Manappuram: ಮಣಪ್ಪುರಂ ಫೈನಾನ್ಸ್ ಸಂಸ್ಥೆಗೆ 20 ಲಕ್ಷ ರೂ ದಂಡ ಹಾಕಿದ ಆರ್​ಬಿಐ; ಕಾರಣ ಇದು

RBI Imposes Penalty On Manappuram Finance: ಎನ್​ಪಿಎ ಘೋಷಿಸುವಲ್ಲಿ ಲೋಪ ಸೇರಿದಂತೆ ಕೆಲವಾರು ನಿಯಮಗಳ ಉಲ್ಲಂಘನೆ ಕಾರಣಕ್ಕೆ ಮಣಪ್ಪುರಂ ಫೈನಾನ್ಸ್ ಕಂಪನಿಗೆ ಭಾರತೀಯ ರಿಸರ್ವ್ ಬ್ಯಾಂಕ್ 20 ಲಕ್ಷ ರೂ ದಂಡ ಹಾಕಿದೆ.

Manappuram: ಮಣಪ್ಪುರಂ ಫೈನಾನ್ಸ್ ಸಂಸ್ಥೆಗೆ 20 ಲಕ್ಷ ರೂ ದಂಡ ಹಾಕಿದ ಆರ್​ಬಿಐ; ಕಾರಣ ಇದು
ಮಣಪ್ಪುರಂ ಫೈನಾನ್ಸ್
Follow us
|

Updated on: Jun 18, 2023 | 6:11 PM

ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು (NBFC) ಪಾಲಿಸಬೇಕಾದ ಕೆಲ ನಿಯಮಗಳ ಉಲ್ಲಂಘನೆ ಮಾಡಿದ ಕಾರಣಕ್ಕೆ ಮಣಪ್ಪುರಂ ಫೈನಾನ್ಸ್ ಸಂಸ್ಥೆಗೆ (Manappuram Finance) ಭಾರತೀಯ ರಿಸರ್ವ್ ಬ್ಯಾಂಕ್ 20 ಲಕ್ಷ ರೂ ದಂಡ ವಿಧಿಸಿದೆ. ಆದರೆ, ಗ್ರಾಹಕರ ವ್ಯವಹಾರದೊಂದಿಗೆ ಕಂಪನಿ ಯಾವುದೇ ಲೋಪ ಆಗಿದೆ ಎಂದು ಅರ್ಥೈಸಿಕೊಳ್ಳಬೇಕಿಲ್ಲ. ಕೆಲ ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಕ್ಕೆ ದಂಡ ಹಾಕಲಾಗಿದೆ ಎಂದು ಆರ್​ಬಿಐ ಸ್ಪಷ್ಟಪಡಿಸಿದೆ.

ಎನ್​ಪಿಎ ಆಸ್ತಿ ಘೋಷಣೆಯಲ್ಲಿ ಲೋಪ?

ಮಣಪ್ಪುರಂ ಫೈನಾನ್ಸ್ ಕಂಪನಿಯ ಹಣಕಾಸು ಸ್ಥಿತಿಯನ್ನು ಆರ್​ಬಿಐ ಪರಿಶೀಲನೆ ನಡೆಸಿತ್ತು. ಕಂಪನಿಯ ರಿಸ್ಕ್ ಅಸೆಸ್ಮೆಂಟ್ ರಿಪೋರ್ಟ್, ಇನ್ಸ್​ಪೆಕ್ಷನ್ ರಿಪೋರ್ಟ್, ಸೂಪರ್​ವೈಸರಿ ಲೆಟರ್ ಇತ್ಯಾದಿ ದಾಖಲೆಗಳನ್ನೂ ಪರಿಶೀಲಿಸಿತ್ತು. 90 ದಿನಗಳಿಂದಲೂ ಪಾವತಿಯಾಗದೇ ಸ್ಥಗಿತಗೊಂಡಿದ್ದ ಕೆಲ ಗೋಲ್ಡ್ ಲೋನ್ ಖಾತೆಗಳನ್ನು ಎನ್​ಪಿಎ ಅಥವಾ ಅನುತ್ಪಾದಕ ಆಸ್ತಿ ಎಂದು ವರ್ಗೀಕರಿಸಲು ಕಂಪನಿ ವಿಫಲವಾಗಿದೆ. ಇದು ನಿಯಮದ ಉಲ್ಲಂಘನೆ ಎಂದು ಆರ್​ಬಿಐ ಪರಿಗಣಿಸಿದೆ.

ಇದನ್ನೂ ಓದಿPVR and Adipurush: ಆದಿಪುರುಷ್ ಎಫೆಕ್ಟ್; ಷೇರುಪೇಟೆಯಲ್ಲಿ ಮಕಾಡೆ ಬಿದ್ದ ಪಿವಿಆರ್ ಐನಾಕ್ಸ್; ಕೆಟ್ಟ ವಿಮರ್ಶೆಯ ಮಧ್ಯೆಯೂ ಪ್ರಭಾಸ್ ನಟನೆಯ ಸಿನಿಮಾ ಭರ್ಜರಿ ಓಟ

ಹಾಗೆಯೇ, 2020-21ರ ಹಣಕಾಸು ವರ್ಷದಲ್ಲಿ ಕೆಲ ಸಾಲದ ಖಾತೆಗಳಿಗೆ ಲೋನ್ಟುವ್ಯಾಲ್ಯೂ ರೇಷಿಯೋವನ್ನು ಸರಿಯಾಗಿ ಪಾಲಿಸಲಾಗಿಲ್ಲದಿರುವುದೂ ಬೆಳಕಿಗೆ ಬಂದಿದೆ. ಈ ಬಗ್ಗೆ ಮಣಪ್ಪುರಂ ಫೈನಾನ್ಸ್ ಕಂಪನಿಯಿಂದ ಆರ್​ಬಿಐ ಉತ್ತರ ಕೋರಿತ್ತು. ಇದಕ್ಕೆ ಸಮಂಜಸವಾದ ಉತ್ತರ ಬರದೇ ಹೋದ್ದರಿಂದ ಕಂಪನಿಗೆ 20 ಲಕ್ಷ ರೂ ದಂಡವನ್ನು ಆರ್​ಬಿಐ ವಿಧಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ