AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮತ್ತು ರಾಜಸ್ಥಾನ ಬಳಿಕ ಪೆಟ್ರೋಲ್​​, ಡೀಸೆಲ್​​ ಮೇಲಿನ ವ್ಯಾಟ್​​ ಕಡಿತ ಮಾಡಿದ ಮಹಾರಾಷ್ಟ್ರ

ಕೇಂದ್ರದ ಘೋಷಣೆಯ ನಂತರ ಮಹಾರಾಷ್ಟ್ರದ ಹೊರತಾಗಿ ಕೇರಳ ಮತ್ತು ರಾಜಸ್ಥಾನ ಕೂಡ ಇಂಧನದ ಮೇಲಿನ ತೆರಿಗೆಯಲ್ಲಿ ಕಡಿತವನ್ನು ಘೋಷಿಸಿತು

ಕೇರಳ ಮತ್ತು ರಾಜಸ್ಥಾನ ಬಳಿಕ ಪೆಟ್ರೋಲ್​​, ಡೀಸೆಲ್​​ ಮೇಲಿನ ವ್ಯಾಟ್​​ ಕಡಿತ ಮಾಡಿದ ಮಹಾರಾಷ್ಟ್ರ
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 22, 2022 | 8:56 PM

Share

ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಮಹಾರಾಷ್ಟ್ರ (Maharashtra) ಸರ್ಕಾರ ಭಾನುವಾರ ಪೆಟ್ರೋಲ್ ಮೇಲಿನ ವ್ಯಾಟ್ (VAT) ಅನ್ನು ರೂ 2.08 ಮತ್ತು ಡೀಸೆಲ್ (diesel) ಮೇಲೆ ರೂ1.44 ರಷ್ಟು ಕಡಿತಗೊಳಿಸಿದೆ.  ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವನ್ನು ಅನುಕ್ರಮವಾಗಿ ಲೀಟರ್ ಗೆ 8ರೂ ಮತ್ತು ಡೀಸೆಲ್ ಲೀಟರ್‌ಗೆ 6ರೂ  ಕಡಿತಗೊಳಿಸುವ ಕೇಂದ್ರದ ಶನಿವಾರದ ಘೋಷಣೆಯನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ರೂ 2,500 ಕೋಟಿ ನಷ್ಟ ಉಂಟಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ ನಂತರ ಮೊದಲಿನಿಂದ ಪ್ರತಿ ತಿಂಗಳ ಆದಾಯವು ರೂ80 ಕೋಟಿಗಳಷ್ಟು ಕಡಿಮೆಯಾದರೆ, ನಂತರದ ಆದಾಯದಿಂದ ರೂ125 ಕೋಟಿಗಳಷ್ಟು ಕಡಿಮೆಯಾಗುತ್ತದೆ. ಕೇಂದ್ರದ ಘೋಷಣೆಯ ನಂತರ ಮಹಾರಾಷ್ಟ್ರದ ಹೊರತಾಗಿ ಕೇರಳ ಮತ್ತು ರಾಜಸ್ಥಾನ ಕೂಡ ಇಂಧನದ ಮೇಲಿನ ತೆರಿಗೆಯಲ್ಲಿ ಕಡಿತವನ್ನು ಘೋಷಿಸಿತು. ಭಾನುವಾರದಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕ್ರಮವಾಗಿ ಲೀಟರ್ ಗೆ ರೂ 2.48 ಮತ್ತು ಲೀಟರ್ ಗೆ 1.16ಲೀಟರ್ ಕಡಿಮೆ ಮಾಡಿದೆ ಎಂದು ಟ್ವೀಟ್ ಮಾಡಿದ್ದರು. ಇದರಿಂದ ರಾಜ್ಯದಲ್ಲಿ ಪೆಟ್ರೋಲ್ ಲೀಟರ್ ಗೆ ರೂ10.48 ಮತ್ತು ಡೀಸೆಲ್ ಲೀಟರ್ ಗೆ 7.16 ಅಗ್ಗವಾಗಲಿದೆ ಎಂದು ಅವರು ಹೇಳಿದರು.

ಶನಿವಾರ ಕೇರಳ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ ರೂ 2.41/ಲೀಟರ್ ಮತ್ತು ರೂ 1.36/ಲೀಟರ್ ಕಡಿತವನ್ನು ಘೋಷಿಸಿತು. “ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೃಹತ್ ತೆರಿಗೆಯನ್ನು ಭಾಗಶಃ ಕಡಿತಗೊಳಿಸಿದೆ. ಕೇರಳ ಸರ್ಕಾರವು ಈ ನಿರ್ಧಾರವನ್ನು ಸ್ವಾಗತಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಧನ ತೆರಿಗೆಯಲ್ಲಿ ಮತ್ತಷ್ಟು ಕಡಿತವನ್ನು ತಮ್ಮ ಸರ್ಕಾರ ಪರಿಗಣಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿಯೂ ಹೇಳಿದ್ದಾರೆ. ಕೇಂದ್ರದ ನಿರ್ಧಾರ ಶನಿವಾರ ರಾತ್ರಿ ಬಂದಿದೆ ನೋಡೋಣ, ನಾವು ಪರಿಗಣಿಸುತ್ತೇವೆ ಎಂದು ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
Image
Petrol Price Today: ಪೆಟ್ರೋಲ್, ಡೀಸೆಲ್ ದರ ಭಾರಿ ಇಳಿಕೆ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ
Image
Petrol Diesel prices reduced: ಭಾರಿ ಇಳಿಕೆಯಾಯ್ತು ಪೆಟ್ರೋಲ್‌, ಡೀಸೆಲ್ ಮೇಲಿನ ಅಬಕಾರಿ ಸುಂಕ! ಪೆಟ್ರೋಲ್-ಡೀಸೆಲ್‌ ಬೆಲೆಯೂ​ ಕಡಿಮೆ: ಏನಿದರ ಲೆಕ್ಕಾಚಾರ?

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!