AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮತ್ತು ರಾಜಸ್ಥಾನ ಬಳಿಕ ಪೆಟ್ರೋಲ್​​, ಡೀಸೆಲ್​​ ಮೇಲಿನ ವ್ಯಾಟ್​​ ಕಡಿತ ಮಾಡಿದ ಮಹಾರಾಷ್ಟ್ರ

ಕೇಂದ್ರದ ಘೋಷಣೆಯ ನಂತರ ಮಹಾರಾಷ್ಟ್ರದ ಹೊರತಾಗಿ ಕೇರಳ ಮತ್ತು ರಾಜಸ್ಥಾನ ಕೂಡ ಇಂಧನದ ಮೇಲಿನ ತೆರಿಗೆಯಲ್ಲಿ ಕಡಿತವನ್ನು ಘೋಷಿಸಿತು

ಕೇರಳ ಮತ್ತು ರಾಜಸ್ಥಾನ ಬಳಿಕ ಪೆಟ್ರೋಲ್​​, ಡೀಸೆಲ್​​ ಮೇಲಿನ ವ್ಯಾಟ್​​ ಕಡಿತ ಮಾಡಿದ ಮಹಾರಾಷ್ಟ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 22, 2022 | 8:56 PM

Share

ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಮಹಾರಾಷ್ಟ್ರ (Maharashtra) ಸರ್ಕಾರ ಭಾನುವಾರ ಪೆಟ್ರೋಲ್ ಮೇಲಿನ ವ್ಯಾಟ್ (VAT) ಅನ್ನು ರೂ 2.08 ಮತ್ತು ಡೀಸೆಲ್ (diesel) ಮೇಲೆ ರೂ1.44 ರಷ್ಟು ಕಡಿತಗೊಳಿಸಿದೆ.  ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವನ್ನು ಅನುಕ್ರಮವಾಗಿ ಲೀಟರ್ ಗೆ 8ರೂ ಮತ್ತು ಡೀಸೆಲ್ ಲೀಟರ್‌ಗೆ 6ರೂ  ಕಡಿತಗೊಳಿಸುವ ಕೇಂದ್ರದ ಶನಿವಾರದ ಘೋಷಣೆಯನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ರೂ 2,500 ಕೋಟಿ ನಷ್ಟ ಉಂಟಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ ನಂತರ ಮೊದಲಿನಿಂದ ಪ್ರತಿ ತಿಂಗಳ ಆದಾಯವು ರೂ80 ಕೋಟಿಗಳಷ್ಟು ಕಡಿಮೆಯಾದರೆ, ನಂತರದ ಆದಾಯದಿಂದ ರೂ125 ಕೋಟಿಗಳಷ್ಟು ಕಡಿಮೆಯಾಗುತ್ತದೆ. ಕೇಂದ್ರದ ಘೋಷಣೆಯ ನಂತರ ಮಹಾರಾಷ್ಟ್ರದ ಹೊರತಾಗಿ ಕೇರಳ ಮತ್ತು ರಾಜಸ್ಥಾನ ಕೂಡ ಇಂಧನದ ಮೇಲಿನ ತೆರಿಗೆಯಲ್ಲಿ ಕಡಿತವನ್ನು ಘೋಷಿಸಿತು. ಭಾನುವಾರದಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕ್ರಮವಾಗಿ ಲೀಟರ್ ಗೆ ರೂ 2.48 ಮತ್ತು ಲೀಟರ್ ಗೆ 1.16ಲೀಟರ್ ಕಡಿಮೆ ಮಾಡಿದೆ ಎಂದು ಟ್ವೀಟ್ ಮಾಡಿದ್ದರು. ಇದರಿಂದ ರಾಜ್ಯದಲ್ಲಿ ಪೆಟ್ರೋಲ್ ಲೀಟರ್ ಗೆ ರೂ10.48 ಮತ್ತು ಡೀಸೆಲ್ ಲೀಟರ್ ಗೆ 7.16 ಅಗ್ಗವಾಗಲಿದೆ ಎಂದು ಅವರು ಹೇಳಿದರು.

ಶನಿವಾರ ಕೇರಳ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ ರೂ 2.41/ಲೀಟರ್ ಮತ್ತು ರೂ 1.36/ಲೀಟರ್ ಕಡಿತವನ್ನು ಘೋಷಿಸಿತು. “ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೃಹತ್ ತೆರಿಗೆಯನ್ನು ಭಾಗಶಃ ಕಡಿತಗೊಳಿಸಿದೆ. ಕೇರಳ ಸರ್ಕಾರವು ಈ ನಿರ್ಧಾರವನ್ನು ಸ್ವಾಗತಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಧನ ತೆರಿಗೆಯಲ್ಲಿ ಮತ್ತಷ್ಟು ಕಡಿತವನ್ನು ತಮ್ಮ ಸರ್ಕಾರ ಪರಿಗಣಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿಯೂ ಹೇಳಿದ್ದಾರೆ. ಕೇಂದ್ರದ ನಿರ್ಧಾರ ಶನಿವಾರ ರಾತ್ರಿ ಬಂದಿದೆ ನೋಡೋಣ, ನಾವು ಪರಿಗಣಿಸುತ್ತೇವೆ ಎಂದು ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
Image
Petrol Price Today: ಪೆಟ್ರೋಲ್, ಡೀಸೆಲ್ ದರ ಭಾರಿ ಇಳಿಕೆ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ
Image
Petrol Diesel prices reduced: ಭಾರಿ ಇಳಿಕೆಯಾಯ್ತು ಪೆಟ್ರೋಲ್‌, ಡೀಸೆಲ್ ಮೇಲಿನ ಅಬಕಾರಿ ಸುಂಕ! ಪೆಟ್ರೋಲ್-ಡೀಸೆಲ್‌ ಬೆಲೆಯೂ​ ಕಡಿಮೆ: ಏನಿದರ ಲೆಕ್ಕಾಚಾರ?

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್