AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಅಡುಗೆ ಮಾಡಿಕೊಳ್ಳಿ, ತಿನ್ನಿ, ಕೆಲಸ ಮಾಡಿ: ಎಲ್​ಪಿಜಿ ಸಮಸ್ಯೆಗೆ ಎಚ್​ಸಿಎಲ್​ನಿಂದ ವರ್ಕ್ ಫ್ರಂ ಹೋಮ್ ಪರಿಹಾರ

LPG supply crisis, HCLTech offers Work from Home for its employees: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಮತ್ತು ಅನಿಲದ ಅಭಾವ ಜಾಗತಿಕವಾಗಿ ಕಾಡುತ್ತಿದೆ. ಎಲ್​ಪಿಜಿ ಸಿಗುವುದು ಬಹಳ ಕಷ್ಟವಾಗಿದೆ. ಹಲವು ಹೋಟೆಲ್, ರೆಸ್ಟೋರೆಂಟ್​ಗಳು ಗ್ಯಾಸ್ ಇಲ್ಲದ ಕಾರಣ ಬಾಗಿಲು ಮುಚ್ಚುವ ಪರಿಸ್ಥಿತಿಯಲ್ಲಿವೆ. ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೂ ಎಲ್​ಪಿಜಿ ಕೊರತೆ ಇದೆ. ಹೀಗಾಗಿ, ಎಚ್​ಸಿಎಲ್​ಟೆಕ್ ಕಂಪನಿಯು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಕೊಟ್ಟಿದೆ.

ಮನೆಯಲ್ಲೇ ಅಡುಗೆ ಮಾಡಿಕೊಳ್ಳಿ, ತಿನ್ನಿ, ಕೆಲಸ ಮಾಡಿ: ಎಲ್​ಪಿಜಿ ಸಮಸ್ಯೆಗೆ ಎಚ್​ಸಿಎಲ್​ನಿಂದ ವರ್ಕ್ ಫ್ರಂ ಹೋಮ್ ಪರಿಹಾರ
ಎಚ್​ಸಿಎಲ್​ಟೆಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 12, 2026 | 3:30 PM

Share

ನವದೆಹಲಿ, ಮಾರ್ಚ್ 12: ಅಡುಗೆ ಅನಿಲದ ಕೊರತೆ ಭಾರತಾದ್ಯಂತ ಕಾಡುತ್ತಿದೆ. ಅದರಲ್ಲೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು (LPG cylinder) ದುಬಾರಿಯಾಗಿರುವುದು ಮಾತ್ರವಲ್ಲ, ಅವು ಸಿಗುವುದೇ ದುಸ್ತರವಾಗಿದೆ. ಬೆಂಗಳೂರಿನ ಅನೇಕ ಹೋಟೆಲ್​ಗಳು ಈ ಬಿಕ್ಕಟ್ಟು ಬಗೆಹರಿಯುವವರೆಗೂ ಬಾಗಿಲು ಬಂದ್ ಮಾಡಲು ನಿರ್ಧರಿಸಿವೆ. ಕಾರ್ಪೊರೇಟ್ ಸಂಸ್ಥೆಗಳೂ ಕೂಡ ಈ ಬಿಸಿ ತಾಕಿಸಿಕೊಂಡಿವೆ. ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗುವುದು ಕಷ್ಟವಾಗಿದೆ. ಹೀಗಾಗಿ, ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ಕಲ್ಪಿಸಲು ಯೋಜಿಸಿವೆ. ವರದಿಗಳ ಪ್ರಕಾರ ಎಚ್​ಸಿಎಲ್​ಟೆಕ್ (HCLTech) ಕಂಪನಿಯು ಎರಡು ದಿನದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಕೊಟ್ಟಿವೆ.

ಇಂದು ಮತ್ತು ನಾಳೆ, ಮಾರ್ಚ್ 12 ಮತ್ತು 13ರಂದು ಎಚ್​ಸಿಎಲ್​ಟೆಕ್​ನ ಚೆನ್ನೈ ಕಚೇರಿಯಲ್ಲಿರುವ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ ಎಂದು ಮಿಂಟ್ ಪತ್ರಿಕೆಯ ವರದಿ ಮಾಡಿದೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಎಚ್​ಸಿಎಲ್​ಟೆಕ್​ನಂತಹ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ಕೊಟ್ಟರೆ, ಇತರ ಹಲವು ಕಾರ್ಪೊರೇಟ್ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸೇಫ್ಟಿ ಪ್ರೋಟೋಕಾಲ್​ಗಳನ್ನು ಅಳವಡಿಸಿವೆ. ಇಂಟರ್ನಲ್ ವಾರ್ ರೂಮ್​ಗಳನ್ನು ಸ್ಥಾಪಿಸಿ ಪರಿಸ್ಥಿತಿಯನ್ನು ಲೈವ್ ಆಗಿ ನಿಭಾಯಿಸುವ ಪ್ರಯತ್ನ ಮಾಡುತ್ತಿವೆ.

ಇನ್​ಫೋಸಿಸ್ ಸಂಸ್ಥೆ ಬೆಂಗಳೂರಿನಲ್ಲಿರುವ ತಮ್ಮ ಕಚೇರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಎಲ್​ಪಿಜಿ ಕೊರತೆಯಿಂದ ಕೆಫೆಟೇರಿಯಾದಲ್ಲಿ ಆಹಾರದ ಕೊರತೆ ಇರುವ ವಿಚಾರವನ್ನು ಮನದಟ್ಟು ಮಾಡಿದೆ. ಲೈವ್ ಫೂಡ್ ಕೌಂಟರ್​ಗಳನ್ನು ನಿಲ್ಲಿಸಲಾಗಿದೆ. ಮನೆಯಿಂದಲೇ ಅಡುಗೆ ಮಾಡಿಕೊಂಡು ಪಾರ್ಸಲ್ ತರಬೇಕೆಂದು ಕಂಪನಿ ತಿಳಿಸಿದೆ. ಚೆನ್ನೈನಲ್ಲಿರುವ ಇನ್ಫೋಸಿಸ್ ಕಚೇರಿಯ ಉದ್ಯೋಗಿಗಳಿಗೂ ಇದೇ ಸಲಹೆ ನೀಡಲಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಯುದ್ಧ ನಿಲ್ಲಿಸಲು ಇರಾನ್​ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ

ಅಡುಗೆ ಅನಿಲದ ಪೂರೈಕೆಯಲ್ಲಿ ಸದ್ಯ ಯಾವ ಸಮಸ್ಯೆಯೂ ಇಲ್ಲ ಎಂದು ಸರ್ಕಾರ ಹೇಳಿದರೂ ದೇಶದ ಹೆಚ್ಚಿನ ಕಡೆ ಎಲ್​ಪಿಜಿ ಸಿಲಿಂಡರ್ ಸರಬರಾಜಿಗೆ ಧಕ್ಕೆಯಾಗಿದೆ. ಕಮರ್ಷಿಯಲ್ ಗ್ಯಾಸ್ ಮತ್ತು ಗೃಹಬಳಕೆ ಎಲ್​ಪಿಜಿ ಎರಡೂ ಕೂಡ ಅಡುಗೆ ಅನಿಲಗಳೇ ಆಗಿವೆ. ಗೃಹಬಳಕೆ ಗ್ಯಾಸ್ ಕೂಡ ಸಿಗುವುದು ದುಸ್ತರವೆನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ