AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಗಮನಾರ್ಹ ಇಳಿಕೆ

ವಾಣಿಜ್ಯ ಸಿಲಿಂಡರ್​ ಬೆಲೆಯು ₹ 100ರಷ್ಟು ಕಡಿಮೆಯಾಗಿದೆ. ಆದರೆ ಗೃಹಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

LPG Cylinder Price: ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಗಮನಾರ್ಹ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 01, 2022 | 9:55 AM

Share

ದೆಹಲಿ: ಗಣೇಶನ ಹಬ್ಬ ಈ ಸಲ ಚೆನ್ನಾಗಿ ಬಂದಿದೆ. ವಿನಾಯಕ ಚತುರ್ಥಿಯಂದೇ ಬಿಡುಗಡೆಯಾದ ಆಂಕಿಅಂಶಗಳು ಭಾರತದ ಜಿಡಿಪಿಯ ಬಗ್ಗೆ ಶುಭಸುದ್ದಿ ಕೊಟ್ಟಿದೆ. ಹಬ್ಬದ ಮಾರನೇ ದಿನ, ಅಂದರೆ ಗುರುವಾರ (ಸೆಪ್ಟೆಂಬರ್ 1) 19 ಕೆಜಿ ತೂಕದ ಅಡುಗೆ ಅನಿಲದ ವಾಣಿಜ್ಯ ಸಿಲಿಂಡರ್​ಗಳ (Commercial Liquified Petroleum Gas – LPG) ಬೆಲೆ ಇಳಿಸುವ ನಿರ್ಧಾರ ಹೊರಬಿದ್ದಿದೆ. ವಾಣಿಜ್ಯ ಸಿಲಿಂಡರ್​ ಬೆಲೆಯು ₹ 100ರಷ್ಟು ಕಡಿಮೆಯಾಗಿದೆ. ಆದರೆ ಗೃಹಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆಯು ₹ 91.50ರಷ್ಟು ಕಡಿಮೆಯಾಗಿದ್ದು, ₹ 1,885ಕ್ಕೆ ಮಾರಾಟವಾಗುತ್ತಿದೆ. ಮೊದಲು ಇದು ₹ 1,976.50 ಇತ್ತು. ಕಲ್ಕತ್ತಾದಲ್ಲಿ ಸಿಲಿಂಡರ್ ಬೆಲೆಯು ₹ 100 ಕಡಿಮೆಯಾಗಿದೆ. ಪ್ರಸ್ತುತ ₹ 1,995.50ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ₹ 96 ಕಡಿಮೆಯಾಗಿದ್ದು, ₹ 2,045ಕ್ಕೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಸ್ತುತ ₹ 1,685ಕ್ಕೆ ಸಿಲಿಂಡರ್ ಮಾರಾಟವಾಗುತ್ತಿದೆ ಎಂದು ತೈಲ ಮಾರಾಟ ಕಂಪನಿಗಳ ವೆಬ್​ಸೈಟ್​ಗಳ ಮಾಹಿತಿ ತಿಳಿಸುತ್ತದೆ.

ಪ್ರತಿ ತಿಂಗಳ ಮೊದಲ ದಿನ ಕೆಲ ನಿಯಮಗಳಲ್ಲಿ ಮಾರ್ಪಾಡಾಗುವುದು ವಾಡಿಕೆ. ಎಲ್​ಪಿಜಿ ಮತ್ತು ಇಂಧನ ದರಗಳ ಪರಿಷ್ಕರಣೆಯನ್ನೂ ತಿಂಗಳ ಮೊದಲ ದಿನದಿಂದಲೇ ಜಾರಿಗೆ ತರಲಾಗುತ್ತಿದೆ. ಆಗಸ್ಟ್​ 1ರಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹ 36ರಷ್ಟು ಕಡಿಮೆ ಮಾಡಲಾಗಿತ್ತು. ಕಳೆದ ತಿಂಗಳೂ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಪರಿಷ್ಕರಣೆ ಆಗಿರಲಿಲ್ಲ.

ಇದು ವಾಣಿಜ್ಯ ಸಿಲಿಂಡರ್​ ಬೆಲೆಗಳಲ್ಲಿ ಸತತ 5ನೇ ಕಡಿತವಾಗಿದೆ. ಜುಲೈ 6ರಂದು ₹ 50ರಷ್ಟು ಬೆಲೆ ಹೆಚ್ಚಿಸಲಾಗಿತ್ತು. ನಂತರದ ದಿನಗಳಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆ ಹೆಚ್ಚಾಗಿರಲಿಲ್ಲ.

Published On - 9:50 am, Thu, 1 September 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ