LPG Cylinder Price : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ.

LPG Cylinder Price : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ
ಸಿಲಿಂಡರ್
Follow us
|

Updated on:Sep 01, 2024 | 7:28 AM

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು.

ಈಗ ಸೆಪ್ಟೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಹೊಸ ದರಗಳ ಪ್ರಕಾರ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 39 ರೂ. ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1691.50 ರೂ. IOCL ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.

ಮುಂಬೈನಲ್ಲಿ ಇದರ ಬೆಲೆ 1644 ರೂ. ಈ ಮೊದಲು ಈ ಸಿಲಿಂಡರ್ ಮುಂಬೈನಲ್ಲಿ 1605 ರೂ.ಗೆ ಲಭ್ಯವಿತ್ತು. ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಬೆಲೆ 1764.50 ರೂ.ನಿಂದ 1802.50 ರೂ.ಗೆ ಏರಿಕೆಯಾಗಿದೆ. ಆದರೆ ಚೆನ್ನೈನಲ್ಲಿ ಈ ಸಿಲಿಂಡರ್ ಈಗ 1855 ರೂ.ಗೆ ಲಭ್ಯವಾಗಲಿದೆ. ಈ ಹಿಂದೆ ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 1817 ರೂ.ಗೆ ಮಾರಾಟವಾಗಿತ್ತು.

ಆಗಸ್ಟ್‌ನಲ್ಲಿ ಎಲ್‌ಪಿಜಿ ಗ್ಯಾಸ್‌ನ ಬೆಲೆಯನ್ನು ಹೆಚ್ಚಿಸಲಾಗಿತ್ತು  ಆಗ ಕಂಪನಿಗಳು 8.50 ರೂಪಾಯಿ ಏರಿಕೆ ಮಾಡಿದ್ದವು ಆದರೆ ಈ ಬಾರಿ ನೇರವಾಗಿ 39 ರೂಪಾಯಿ ಹೆಚ್ಚಿಸಿವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:19 am, Sun, 1 September 24

ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ