AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Users: ಎಲ್​ಪಿಜಿ ಗ್ರಾಹಕರಿಗೆ ಉಚಿತ 50 ಲಕ್ಷ ವಿಮೆ; ಕ್ಲೈಮ್ ಮಾಡುವುದು ಹೇಗೆ?

50 Lakh Accident Insurance Coverage: ಎಲ್​ಪಿಜಿ ಕನೆಕ್ಷನ್ ಪಡೆಯುವ ಎಲ್ಲಾ ಗ್ರಾಹಕರಿಗೂ ಆ ಪೆಟ್ರೋಲಿಯಂ ಕಂಪನಿ ಉಚಿತವಾಗಿ 50 ಲಕ್ಷ ರೂ ಮೊತ್ತದ ಆ್ಯಕ್ಸಿಡೆಂಟ್ ಇನ್ಷೂರೆನ್ಸ್ ಸೌಲಭ್ಯ ಒದಗಿಸುತ್ತದೆ. ಇನ್ಷೂರೆನ್ಸ್ ಕವರೇಜ್​ಗಾಗಿ ಪೆಟ್ರೋಲಿಯಂ ಕಂಪನಿ ಯಾವುದಾದರೂ ಇನ್ಷೂರೆನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿರುತ್ತದೆ. ಎಲ್​​ಪಿಜಿ ಗ್ಯಾಸ್ ದುರಂತ ಘಟನೆಯಲ್ಲಿ ಆಸ್ತಿಗೆ ಧಕ್ಕೆಯಾದರೆ 2 ಲಕ್ಷ ರೂವರೆಗೆ ಕ್ಲೈಮ್ ಮಾಡಲು ಸಾಧ್ಯ. ಸಾವಾದರೆ ಒಬ್ಬರಿಗೆ 6 ಲಕ್ಷ ಪರಿಹಾರ ಸಿಗುತ್ತದೆ.

LPG Users: ಎಲ್​ಪಿಜಿ ಗ್ರಾಹಕರಿಗೆ ಉಚಿತ 50 ಲಕ್ಷ ವಿಮೆ; ಕ್ಲೈಮ್ ಮಾಡುವುದು ಹೇಗೆ?
ಎಲ್​ಪಿಜಿ ಸಿಲಿಂಡರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 05, 2024 | 2:30 PM

Share

ನವದೆಹಲಿ, ಜನವರಿ 5: ಎಲ್​ಪಿಜಿ ಸಿಲಂಡರ್ ಸ್ಪೋಟಗೊಂಡ ಹಲವು ಪ್ರಕರಣಗಳು ದೇಶಾದ್ಯಂತ ಸಂಭವಿಸುತ್ತಲೇ ಇರುತ್ತವೆ. ಸಾಕಷ್ಟು ಆಸ್ತಿಪಾಸ್ತಿ ನಷ್ಟ, ಜೀವಹಾನಿ ಆಗುವುದುಂಟು. ಹೀಗಾಗಿ, ಇಂಥದ್ದಕ್ಕೆ ಇನ್ಷೂರೆನ್ಸ್ ಕವರೇಜ್ ಇರುವುದು ಬಹಳ ಮುಖ್ಯ. ಪೆಟ್ರೋಲಿಯಂ ಕಂಪನಿಗಳೇ ತಮ್ಮ ಎಲ್ಲಾ ಎಲ್​ಪಿಜಿ ಗ್ರಾಹಕರಿಗೂ ಉಚಿತವಾಗಿ ಅಪಘಾತ ವಿಮಾ ಕವರೇಜ್ (free insurance coverage) ಸೌಲಭ್ಯ ಒದಗಿಸುತ್ತದೆ. ಅದೂ 50 ಲಕ್ಷ ರೂ ಮೊತ್ತದ ಆಕ್ಸಿಡೆಂಟ್ ಇನ್ಷೂರೆನ್ಸ್ ಕವರೇಜ್ ಇರುತ್ತದೆ. ಇದಕ್ಕೆ ಎಲ್​ಪಿಜಿ ಗ್ರಾಹಕರು ಪ್ರತ್ಯೇಕ ಪ್ರೀಮಿಯಮ್ ಕಟ್ಟಬೇಕಿಲ್ಲ. ಪೆಟ್ರೋಲಿಯಂ ಕಂಪನಿಯೇ ಉಚಿತವಾಗಿ ಈ ಕವರೇಜ್ ನೀಡುತ್ತದೆ.

ಎಲ್​ಪಿಜಿ ಸಿಲಂಡರ್ ಸ್ಪೋಟ ಘಟನೆಯಿಂದ ಆಗುವ ಹಾನಿಗೆ ಎಲ್​ಪಿಜಿ ಗ್ರಾಹಕರು ಸಂಬಂಧಿತ ಪೆಟ್ರೋಲಿಯಂ ಕಂಪನಿಯಿಂದ ಪರಿಹಾರ ಪಡೆಯಲು ಅವಕಾಶ ಇದೆ. ಎಲ್​​ಪಿಜಿ ಗ್ರಾಹಕ ಹಾಗೂ ಅವರ ಕುಟುಂಬ ಸದಸ್ಯರಿಗೆ ಒಟ್ಟಾರೆ ವರ್ಷಕ್ಕೆ 50 ಲಕ್ಷ ರೂವರೆಗೂ ಕಾಂಪೆನ್ಸೇಶನ್ ಅವಕಾಶ ಇರುತ್ತದೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ 10 ಲಕ್ಷ ರೂವರೆಗೂ ಪರಿಹಾರ ಪಡೆಯಬಹುದು.

ಗ್ಯಾಸ್ ಸೋರಿಕೆ, ಸ್ಫೋಟ ಇತ್ಯಾದಿ ಅಪಘಾತ ಘಟನೆಗಳಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಅದಕ್ಕಾಗಿ ಪೆಟ್ರೋಲಿಯಂ ಕಂಪನಿಗಳು ವಿವಿಧ ವಿಮಾ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತವೆ.

ಇದನ್ನೂ ಓದಿ: ಮದುವೆಗೂ ಇದೆ ವಿಮಾ ಸುರಕ್ಷೆ; ವೆಡ್ಡಿಂಗ್ ಇನ್ಷೂರೆನ್ಸ್ ಪಾಲಿಸಿಯಲ್ಲಿ ಏನೇನು ಕವರೇಜ್ ಇರುತ್ತದೆ?

ಯಾವ್ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ?

ಎಲ್​ಪಿಜಿ ಸಿಲಿಂಡರ್ ಅಪಘಾತ ಘಟನೆಯಲ್ಲಿ ಯಾವುದಾದರೂ ಆಸ್ತಿಗೆ ಹಾನಿಯಾದರೆ ಗರಿಷ್ಠ 2 ಲಕ್ಷ ರೂವರೆಗೆ ಹಣ ಕ್ಲೈಮ್ ಮಾಡಬಹುದು. ಸಾವಾದರೆ, ಒಬ್ಬ ವ್ಯಕ್ತಿಗೆ 6 ಲಕ್ಷ ರೂ ವಿಮಾ ಪರಿಹಾರ ಸಿಗುತ್ತದೆ. ಗಾಯವಾದರೆ ಒಬ್ಬ ವ್ಯಕ್ತಿಗೆ 2 ಲಕ್ಷ ರೂವರೆಗೆ ಪರಿಹಾರ ಕೊಡಲಾಗುತ್ತದೆ.

ಎಲ್​ಪಿಜಿ ಆಕ್ಸಿಡೆಂಟ್ ವಿಮೆ ಕ್ಲೈಮ್ ಮಾಡುವುದು ಹೇಗೆ?

ಅಕಸ್ಮಾತ್ ಗ್ಯಾಸ್ ಸ್ಫೋಟ ದುರಂತ ಸಂಭವಿಸಿ ಅನಾಹುತವಾಗಿ ಬಿಟ್ಟರೆ ಇನ್ಷೂರೆನ್ಸ್ ಕಂಪನಿಯನ್ನು ಸಂಪರ್ಕಿಸುವ ಅಗತ್ಯ ಇರುವುದಿಲ್ಲ. ಆದರೆ, ಸಮೀಪದ ಪೊಲೀಸ್ ಸ್ಟೇಷನ್ ಮತ್ತು ಎಲ್​​ಪಿಜಿ ಡಿಸ್ಟ್ರಿಬ್ಯೂಟರ್​ಗೆ ಮಾಹಿತಿ ನೀಡಬೇಕು.

ಪೊಲೀಸ್ ಸ್ಟೇಷನ್​ನಲ್ಲಿ ದೂರು ನೀಡಿದ ಪ್ರತಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ನೀವು ಎಲ್​ಪಿಜಿ ಡಿಸ್ಟ್ರಿಬ್ಯೂಟರ್​ಗೆ ಮಾಹಿತಿ ನೀಡಿದ ಬಳಿಕ ಅದು ಸಂಬಂಧಿತ ಇನ್ಷೂರೆನ್ಸ್ ಕಂಪನಿಗೆ ಮಾಹಿತಿ ತಲುಪುತ್ತದೆ. ಆ ಸಂಸ್ಥೆಯ ಪ್ರತಿನಿಧಿಗಳು ಬಂದು ತನಿಖೆ ನಡೆಸುತ್ತಾರೆ.

ಇದನ್ನೂ ಓದಿ: Jeevan Utsav: ಎಲ್​ಐಸಿಯಿಂದ ಇಂದು ಹೊಸ ಜೀವನ್ ಉತ್ಸವ್ ಪಾಲಿಸಿ ಬಿಡುಗಡೆ; ಇದರ ವಿಶೇಷತೆಗಳೇನು?

ಅಪಘಾತ ಘಟನೆ ನಡೆದಿರುವುದು ನಿಜವೆಂದು ದೃಢಪಟ್ಟ ಬಳಿಕ ಕ್ಲೈಮ್ ಪ್ರಕ್ರಿಯೆ ಚಾಲನೆಗೊಳ್ಳುತ್ತದೆ.

ಪೊಲೀಸ್ ದೂರಿನ ಪ್ರತಿ, ಗಾಯಗೊಂಡಿದ್ದರೆ ಚಿಕಿತ್ಸಾ ವೆಚ್ಚದ ದಾಖಲೆಗಳು, ಮೃತಪಟ್ಟಿದ್ದರೆ ಡೆತ್ ಸರ್ಟಿಫಿಕೇಟ್ ಅಥವಾ ಪೋಸ್ಟ್ ಮಾರ್ಟಮ್ ರಿಪೋರ್ಟ್​ನ ಪ್ರತಿ ಇವೆಲ್ಲಾ ದಾಖಲೆಗಳನ್ನು ಇನ್ಷೂರೆನ್ಸ್ ಕಂಪನಿಗೆ ಒದಗಿಸಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ