AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakshadweep search: ಮೇಕ್ ಮೈ ಟ್ರಿಪ್​ನಿಂದ ಬೀಚಸ್ ಆಫ್ ಇಂಡಿಯಾ ಅಭಿಯಾನ; ಮೋದಿಯ ಲಕ್ಷದ್ವೀಪ ಭೇಟಿ ಪರಿಣಾಮ

Make My Trip: ಲಕ್ಷದ್ವೀಪಕ್ಕೆ ಮೋದಿ ಭೇಟಿ ನೀಡಿದ ಬಳಿಕ ತಮ್ಮ ಪ್ಲಾಟ್​ಫಾರ್ಮ್​ನಲ್ಲಿ ಆ ಸ್ಥಳದ ಬಗ್ಗೆ ಸರ್ಚ್ ಪ್ರಮಾಣ ಹೆಚ್ಚಿದೆ ಎಂದು ಮೇಕ್ ಮೈ ಟ್ರಿಪ್ ಹೇಳಿದೆ. ಬೀಚಸ್ ಆಫ್ ಇಂಡಿಯಾ ಅಭಿಯಾನ ಆರಂಭಿಸಿದ್ದು, ಇದರಲ್ಲಿ ಭಾರತೀಯ ಬೀಚ್​ಗಳ ಬಗ್ಗೆ ಮಾಹಿತಿ ಇರಲಿದೆ ಎಂದು ಸಂಸ್ಥೆ ತಿಳಿಸಿದೆ. ಮೇಕ್ ಮೈ ಟ್ರಿಪ್ ಭಾರತದ ನಂಬರ್ ಒನ್ ಆನ್ಲೈನ್ ಟ್ರಾವೆಲ್ ಬುಕಿಂಗ್ ಸಂಸ್ಥೆಯಾಗಿದೆ.

Lakshadweep search: ಮೇಕ್ ಮೈ ಟ್ರಿಪ್​ನಿಂದ ಬೀಚಸ್ ಆಫ್ ಇಂಡಿಯಾ ಅಭಿಯಾನ; ಮೋದಿಯ ಲಕ್ಷದ್ವೀಪ ಭೇಟಿ ಪರಿಣಾಮ
ಪ್ರಧಾನಿ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 08, 2024 | 4:30 PM

Share

ನವದೆಹಲಿ, ಜನವರಿ 8: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಮಾಡಿದ ಭೇಟಿ (Narendra Modi’s visit to Lakshadweep) ಸಾಕಷ್ಟು ಸಂಚಲನಕ್ಕೆ ಕಾರಣವಾಗಿ. ಮೋದಿ ಭೇಟಿಯನ್ನು ಅಣಕಿಸಿದ ಮಾಲ್ಡೀವ್ಸ್ ಸಚಿವರ ತಲೆದಂಡವಾಗಿದೆ. ಅದಕ್ಕಿಂತ ಹೆಚ್ಚಾಗಿ ಲಕ್ಷದ್ವೀಪದ ಬಗ್ಗೆ ಭಾರತೀಯರ ಆಸಕ್ತಿ ಹೆಚ್ಚಾಗಿದೆ. ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಜೋರಾಗಿ ನಡೆಯುತ್ತಿರುವಂತೆಯೇ, ಲಕ್ಷದ್ವೀಪದ ಬಗ್ಗೆ ಆನ್​ಲೈನ್​ನಲ್ಲಿ ಮಾಹಿತಿ ಶೋಧ ಬಹಳ ಹೆಚ್ಚಾಗಿದೆ. ಭಾರತದ ನಂಬರ್ ಒನ್ ಟೂರ್ ಆಯೋಜಕ ಮೇಕ್ ಮೈ ಟ್ರಿಪ್ (MakeMyTrip) ಕೂಡ ಈ ಅಭಿಪ್ರಾಯವನ್ನು ಪುಷ್ಟೀಕರಿಸಿದೆ. ಪ್ರಧಾನಿಗಳ ಲಕ್ಷದ್ವೀಪ ಭೇಟಿ ಬಳಿಕ ತಮ್ಮ ಪ್ಲಾಟ್​ಫಾರ್ಮ್​ನಲ್ಲಿ ಆ ಸ್ಥಳದ ಬಗ್ಗೆ ಸರ್ಚ್​ಗಳ ಪ್ರಮಾಣ ಹೆಚ್ಚಿದೆ ಎಂದು ಹೇಳಿದೆ.

‘ಪಿಎಂ ಭೇಟಿ ಬಳಿಕ ಲಕ್ಷದ್ವೀಪ್ ಬಗ್ಗೆ ಆನ್-ಪ್ಲಾಟ್​ಫಾರ್ಮ್ ಸರ್ಚ್​ಗಳ ಪ್ರಮಾಣ ಶೇ. 3400ರಷ್ಟು ಹೆಚ್ಚಾಗಿದೆ. ಇದರಿಂದ ಬೀಚಸ್ ಆಫ್ ಇಂಡಿಯಾ ಅಭಿಯಾನ ನಿರ್ಮಿಸಲು ನಮಗೆ ಉತ್ತೇಜನ ಸಿಕ್ಕಂತಾಗಿದೆ. ಹಾಗೆಯೇ, ಆಕರ್ಷಕ ಡಿಸ್ಕೌಂಟ್, ಡೀಲ್​ಗಳನ್ನೂ ನಾವು ಆಫರ್ ಮಾಡುತ್ತಿದ್ದೇವೆ,’ ಎಂದು ಮೇಕ್ ಮೈ ಟ್ರಿಪ್​ನ ಚೀಫ್ ಮಾರ್ಕೆಟಿಂಗ್ ಅಂಡ್ ಬಿಸಿನೆಸ್ ಆಫೀಸರ್ ರಾಜ್ ರಿಷಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: EaseMyTrip: ವೈಯಕ್ತಿಕ ಲಾಭಕ್ಕಿಂತ ರಾಷ್ಟ್ರ ಹಿತಾಸಕ್ತಿ ಮುಖ್ಯ; ಮಾಲ್ಡೀವ್ಸ್ ಅಲ್ಲ, ಲಕ್ಷದ್ವೀಪ, ಅಯೋಧ್ಯೆ ಪ್ಯಾಕೇಜ್ ಕೊಡ್ತೀವಿ: ಈಸ್ ಮೈ ಟ್ರಿಪ್

ಇದಕ್ಕೂ ಮುನ್ನ ಮತ್ತೊಂದು ಆನ್​ಲೈನ್ ಟ್ರಿಪ್ ಆಯೋಜಕ ಸಂಸ್ಥೆ ಈಸ್ ಮೈ ಟ್ರಿಪ್ ಮಾಲ್ಡೀವ್ಸ್ ಸಚಿವರ ಲೇವಡಿ ಪ್ರತಿಕ್ರಿಯೆ ಬಂದ ಕೂಡಲೇ ತಮ್ಮ ಮಾಲ್ಡೀವ್ಸ್ ಫ್ಲೈಟ್ ಬುಕಿಂಗ್ಸ್​ಗಳನ್ನು ನಿಲ್ಲಿಸಲು ನಿರ್ಧರಿಸಿತ್ತು. ಅಷ್ಟೇ ಅಲ್ಲ, ಮಾಲ್ಡೀವ್ಸ್ ಪ್ರವಾಸದ ಪ್ಯಾಕೇಜ್​ಗಳನ್ನೂ ನಿಲ್ಲಿಸಿತು. ಲಕ್ಷದ್ವೀಪ ಪ್ರವಾಸಕ್ಕೆ ಶೀಘ್ರದಲ್ಲೇ ಆಕರ್ಷಕ ಪ್ಯಾಕೇಜ್ ಆಫರ್ ಮಾಡುವುದಾಗಿ ಈಸ್ ಮೈ ಟ್ರಿಪ್​ನ ಸಂಸ್ಥಾಪಕ ಪ್ರಶಾಂತ್ ಪಿಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ.

ಮಾಲ್ಡೀವ್ಸ್​ನಷ್ಟೇ ಸುಂದರವಾದ ಪರಿಸರ, ನೀರು, ಬೀಚ್​ಗಳು ಲಕ್ಷದ್ವೀಪ್​ನಲ್ಲಿವೆ. ಲಕ್ಷದ್ವೀಪ ಮತ್ತು ಅಯೋಧ್ಯೆ ಅಂತಾರಾಷ್ಟ್ರೀಯ ತಾಣವಾಗಬೇಕೆಂದು ತಾವು ಬಯಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತೀಯರ ಕೋಪ ನ್ಯಾಯಯುತವಾಗಿದೆ: ಮಾಲ್ಡೀವ್ಸ್​ ಸಂಸದೆ ಇವಾ ಅಬ್ದುಲ್ಲಾ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ ಸ್ನಾರ್ಕೆಲಿಂಗ್ ಇತ್ಯಾದಿ ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು. ಒಂದಷ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇದಾದ ಬಳಿಕ ಲಕ್ಷದ್ವೀಪವು ಆನ್ಲೈನ್​ನಲ್ಲಿ ಟ್ರೆಂಡಿಂಗ್ ಪದವಾಗಿ ಹೋಗಿತ್ತು. ಈ ಘಟನೆ ಬಗ್ಗೆ ಮಾಲ್ಡೀವ್ಸ್​ನ ಕೆಲ ಸಚಿವರು ಹಾಗೂ ಸಂಸದರು ಮತ್ತಿತರರು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದರು. ನರೇಂದ್ರ ಮೋದಿ ಮತ್ತು ಭಾರತೀಯರ ಬಗ್ಗೆ ಲೇವಡಿ ಮಾಡಿದ್ದರು. ಭಾರತದಿಂದ ಆಕ್ಷೇಪ ವ್ಯಕ್ತವಾದ ಬಳಿಕ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Mon, 8 January 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?