AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ

ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
TV9 Web
| Edited By: |

Updated on: Aug 16, 2022 | 7:36 PM

Share

Aadhaar Card: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಪ್ರಮುಖ ವೈಯಕ್ತಿಕ ದಾಖಲೆಗಳಲ್ಲಿ ಒಂದಾಗಿದೆ. ಅದು ಇಲ್ಲದೆ ಏನೂ ಆಗುವುದಿಲ್ಲ. ಸರ್ಕಾರಿ, ಖಾಸಗಿ ಹಾಗೂ ಇತರೆ ಸಣ್ಣಪುಟ್ಟ ಕೆಲಸಗಳಿಗೂ ಆಧಾರ್ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಅನೇಕ ಸರ್ಕಾರಿ ಯೋಜನೆಗಳು ಲಭ್ಯವಿಲ್ಲ. ಮೇಲಾಗಿ ಸರ್ಕಾರದ ಇತರೆ ಸವಲತ್ತುಗಳು ಸಿಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಡ್ಡಾಯವಾಗಿದೆ ಎಂದು UIDAI ಸ್ಪಷ್ಟಪಡಿಸಿದೆ.

ಇದಕ್ಕಾಗಿ ಪ್ರಾಧಿಕಾರವು ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಸಹ ಹೊರಡಿಸಿದೆ. ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ವರದಿಗಳ ಪ್ರಕಾರ.. ಇನ್ನು ಆಧಾರ್ ನಿಯಮಗಳನ್ನು ಬಿಗಿಗೊಳಿಸಲಾಗುವುದು. ಆಧಾರ್‌ಗಾಗಿ ಈಗಿರುವ ಸೂಚನೆಗಳ ಪ್ರಕಾರ.. ಒಬ್ಬ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿಲ್ಲದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸುವ ಮೂಲಕ ಸಬ್ಸಿಡಿಯನ್ನು ಪಡೆಯಬಹುದು. ಆದರೆ ಇನ್ನು ಮುಂದೆ… ಯಾರೇ ಆಗಲಿ ಆಧಾರ್ ಸಂಖ್ಯೆ ಹೊಂದಿಲ್ಲದಿದ್ದರೆ, ಅವರು ಅದಕ್ಕೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸುವ ಸಮಯದಲ್ಲಿ ರಸೀದಿ ಅಥವಾ ದಾಖಲಾತಿ ಚೀಟಿಯನ್ನು ತೋರಿಸಬೇಕು ಮತ್ತು ಸಹಾಯಧನ ಅಥವಾ ಸರ್ಕಾರದ ಯೋಜನೆಯ ಲಾಭವನ್ನು ಮಾತ್ರ ಪಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಯಾರಾದರೂ ಆಧಾರ್ ಹೊಂದಿಲ್ಲದಿದ್ದರೆ ಅಥವಾ ಅವರು ಆಧಾರ್‌ಗೆ ಅರ್ಜಿ ಸಲ್ಲಿಸದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸಿ ಸರ್ಕಾರದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ.

ಕಠಿಣವಾಗುತ್ತಿವೆ ಆಧಾರ್ ಮಾನದಂಡಗಳು: ಸಬ್ಸಿಡಿಗಳು ಮತ್ತು ವಿನಾಯಿತಿಗಳಿಗೆ ಕಡಿವಾಣ ಹಾಕಲು ಸರ್ಕಾರವು ಪ್ರಯತ್ನಗಳನ್ನು ಮುಂದುವರೆಸಿದೆ. ಈ ಮಧ್ಯೆ, ಅಕ್ರಮಗಳನ್ನು ತಡೆಯಲು ಆಧಾರ್ ಕಾರ್ಡ್ ನೆರವಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು. ಪ್ರಸ್ತುತ ಸರ್ಕಾರವು ಅಗ್ಗದ ದರದಲ್ಲಿ ಪಡಿತರ, ಅಡುಗೆ ಅನಿಲ, ಮತ್ತು ಕಡಿಮೆ ದರದಲ್ಲಿ ಸಾಲದಂತಹ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ಆಧಾರ್ ಸಹಾಯದಿಂದ ವಿತರಿಸಲಾಗುತ್ತಿದೆ. ಜೊತೆಗೆ ಪಿಎಂ ಕಿಸಾನ್ ಯೋಜನೆ ನೆರವು ದೊರಕುತ್ತಿದೆ.

To read more in Telugu click here

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ