Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Users: ಎಲ್​ಪಿಜಿ ಗ್ರಾಹಕರಿಗೆ ಉಚಿತ 50 ಲಕ್ಷ ವಿಮೆ; ಕ್ಲೈಮ್ ಮಾಡುವುದು ಹೇಗೆ?

50 Lakh Accident Insurance Coverage: ಎಲ್​ಪಿಜಿ ಕನೆಕ್ಷನ್ ಪಡೆಯುವ ಎಲ್ಲಾ ಗ್ರಾಹಕರಿಗೂ ಆ ಪೆಟ್ರೋಲಿಯಂ ಕಂಪನಿ ಉಚಿತವಾಗಿ 50 ಲಕ್ಷ ರೂ ಮೊತ್ತದ ಆ್ಯಕ್ಸಿಡೆಂಟ್ ಇನ್ಷೂರೆನ್ಸ್ ಸೌಲಭ್ಯ ಒದಗಿಸುತ್ತದೆ. ಇನ್ಷೂರೆನ್ಸ್ ಕವರೇಜ್​ಗಾಗಿ ಪೆಟ್ರೋಲಿಯಂ ಕಂಪನಿ ಯಾವುದಾದರೂ ಇನ್ಷೂರೆನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿರುತ್ತದೆ. ಎಲ್​​ಪಿಜಿ ಗ್ಯಾಸ್ ದುರಂತ ಘಟನೆಯಲ್ಲಿ ಆಸ್ತಿಗೆ ಧಕ್ಕೆಯಾದರೆ 2 ಲಕ್ಷ ರೂವರೆಗೆ ಕ್ಲೈಮ್ ಮಾಡಲು ಸಾಧ್ಯ. ಸಾವಾದರೆ ಒಬ್ಬರಿಗೆ 6 ಲಕ್ಷ ಪರಿಹಾರ ಸಿಗುತ್ತದೆ.

LPG Users: ಎಲ್​ಪಿಜಿ ಗ್ರಾಹಕರಿಗೆ ಉಚಿತ 50 ಲಕ್ಷ ವಿಮೆ; ಕ್ಲೈಮ್ ಮಾಡುವುದು ಹೇಗೆ?
ಎಲ್​ಪಿಜಿ ಸಿಲಿಂಡರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 05, 2024 | 2:30 PM

ನವದೆಹಲಿ, ಜನವರಿ 5: ಎಲ್​ಪಿಜಿ ಸಿಲಂಡರ್ ಸ್ಪೋಟಗೊಂಡ ಹಲವು ಪ್ರಕರಣಗಳು ದೇಶಾದ್ಯಂತ ಸಂಭವಿಸುತ್ತಲೇ ಇರುತ್ತವೆ. ಸಾಕಷ್ಟು ಆಸ್ತಿಪಾಸ್ತಿ ನಷ್ಟ, ಜೀವಹಾನಿ ಆಗುವುದುಂಟು. ಹೀಗಾಗಿ, ಇಂಥದ್ದಕ್ಕೆ ಇನ್ಷೂರೆನ್ಸ್ ಕವರೇಜ್ ಇರುವುದು ಬಹಳ ಮುಖ್ಯ. ಪೆಟ್ರೋಲಿಯಂ ಕಂಪನಿಗಳೇ ತಮ್ಮ ಎಲ್ಲಾ ಎಲ್​ಪಿಜಿ ಗ್ರಾಹಕರಿಗೂ ಉಚಿತವಾಗಿ ಅಪಘಾತ ವಿಮಾ ಕವರೇಜ್ (free insurance coverage) ಸೌಲಭ್ಯ ಒದಗಿಸುತ್ತದೆ. ಅದೂ 50 ಲಕ್ಷ ರೂ ಮೊತ್ತದ ಆಕ್ಸಿಡೆಂಟ್ ಇನ್ಷೂರೆನ್ಸ್ ಕವರೇಜ್ ಇರುತ್ತದೆ. ಇದಕ್ಕೆ ಎಲ್​ಪಿಜಿ ಗ್ರಾಹಕರು ಪ್ರತ್ಯೇಕ ಪ್ರೀಮಿಯಮ್ ಕಟ್ಟಬೇಕಿಲ್ಲ. ಪೆಟ್ರೋಲಿಯಂ ಕಂಪನಿಯೇ ಉಚಿತವಾಗಿ ಈ ಕವರೇಜ್ ನೀಡುತ್ತದೆ.

ಎಲ್​ಪಿಜಿ ಸಿಲಂಡರ್ ಸ್ಪೋಟ ಘಟನೆಯಿಂದ ಆಗುವ ಹಾನಿಗೆ ಎಲ್​ಪಿಜಿ ಗ್ರಾಹಕರು ಸಂಬಂಧಿತ ಪೆಟ್ರೋಲಿಯಂ ಕಂಪನಿಯಿಂದ ಪರಿಹಾರ ಪಡೆಯಲು ಅವಕಾಶ ಇದೆ. ಎಲ್​​ಪಿಜಿ ಗ್ರಾಹಕ ಹಾಗೂ ಅವರ ಕುಟುಂಬ ಸದಸ್ಯರಿಗೆ ಒಟ್ಟಾರೆ ವರ್ಷಕ್ಕೆ 50 ಲಕ್ಷ ರೂವರೆಗೂ ಕಾಂಪೆನ್ಸೇಶನ್ ಅವಕಾಶ ಇರುತ್ತದೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ 10 ಲಕ್ಷ ರೂವರೆಗೂ ಪರಿಹಾರ ಪಡೆಯಬಹುದು.

ಗ್ಯಾಸ್ ಸೋರಿಕೆ, ಸ್ಫೋಟ ಇತ್ಯಾದಿ ಅಪಘಾತ ಘಟನೆಗಳಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಅದಕ್ಕಾಗಿ ಪೆಟ್ರೋಲಿಯಂ ಕಂಪನಿಗಳು ವಿವಿಧ ವಿಮಾ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತವೆ.

ಇದನ್ನೂ ಓದಿ: ಮದುವೆಗೂ ಇದೆ ವಿಮಾ ಸುರಕ್ಷೆ; ವೆಡ್ಡಿಂಗ್ ಇನ್ಷೂರೆನ್ಸ್ ಪಾಲಿಸಿಯಲ್ಲಿ ಏನೇನು ಕವರೇಜ್ ಇರುತ್ತದೆ?

ಯಾವ್ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ?

ಎಲ್​ಪಿಜಿ ಸಿಲಿಂಡರ್ ಅಪಘಾತ ಘಟನೆಯಲ್ಲಿ ಯಾವುದಾದರೂ ಆಸ್ತಿಗೆ ಹಾನಿಯಾದರೆ ಗರಿಷ್ಠ 2 ಲಕ್ಷ ರೂವರೆಗೆ ಹಣ ಕ್ಲೈಮ್ ಮಾಡಬಹುದು. ಸಾವಾದರೆ, ಒಬ್ಬ ವ್ಯಕ್ತಿಗೆ 6 ಲಕ್ಷ ರೂ ವಿಮಾ ಪರಿಹಾರ ಸಿಗುತ್ತದೆ. ಗಾಯವಾದರೆ ಒಬ್ಬ ವ್ಯಕ್ತಿಗೆ 2 ಲಕ್ಷ ರೂವರೆಗೆ ಪರಿಹಾರ ಕೊಡಲಾಗುತ್ತದೆ.

ಎಲ್​ಪಿಜಿ ಆಕ್ಸಿಡೆಂಟ್ ವಿಮೆ ಕ್ಲೈಮ್ ಮಾಡುವುದು ಹೇಗೆ?

ಅಕಸ್ಮಾತ್ ಗ್ಯಾಸ್ ಸ್ಫೋಟ ದುರಂತ ಸಂಭವಿಸಿ ಅನಾಹುತವಾಗಿ ಬಿಟ್ಟರೆ ಇನ್ಷೂರೆನ್ಸ್ ಕಂಪನಿಯನ್ನು ಸಂಪರ್ಕಿಸುವ ಅಗತ್ಯ ಇರುವುದಿಲ್ಲ. ಆದರೆ, ಸಮೀಪದ ಪೊಲೀಸ್ ಸ್ಟೇಷನ್ ಮತ್ತು ಎಲ್​​ಪಿಜಿ ಡಿಸ್ಟ್ರಿಬ್ಯೂಟರ್​ಗೆ ಮಾಹಿತಿ ನೀಡಬೇಕು.

ಪೊಲೀಸ್ ಸ್ಟೇಷನ್​ನಲ್ಲಿ ದೂರು ನೀಡಿದ ಪ್ರತಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ನೀವು ಎಲ್​ಪಿಜಿ ಡಿಸ್ಟ್ರಿಬ್ಯೂಟರ್​ಗೆ ಮಾಹಿತಿ ನೀಡಿದ ಬಳಿಕ ಅದು ಸಂಬಂಧಿತ ಇನ್ಷೂರೆನ್ಸ್ ಕಂಪನಿಗೆ ಮಾಹಿತಿ ತಲುಪುತ್ತದೆ. ಆ ಸಂಸ್ಥೆಯ ಪ್ರತಿನಿಧಿಗಳು ಬಂದು ತನಿಖೆ ನಡೆಸುತ್ತಾರೆ.

ಇದನ್ನೂ ಓದಿ: Jeevan Utsav: ಎಲ್​ಐಸಿಯಿಂದ ಇಂದು ಹೊಸ ಜೀವನ್ ಉತ್ಸವ್ ಪಾಲಿಸಿ ಬಿಡುಗಡೆ; ಇದರ ವಿಶೇಷತೆಗಳೇನು?

ಅಪಘಾತ ಘಟನೆ ನಡೆದಿರುವುದು ನಿಜವೆಂದು ದೃಢಪಟ್ಟ ಬಳಿಕ ಕ್ಲೈಮ್ ಪ್ರಕ್ರಿಯೆ ಚಾಲನೆಗೊಳ್ಳುತ್ತದೆ.

ಪೊಲೀಸ್ ದೂರಿನ ಪ್ರತಿ, ಗಾಯಗೊಂಡಿದ್ದರೆ ಚಿಕಿತ್ಸಾ ವೆಚ್ಚದ ದಾಖಲೆಗಳು, ಮೃತಪಟ್ಟಿದ್ದರೆ ಡೆತ್ ಸರ್ಟಿಫಿಕೇಟ್ ಅಥವಾ ಪೋಸ್ಟ್ ಮಾರ್ಟಮ್ ರಿಪೋರ್ಟ್​ನ ಪ್ರತಿ ಇವೆಲ್ಲಾ ದಾಖಲೆಗಳನ್ನು ಇನ್ಷೂರೆನ್ಸ್ ಕಂಪನಿಗೆ ಒದಗಿಸಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ