ಆಂಡ್ರಾಯ್ಡ್ ಮತ್ತು ಐಒಎಸ್​​ನಲ್ಲಿ m-Aadhaar ಆ್ಯಪ್ ಹೇಗೆ ಬಳಸುವುದು?: ಇಲ್ಲಿದೆ ನೋಡಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದವರು ಬಳಕೆದಾರರ ಅನುಕೂಲಕ್ಕಾಗಿ ಆಧಾರ್ ಆ್ಯಪ್‌ ಅನ್ನು ಉನ್ನತೀಕರಿಸಿದ್ದಾರೆ. ಈ ಆ್ಯಪ್‌ ಆಂಡ್ರಾಯ್ಡ್ (Android) ಮತ್ತು ಐಓಸ್ (iOS) ಅಧಿಕೃತ ಆ್ಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿದೆ.

ಆಂಡ್ರಾಯ್ಡ್ ಮತ್ತು ಐಒಎಸ್​​ನಲ್ಲಿ m-Aadhaar ಆ್ಯಪ್ ಹೇಗೆ ಬಳಸುವುದು?: ಇಲ್ಲಿದೆ ನೋಡಿ
MAadhaar
Follow us
| Updated By: Vinay Bhat

Updated on:May 10, 2022 | 3:50 PM

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್‌ (Aadhaar Card) ಒಂದು ಪ್ರಮುಖ ದಾಖಲೆಯಾಗಿದೆ. ಆದರೆ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಕೊಂಡೊಯ್ಯಲು ಸಾಧ್ಯವಿಲ್ಲ. ಇದಕ್ಕಾಗಿಯೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದವರು ಬಳಕೆದಾರರ ಅನುಕೂಲಕ್ಕಾಗಿ ಆಧಾರ್ ಆ್ಯಪ್‌ ಅನ್ನು ಉನ್ನತೀಕರಿಸಿದ್ದಾರೆ. ಈ ಆ್ಯಪ್‌ ಆಂಡ್ರಾಯ್ಡ್ (Android) ಮತ್ತು ಐಓಸ್ (iOS) ಅಧಿಕೃತ ಆ್ಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿದೆ. ಇದರಲ್ಲಿ ಆಧಾರ್ ಕಾರ್ಡಿನ ಸಾಫ್ಟ್ ಕಾಪಿ ಡೌನ್‌ಲೋಡ್ ಮಾಡುವುದರ ಜತೆಗೆ ಆಧಾರ್​ಗೆ ಸಂಬಂಧಿಸಿದ ಹಲವು ಸೇವೆಗಳು ಲಭ್ಯವಿದೆ. ಈ ಆ್ಯಪ್ ಮೂಲಕ ನಿಮ್ಮ ಮೊಬೈಲ್ ಫೋನ್‌ನಲ್ಲಿ ಆಧಾರ್‌ಗೆ ಸಂಬಂಧಿಸಿದ 35ಕ್ಕೂ ಹೆಚ್ಚು ಸೇವೆಗಳ ಲಾಭವನ್ನು ಪಡೆಯಬಹುದು. MAadhaar ಅಪ್ಲಿಕೇಶನ್ ಬಳಕೆದಾರರಿಗೆ ಅದರ ಆಧಾರ್ ಡೇಟಾವನ್ನು ಸಿಂಕ್ ಮಾಡಲು ಅನುಮತಿಸುತ್ತದೆ. ಇದನ್ನು ಮಾಡುವುದರಿಂದ ಯಾವುದೇ ಸಮಯದಲ್ಲಿ ಆಧಾರ್‌ಗೆ ಸಂಬಂಧಿಸಿದ ಮಾಹಿತಿಯನ್ನು ನೀವು ನಿಮ್ಮ ಬೆರಳ ತುದಿಯಲ್ಲಿ ಪಡೆಯಲು ಇದು ಸಹಾಯ ಮಾಡುತ್ತದೆ. ಹಾಗಾದ್ರೆ ಇದನ್ನು ಬಳಕೆ ಮಾಡುವುದು ಹೇಗೆ ಎಂಬುದನ್ನು ನೋಡೋಣ.

  • ನೀವು ಆಂಡ್ರಾಯ್ಡ್ ಬಳಕೆದಾರರಾಗಿದ್ದರೆ ಗೂಗಲ್ ಪ್ಲೇ ಸ್ಟೋರ್​ಗೆ ಬೇಟಿ ನೀಡಿ. ಐಒಎಸ್ ಬಳಕೆದಾರರಾಗಿದ್ದರೆ ಆ್ಯಪ್​ ಸ್ಟೋರ್ ಓಪನ್ ಮಾಡಿ.
  • ಸರ್ಚ್​ ಬಾರ್​ನಲ್ಲಿ mAadhaar ಎಂದು ಟೈಪ್ ಮಾಡಿ ಮತ್ತು ಡೌನ್​ಲೋಡ್ ಕೊಡಿ. ಅಥವಾ ಅಂಡ್ರಾಯ್ಡ್ ಬಳಕೆದಾರರು https://play.google.com/store/apps/details?id=in.gov.uidai.mAadhaarPlus&hl=en_IN ಐಒಎಸ್ ಅವರು https://apps.apple.com/in/app/maadhaar/id1435469474 ನಲ್ಲಿ ಡೌನ್​ಲೋಡ್ ಮಾಡಬಹುದು.
  • ಈಗ ನೀವು ಡೌನ್​ಲೋಡ್ ಮಾಡಿದ ಆ್ಯಪ್ ಸರಿಯಾಗಿದೆಯೇ ಎಂದು ಪರಶೀಲಿಸಿ. ಈ ಆ್ಯಪ್ ಅನ್ನು ಅಭಿವೃದ್ದಿ ಪಡಿಸಿದ ಬಗ್ಗೆ Unique Identification Authority of India ಎಂದು ಇದೆಯೇ ಎಂದು ನೋಡಿಕೊಳ್ಳಿ.
  • ಇನ್​ಸ್ಟಾಲ್ ಮಾಡಿ ಓಪನ್ ಮಾಡಿದ ತಕ್ಷಣ ಅಲ್ಲಿರುವ ವಿಷಯಗಳನ್ನು ಓದಿ ಮುಂದೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಭಾಷೆಯ ಆಯ್ಕೆ ಕೂಡ ಸಿಗುತ್ತದೆ.
  • ಇದರಲ್ಲಿ ಐದು ಜನರ ಪ್ರೊಫೈಲ್ ನೋಡಲು ಸಾಧ್ಯವಾಗುತ್ತದೆ. ಇದಕ್ಕಾಗಿ ಆ್ಯಡ್ ಪ್ರೊಫೈಲ್​ನಲ್ಲಿ ಓಟಿಪಿ ನಮೋದಿಸಬೇಕಾಗುತ್ತದೆ.

mAadhaar ಅಪ್ಲಿಕೇಶನ್ ಅನ್ನು ಭಾರತದಲ್ಲಿ ಎಲ್ಲಿಯಾದರೂ ಯಾವಾಗ ಬೇಕಾದರೂ ಬಳಸಬಹುದು. ಇದು ವ್ಯಾಲೆಟ್ ನಲ್ಲಿರುವ ಆಧಾರ್ ಕಾರ್ಡ್ ಗಿಂತ ಹೆಚ್ಚು. ಒಂದೆಡೆ, ಎಂ-ಆಧಾರ್ ಪ್ರೊಫೈಲ್ ಅನ್ನು ವಿಮಾನನಿಲ್ದಾಣವು ಮಾನ್ಯ ಐಡಿ ಪ್ರೂಫ್ ಆಗಿ ಸ್ವೀಕರಿಸುತ್ತದೆ ಮತ್ತು ಮತ್ತೊಂದೆಡೆ, ರೈಲ್ವೆಗಳು ತಮ್ಮ ಇಕೆವೈಸಿ ಅಥವಾ ಕ್ಯೂಆರ್ ಕೋಡ್ ಅನ್ನು ಆಧಾರ್ ಸೇವೆಗಳನ್ನು ಒದಗಿಸಿದ ಸೇವಾ ಪೂರೈಕೆದಾರರೊಂದಿಗೆ ಹಂಚಿಕೊಳ್ಳಲು ಅಪ್ಲಿಕೇಶನ್‌ನಲ್ಲಿನ ವೈಶಿಷ್ಟ್ಯಗಳನ್ನು ಬಳಸಬಹುದು.

mAadhaar ಅಪ್ಲಿಕೇಶನ್ ವಿಶಿಷ್ಟ ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿ ನಿಮ್ಮ ಬಯೋಮೆಟ್ರಿಕ್ ಲಾಕಿಂಗ್ / ಅನ್ಲಾಕಿಂಗ್ ಅನ್ನು ನೀವು ಮಾಡಬಹುದು. ಇದಕ್ಕಾಗಿ ನೀವು ಅಪ್ಲಿಕೇಶನ್‌ನಲ್ಲಿ ಸೆಟ್ಟಿಂಗ್ಸ್ ಸಕ್ರಿಯಗೊಳಿಸಬೇಕು. ಎಸ್​ಎಮ್​ಎಸ್​ ಆಧಾರಿತ ಓಟಿಪಿ ಬದಲಿಗೆ, mAadhaar ಸಮಯ ಆಧಾರಿತ ಒಂದು ಬಾರಿ ಪಾಸ್‌ವರ್ಡ್ (TOTP) ಅನ್ನು ಉತ್ಪಾದಿಸುತ್ತದೆ. ಇದು ಬಹಳ ಕಡಿಮೆ ಸಮಯದವರೆಗೆ ಲೈವ್ ಒಟಿಪಿ ಆಗಿದೆ. ಇದು ಬಳಕೆದಾರರಿಗೆ ಹೆಚ್ಚಿನ ಸುರಕ್ಷತೆಯನ್ನು ಒದಗಿಸುತ್ತದೆ.

ಇದನ್ನೂ ಓದಿ
Image
SEBI Probe: ಆಕ್ಸಿಸ್ ಅಸೆಟ್ ಮ್ಯಾನೇಜ್​ಮೆಂಟ್​ನಲ್ಲಿ 2.5 ಲಕ್ಷ ಕೋಟಿ ರೂಪಾಯಿ ಫಂಡ್​ ಬಗ್ಗೆ ತನಿಖೆ ಕೈಗೆತ್ತಿಕೊಂಡ ಸೆಬಿ
Image
America Stock Market: ಅಮೆರಿಕದ ನಾಸ್ಡಾಕ್ 100 ಸೂಚ್ಯಂಕದ ಮಾರುಕಟ್ಟೆ ಮೌಲ್ಯ 3 ದಿನದಲ್ಲಿ 115.85 ಲಕ್ಷ ಕೋಟಿ ರೂಪಾಯಿ ಉಡೀಸ್
Image
GST Number Unblock: ಬ್ಲಾಕ್ ಮಾಡಿದ ಜಿಎಸ್‌ಟಿ ಸಂಖ್ಯೆ ಮರುಚಾಲನೆ ಹೇಗೆಂದು ತಿಳಿಯದ ಕರ್ನಾಟಕ ಜಿಎಸ್​ಟಿ ಇಲಾಖೆ; ಉದ್ಯಮಿ ವ್ಯವಹಾರಕ್ಕೆ ಧಕ್ಕೆ
Image
LIC IPO: ಎಲ್​ಐಸಿ ಐಪಿಒಗೆ ಮೇ 9ರ ಅಂತಿಮ ದಿನಕ್ಕೆ ಒಟ್ಟು 2.95 ಪಟ್ಟು ಬೇಡಿಕೆ

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Tue, 10 May 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ