ್ಲಿ ₹ 2306ಕ್ಕೆ ಬದಲಾಗಿದೆ ಮುನ್ನು ಮುಂದೆ ₹ 2171.50ಗೆ ವಾಣಿಜ್ಯ ಬಳಕೆ ಸಿಲಿಂಡರ್ ಸಿಗಲಿದೆ. ಕೊಲ್ಕತ್ತಾದಲ್ಲಿ ₹ 2322, ಚೆನ್ನೈನಲ್ಲಿ ₹ 2507ಕ್ಕೆ ವಾಣಿಜ್ಯ ಬಳಕೆ ಸಿಲಿಂಡರ್ ಮಾರಾಟವಾಗುತ್ತಿದೆ.

19 ಕೆಜಿ ತೂಗುವ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆಯನ್ನು ಏಪ್ರಿಲ್ 1ರಂದು ಪೆಟ್ರೋಲಿಯಂ ಕಂಪನಿಗಳು ₹ 250 ಹೆಚ್ಚಿಸಿತ್ತು. ಅದಕ್ಕೂ ಮೊದಲು ಮಾರ್ಚ್ 1ರಂದು ₹ 105 ಹೆಚ್ಚಿಸಲಾಗಿತ್ತು.

ಈ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳು ದೇಶದ ವಿವಿಧೆಡೆ 5,000 ಎಲ್​ಪಿಜಿ ಪಂಚಾಯಿತಿಗಳನ್ನು ಆಯೋಜಿಸುವ ಮೂಲಕ ಉಜ್ವಲ ದಿವಸ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಎಲ್​ಪಿಜಿ ಬಳಕೆಯ ಸುಸ್ಥಿರ ಮತ್ತು ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಹೆಚ್ಚು ಜನರು ಎಲ್​ಪಿಜಿ ಬಳಸುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಬಡವರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವುದು ಮತ್ತು ಸಮಾಜದ ಎಲ್ಲ ವರ್ಗಗಳಿಗೆ ಆರ್ಥಿಕ ಉನ್ನತಿಯ ಅನುಕೂಲಗಳನ್ನು ಕಲ್ಪಿಸಿಕೊಡುವುದು ‘ಪ್ರಧಾನ ಮಂತ್ರಿ ಉಜ್ವಲ ಯೋಜನಾ’ದ ಉದ್ದೇಶವಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 1 June 22

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ