AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ

ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
TV9 Web
| Edited By: |

Updated on: Aug 16, 2022 | 7:36 PM

Share

Aadhaar Card: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಪ್ರಮುಖ ವೈಯಕ್ತಿಕ ದಾಖಲೆಗಳಲ್ಲಿ ಒಂದಾಗಿದೆ. ಅದು ಇಲ್ಲದೆ ಏನೂ ಆಗುವುದಿಲ್ಲ. ಸರ್ಕಾರಿ, ಖಾಸಗಿ ಹಾಗೂ ಇತರೆ ಸಣ್ಣಪುಟ್ಟ ಕೆಲಸಗಳಿಗೂ ಆಧಾರ್ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಅನೇಕ ಸರ್ಕಾರಿ ಯೋಜನೆಗಳು ಲಭ್ಯವಿಲ್ಲ. ಮೇಲಾಗಿ ಸರ್ಕಾರದ ಇತರೆ ಸವಲತ್ತುಗಳು ಸಿಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಡ್ಡಾಯವಾಗಿದೆ ಎಂದು UIDAI ಸ್ಪಷ್ಟಪಡಿಸಿದೆ.

ಇದಕ್ಕಾಗಿ ಪ್ರಾಧಿಕಾರವು ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಸಹ ಹೊರಡಿಸಿದೆ. ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ವರದಿಗಳ ಪ್ರಕಾರ.. ಇನ್ನು ಆಧಾರ್ ನಿಯಮಗಳನ್ನು ಬಿಗಿಗೊಳಿಸಲಾಗುವುದು. ಆಧಾರ್‌ಗಾಗಿ ಈಗಿರುವ ಸೂಚನೆಗಳ ಪ್ರಕಾರ.. ಒಬ್ಬ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿಲ್ಲದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸುವ ಮೂಲಕ ಸಬ್ಸಿಡಿಯನ್ನು ಪಡೆಯಬಹುದು. ಆದರೆ ಇನ್ನು ಮುಂದೆ… ಯಾರೇ ಆಗಲಿ ಆಧಾರ್ ಸಂಖ್ಯೆ ಹೊಂದಿಲ್ಲದಿದ್ದರೆ, ಅವರು ಅದಕ್ಕೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸುವ ಸಮಯದಲ್ಲಿ ರಸೀದಿ ಅಥವಾ ದಾಖಲಾತಿ ಚೀಟಿಯನ್ನು ತೋರಿಸಬೇಕು ಮತ್ತು ಸಹಾಯಧನ ಅಥವಾ ಸರ್ಕಾರದ ಯೋಜನೆಯ ಲಾಭವನ್ನು ಮಾತ್ರ ಪಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಯಾರಾದರೂ ಆಧಾರ್ ಹೊಂದಿಲ್ಲದಿದ್ದರೆ ಅಥವಾ ಅವರು ಆಧಾರ್‌ಗೆ ಅರ್ಜಿ ಸಲ್ಲಿಸದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸಿ ಸರ್ಕಾರದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ.

ಕಠಿಣವಾಗುತ್ತಿವೆ ಆಧಾರ್ ಮಾನದಂಡಗಳು: ಸಬ್ಸಿಡಿಗಳು ಮತ್ತು ವಿನಾಯಿತಿಗಳಿಗೆ ಕಡಿವಾಣ ಹಾಕಲು ಸರ್ಕಾರವು ಪ್ರಯತ್ನಗಳನ್ನು ಮುಂದುವರೆಸಿದೆ. ಈ ಮಧ್ಯೆ, ಅಕ್ರಮಗಳನ್ನು ತಡೆಯಲು ಆಧಾರ್ ಕಾರ್ಡ್ ನೆರವಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು. ಪ್ರಸ್ತುತ ಸರ್ಕಾರವು ಅಗ್ಗದ ದರದಲ್ಲಿ ಪಡಿತರ, ಅಡುಗೆ ಅನಿಲ, ಮತ್ತು ಕಡಿಮೆ ದರದಲ್ಲಿ ಸಾಲದಂತಹ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ಆಧಾರ್ ಸಹಾಯದಿಂದ ವಿತರಿಸಲಾಗುತ್ತಿದೆ. ಜೊತೆಗೆ ಪಿಎಂ ಕಿಸಾನ್ ಯೋಜನೆ ನೆರವು ದೊರಕುತ್ತಿದೆ.

To read more in Telugu click here

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ