AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SEBI: ಸೆಬಿ ಅಧ್ಯಕ್ಷೆಯಾಗಿ ಮಾಧಬಿ ಪುರಿ ಬುಚ್ ನೇಮಕ; ಮೂಲಗಳ ಮಾಹಿತಿ

ಮಾಧಬಿ ಪುರಿ ಬುಚ್ ಅವರು ಸೆಬಿಯ ಮೊದಲ ಮಹಿಳಾ ಅಧ್ಯಕ್ಷರಾಗಿ ನೇಮಕ ಆಗಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

SEBI: ಸೆಬಿ ಅಧ್ಯಕ್ಷೆಯಾಗಿ ಮಾಧಬಿ ಪುರಿ ಬುಚ್ ನೇಮಕ; ಮೂಲಗಳ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Feb 28, 2022 | 2:13 PM

ಮಾಧಬಿ ಪುರಿ ಬುಚ್ ಅವರನ್ನು ಸೆಕ್ಯೂರಿಟೀಸ್ ಅಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅಧ್ಯಕ್ಷೆಯಾಗಿ ನೇಮಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ಖಚಿತಪಡಿಸಿವೆ. ಮಾರುಕಟ್ಟೆ ನಿಯಂತ್ರಕ ಮುಖ್ಯಸ್ಥರಾಗಿರುವ ಮೊದಲ ಮಹಿಳೆ ಆಕೆ ಆಗಿದ್ದಾರೆ. ಮಾಧಬಿ ಪುರಿ ಬುಚ್ ಅವರು ಸೆಬಿಯ ಮಾಜಿ ಪೂರ್ಣಾವಧಿ ಸದಸ್ಯೆ. ಮಾರುಕಟ್ಟೆ ನಿಯಂತ್ರಕ ಸೆಬಿ ಸ್ಥಾಪಿಸಿದ ಹೊಸ ತಂತ್ರಜ್ಞಾನ ಸಮಿತಿಯನ್ನು ಮುನ್ನಡೆಸಲು ಈ ಹಿಂದೆ ನಾಮನಿರ್ದೇಶನಗೊಂಡಿದ್ದರು. ಬುಚ್ ಅವರು ಸೆಬಿಯ ಡಬ್ಲ್ಯುಟಿಎಂ ಆಗಿ ಮೊದಲ ಮಹಿಳೆ ಮಾತ್ರವಲ್ಲ, ಖಾಸಗಿ ವಲಯದ ಮೊದಲ ವ್ಯಕ್ತಿಯೂ ಹೌದು. ಅವರು ಐಸಿಐಸಿಐ ಬ್ಯಾಂಕ್‌ನೊಂದಿಗೆ ತಮ್ಮ ವೃತ್ತಿಜೀವನ ಪ್ರಾರಂಭಿಸಿದ್ದು, 2009ರ ಫೆಬ್ರವರಿಯಿಂದ 2011ರ ಮೇ ತಿಂಗಳ ತನಕ ಐಸಿಐಸಿಐ ಸೆಕ್ಯೂರಿಟೀಸ್‌ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಆಗಿದ್ದರು.

2011ರಲ್ಲಿ ಅವರು ಗ್ರೇಟರ್ ಪೆಸಿಫಿಕ್ ಕ್ಯಾಪಿಟಲ್ ಎಲ್​ಎಲ್​ಪಿಗೆ ಸೇರ್ಪಡೆ ಆಗಲು ಸಿಂಗಾಪೂರಕ್ಕೆ ತೆರಳಿದರು. ಸೆಬಿಗೆ ಹೊಸ ಅಧ್ಯಕ್ಷರು ಸಿಗುತ್ತಾರೆಯೇ ಅಥವಾ ಪ್ರಸ್ತುತ ಅಧ್ಯಕ್ಷರಾದ ಅಜಯ್ ತ್ಯಾಗಿ ಮತ್ತೊಂದು ವಿಸ್ತರಣೆಯನ್ನು ಪಡೆಯುತ್ತಾರೆಯೇ ಎಂಬುದರ ಕುರಿತು ಷೇರು ಮಾರುಕಟ್ಟೆ ಸ್ಪಷ್ಟತೆಗಾಗಿ ಕಾಯುತ್ತಿತ್ತು. ತ್ಯಾಗಿ ಅವರ ಅಧಿಕಾರಾವಧಿ ಫೆಬ್ರವರಿ 28ಕ್ಕೆ ಕೊನೆಗೊಳ್ಳುತ್ತದೆ. ಖಚಿತವಾಗಿ ಹೇಳುವುದಾದರೆ, ಹಣಕಾಸು ಸಚಿವಾಲಯವು ಅಧ್ಯಕ್ಷರ ಹುದ್ದೆಗೆ ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿತ್ತು ಮತ್ತು ಸಲ್ಲಿಕೆಗೆ ಡಿಸೆಂಬರ್ 6 ಕೊನೆಯ ದಿನಾಂಕವಾಗಿತ್ತು.

ಫೆಬ್ರವರಿ 22ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ: “ಬಹುಶಃ ಹುದ್ದೆಗೆ ಶಾರ್ಟ್ ಲಿಸ್ಟ್ ಇನ್ನೂ ಆಗಬೇಕಿದೆ.” ಸರ್ಕಾರವು ಯುಕೆ ಸಿನ್ಹಾ ಅವರಿಗೆ ಮೂರು ವರ್ಷಗಳ ಕಾಲ ವಿಸ್ತರಣೆಯನ್ನು ನೀಡಿತು, ಡಿ.ಆರ್. ಮೆಹ್ತಾ ನಂತರ ಅವರನ್ನು ಸೆಬಿಯ ಎರಡನೇ ಸುದೀರ್ಘ ಸೇವೆಯ ಮುಖ್ಯಸ್ಥರನ್ನಾಗಿ ಮಾಡಿದೆ. ಸೆಬಿ ನೇಮಕಾತಿಯ ಕಾರ್ಯವಿಧಾನದ ಪ್ರಕಾರ, ಸಂಪುಟ ಕಾರ್ಯದರ್ಶಿ ನೇತೃತ್ವದ ಹಣಕಾಸು ವಲಯದ ನಿಯಂತ್ರಕ ನೇಮಕಾತಿಗಳ ಹುಡುಕಾಟ ಸಮಿತಿಯಿಂದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಸಂವಾದಗಳ ಆಧಾರದ ಮೇಲೆ, FSRASC ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟವು ನೇಮಕಾತಿ ಸಮಿತಿಗೆ ಹೆಸರನ್ನು ಶಿಫಾರಸು ಮಾಡುತ್ತದೆ.

ಇದನ್ನೂ ಓದಿ: Anil Ambani: ರಿಲಯನ್ಸ್ ಹೋಮ್ ಫೈನಾನ್ಸ್, ಅನಿಲ್ ಅಂಬಾನಿ ಮತ್ತು ಇತರ ಮೂವರನ್ನು ಸೆಕ್ಯೂರಿಟೀಸ್​ ಮಾರುಕಟ್ಟೆಯಿಂದ ನಿಷೇಧಿಸಿದ ಸೆಬಿ

ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ