Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಗಮನಾರ್ಹ ಇಳಿಕೆ

ವಾಣಿಜ್ಯ ಸಿಲಿಂಡರ್​ ಬೆಲೆಯು ₹ 100ರಷ್ಟು ಕಡಿಮೆಯಾಗಿದೆ. ಆದರೆ ಗೃಹಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

LPG Cylinder Price: ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಗಮನಾರ್ಹ ಇಳಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 01, 2022 | 9:55 AM

ದೆಹಲಿ: ಗಣೇಶನ ಹಬ್ಬ ಈ ಸಲ ಚೆನ್ನಾಗಿ ಬಂದಿದೆ. ವಿನಾಯಕ ಚತುರ್ಥಿಯಂದೇ ಬಿಡುಗಡೆಯಾದ ಆಂಕಿಅಂಶಗಳು ಭಾರತದ ಜಿಡಿಪಿಯ ಬಗ್ಗೆ ಶುಭಸುದ್ದಿ ಕೊಟ್ಟಿದೆ. ಹಬ್ಬದ ಮಾರನೇ ದಿನ, ಅಂದರೆ ಗುರುವಾರ (ಸೆಪ್ಟೆಂಬರ್ 1) 19 ಕೆಜಿ ತೂಕದ ಅಡುಗೆ ಅನಿಲದ ವಾಣಿಜ್ಯ ಸಿಲಿಂಡರ್​ಗಳ (Commercial Liquified Petroleum Gas – LPG) ಬೆಲೆ ಇಳಿಸುವ ನಿರ್ಧಾರ ಹೊರಬಿದ್ದಿದೆ. ವಾಣಿಜ್ಯ ಸಿಲಿಂಡರ್​ ಬೆಲೆಯು ₹ 100ರಷ್ಟು ಕಡಿಮೆಯಾಗಿದೆ. ಆದರೆ ಗೃಹಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆಯು ₹ 91.50ರಷ್ಟು ಕಡಿಮೆಯಾಗಿದ್ದು, ₹ 1,885ಕ್ಕೆ ಮಾರಾಟವಾಗುತ್ತಿದೆ. ಮೊದಲು ಇದು ₹ 1,976.50 ಇತ್ತು. ಕಲ್ಕತ್ತಾದಲ್ಲಿ ಸಿಲಿಂಡರ್ ಬೆಲೆಯು ₹ 100 ಕಡಿಮೆಯಾಗಿದೆ. ಪ್ರಸ್ತುತ ₹ 1,995.50ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ₹ 96 ಕಡಿಮೆಯಾಗಿದ್ದು, ₹ 2,045ಕ್ಕೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಸ್ತುತ ₹ 1,685ಕ್ಕೆ ಸಿಲಿಂಡರ್ ಮಾರಾಟವಾಗುತ್ತಿದೆ ಎಂದು ತೈಲ ಮಾರಾಟ ಕಂಪನಿಗಳ ವೆಬ್​ಸೈಟ್​ಗಳ ಮಾಹಿತಿ ತಿಳಿಸುತ್ತದೆ.

ಪ್ರತಿ ತಿಂಗಳ ಮೊದಲ ದಿನ ಕೆಲ ನಿಯಮಗಳಲ್ಲಿ ಮಾರ್ಪಾಡಾಗುವುದು ವಾಡಿಕೆ. ಎಲ್​ಪಿಜಿ ಮತ್ತು ಇಂಧನ ದರಗಳ ಪರಿಷ್ಕರಣೆಯನ್ನೂ ತಿಂಗಳ ಮೊದಲ ದಿನದಿಂದಲೇ ಜಾರಿಗೆ ತರಲಾಗುತ್ತಿದೆ. ಆಗಸ್ಟ್​ 1ರಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹ 36ರಷ್ಟು ಕಡಿಮೆ ಮಾಡಲಾಗಿತ್ತು. ಕಳೆದ ತಿಂಗಳೂ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಪರಿಷ್ಕರಣೆ ಆಗಿರಲಿಲ್ಲ.

ಇದು ವಾಣಿಜ್ಯ ಸಿಲಿಂಡರ್​ ಬೆಲೆಗಳಲ್ಲಿ ಸತತ 5ನೇ ಕಡಿತವಾಗಿದೆ. ಜುಲೈ 6ರಂದು ₹ 50ರಷ್ಟು ಬೆಲೆ ಹೆಚ್ಚಿಸಲಾಗಿತ್ತು. ನಂತರದ ದಿನಗಳಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆ ಹೆಚ್ಚಾಗಿರಲಿಲ್ಲ.

Published On - 9:50 am, Thu, 1 September 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!