Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಫ್ಲೈಟ್ ಬುಕಿಂಗ್ ಆರಂಭಿಸಿ: ಭಾರತದ ಈಸ್ ಮೈ ಟ್ರಿಪ್ ಸಂಸ್ಥೆಗೆ ಮಾಲ್ಡೀವ್ಸ್ ಪ್ರವಾಸೋದ್ಯಮ ಮನವಿ

Ease My Trip and Maldives: ತಮ್ಮ ಪ್ಲಾಟ್​ಫಾರ್ಮ್​ನಲ್ಲಿ ಮಾಲ್ಡೀವ್ಸ್​ಗೆ ಫ್ಲೈಟ್ ಬುಕಿಂಗ್ ಮತ್ತೆ ಆರಂಭಿಸಿ ಎಂದು ಆ ದೇಶದ ಪ್ರವಾಸೋದ್ಯಮ ಸಂಸ್ಥೆಯು ಭಾರತದ ಈಸ್ ಮೈ ಟ್ರಿಪ್​ಗೆ ಮನವಿ ಮಾಡಿದೆ. ಮಾಲ್ಡೀವ್ಸ್​ನ ಸಚಿವರು ಆಡಿದ ಮಾತು ಸಾಮಾನ್ಯ ಮಾಲ್ಡೀವ್ಸ್ ಜನರ ಧ್ವನಿ ಅಲ್ಲ. ಅದನ್ನು ನಿರ್ಲಕ್ಷಿಸಿ ಎಂದು ಕೇಳಿಕೊಂಡಿದೆ.

ಮತ್ತೆ ಫ್ಲೈಟ್ ಬುಕಿಂಗ್ ಆರಂಭಿಸಿ: ಭಾರತದ ಈಸ್ ಮೈ ಟ್ರಿಪ್ ಸಂಸ್ಥೆಗೆ ಮಾಲ್ಡೀವ್ಸ್ ಪ್ರವಾಸೋದ್ಯಮ ಮನವಿ
ಮಾಲ್ಡೀವ್ಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 10, 2024 | 12:04 PM

ನವದೆಹಲಿ, ಜನವರಿ 10: ತಮ್ಮ ಪ್ಲಾಟ್​ಫಾರ್ಮ್​ನಲ್ಲಿ ಮಾಲ್ಡೀವ್ಸ್​ಗೆ ಫ್ಲೈಟ್ ಬುಕಿಂಗ್ ಮತ್ತೆ ಆರಂಭಿಸಿ ಎಂದು ಆ ದೇಶದ ಪ್ರವಾಸೋದ್ಯಮ ಸಂಸ್ಥೆಯು ಭಾರತದ ಈಸ್ ಮೈ ಟ್ರಿಪ್​ಗೆ (Ease My Trip) ಮನವಿ ಮಾಡಿದೆ. ಮಾಲ್ಡೀವ್ಸ್ ಟೂರ್ ಮತ್ತು ಟ್ರಾವಲ್ ಆಪರೇಟರ್ಸ್ ಸಂಘಟನೆ (MATATO) ಹೇಳಿಕೆ ನೀಡಿದ್ದು, ಮಾಲ್ಡೀವ್ಸ್​ನ ಸಚಿವರು ಆಡಿದ ಮಾತು ಸಾಮಾನ್ಯ ಮಾಲ್ಡೀವ್ಸ್ ಜನರ ಧ್ವನಿ ಅಲ್ಲ. ಅದನ್ನು ನಿರ್ಲಕ್ಷಿಸಿ ಎಂದು ಈಸ್ ಮೈ ಟ್ರಿಪ್ ಸಿಇಒ ನಿಶಾಂತ್ ಪಿಟ್ಟಿ ಅವರಿಗೆ ಮನವಿ ಮಾಡಿದೆ.

ಮಾಲ್ಡೀವ್ಸ್ ಸಚಿವರು ಭಾರತದ ಪ್ರಧಾನಿ ಮತ್ತು ಭಾರತೀಯ ಬಗ್ಗೆ ಅವಹೇಳನ ಮಾಡಿದ ಬಳಿಕ ಈಸ್ ಮೈ ಟ್ರಿಪ್ ಸಂಸ್ಥೆ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಮಾಲ್ಡೀವ್ಸ್ ಪ್ರವಾಸದ ಬುಕಿಂಗ್ಸ್ ರದ್ದುಗೊಳಿಸಿತ್ತು. ವೈಯಕ್ತಿಕ ಲಾಭಕ್ಕಿಂತ ರಾಷ್ಟ್ರೀಯತೆ ದೊಡ್ಡದು ಎಂದು ಹೇಳಿದ ಈಸ್ ಮೈ ಟ್ರಿಪ್ ಸಂಸ್ಥೆ ಮಾಲ್ಡೀವ್ಸ್​ಗೆ ಫ್ಲೈಟ್ ಬುಕಿಂಗ್​ಗಳನ್ನೂ ನಿಲ್ಲಿಸಿತ್ತು. ಅಂತೆಯೇ, ಸಾವಿರಾರು ಭಾರತೀಯರು ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿದ್ದಾರೆ.

ಪ್ರವಾಸೋದ್ಯಮವೇ ಪ್ರಮುಖ ಆದಾಯ ಮೂಲ ಹೊಂದಿರುವ ಮಾಲ್ಡೀವ್ಸ್​ಗೆ ಈ ಬೆಳವಣಿ ಪೆಟ್ಟು ಕೊಡುವ ಸಾಧ್ಯತೆ ಇದೆ. ಅಲ್ಲಿನ ಪ್ರವಾಸೋದ್ಯಮ ಸಂಘಟನೆಗಳು ಈ ವಿವಾದ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಇದನ್ನೂ ಓದಿ: Ayodhya: ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಯೋಧ್ಯೆ ನಗರಿ ಮಾರ್ಪಾಡು; ಇದರ ಹಿಂದಿದ್ದಾರೆ ಮಾಸ್ಟರ್ ಪ್ಲಾನರ್ ದೀಕ್ಷು ಕುಕ್ರೇಜಾ

ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸದ ಬಳಿಕ ಮಾಲ್ಡೀವ್ಸ್​ಗೆ ಹೋಗುವ ಭಾರತೀಯರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಅದರಲ್ಲೂ ಪ್ರಧಾನಿ ಬಗ್ಗೆ ಮಾಲ್ಡೀವ್ಸ್ ಸಚಿವರು ಲೇವಡಿ ಮಾಡಿದ ಬಳಿಕ ಇದು ಇನ್ನಷ್ಟು ಪರಿಣಾಮ ಬೀರಿದೆ.

ಈಸ್ ಮೈ ಟ್ರಿಪ್ ಮಾಲ್ಡೀವ್ಸ್ ಪ್ರವಾಸದ ಬುಕಿಂಗ್​ಗಳನ್ನು ರದ್ದು ಮಾಡಿದ್ದು ಮಾತ್ರವಲ್ಲ, ಲಕ್ಷದ್ವೀಪ್ ಪ್ರವಾಸಕ್ಕೆ ಆಕರ್ಷಕ ಪ್ಯಾಕೇಜ್​ಗಳನ್ನು ಸದ್ಯದಲ್ಲೇ ಘೋಷಿಸುವುದಾಗಿ ತಿಳಿಸಿದೆ. ಲಕ್ಷದ್ವೀಪ್​ನಲ್ಲಿ ಈಗಾಗಲೇ ಸೌಕರ್ಯ ವ್ಯವಸ್ಥೆಯನ್ನು (ಇನ್​ಫ್ರಾಸ್ಟ್ರಕ್ಚರ್) ಅಭಿವೃದ್ದಿಪಡಿಸಲಾಗುತ್ತಿದೆ. ಟಾಟಾ ಗ್ರೂಪ್​ನಿಂದ ಎರಡು ತಾಜ್ ಹೋಟೆಲ್​ಗಳ ನಿರ್ಮಾಣ ಆಗುತ್ತಿದೆ.

ಇದನ್ನೂ ಓದಿ: EaseMyTrip: ವೈಯಕ್ತಿಕ ಲಾಭಕ್ಕಿಂತ ರಾಷ್ಟ್ರ ಹಿತಾಸಕ್ತಿ ಮುಖ್ಯ; ಮಾಲ್ಡೀವ್ಸ್ ಅಲ್ಲ, ಲಕ್ಷದ್ವೀಪ, ಅಯೋಧ್ಯೆ ಪ್ಯಾಕೇಜ್ ಕೊಡ್ತೀವಿ: ಈಸ್ ಮೈ ಟ್ರಿಪ್

ಮಾಲ್ಡೀವ್ಸ್ ಮತ್ತು ಲಕ್ಷದ್ವೀಪ್ ಪ್ರದೇಶಗಳು ನೂರಾರು ದ್ವೀಪಗಳ ಸಮೂಹಗಳಾಗಿವೆ. ಎರಡೂ ಕೂಡ ಒಂದೇ ದ್ವೀಪ ಸಮೂಹಕ್ಕೆ ಸೇರಿದ್ದು ಎನ್ನಲಾಗಿದೆ. ಹೀಗಾಗಿ, ಮಾಲ್ಡೀವ್ಸ್​ನಲ್ಲಿರುವ ಸುಂದರ ಬೀಚ್ ಇತ್ಯಾದಿ ವಾತಾವರಣ ಲಕ್ಷದ್ವೀಪ್​ನಲ್ಲೂ ಇದೆ. ಹೀಗಾಗಿ, ಲಕ್ಷದ್ವೀಪ್ ಕೂಡ ಮಾಲ್ಡೀವ್ಸ್​ನಂತೆಯೇ ಪ್ರವಾಸಿಗರಿಗೆ ನೆಚ್ಚಿನ ಸ್ಪಾಟ್ ಎನಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್