Doctors: ವೈದ್ಯರಿಗೆ ಯೂನಿಕ್ ಐಡಿ ಕಡ್ಡಾಯ; ದೇಶದ ಎಲ್ಲಾ ವೈದ್ಯರ ಹೆಸರು ನ್ಯಾಷನಲ್ ಮೆಡಿಕಲ್ ರಿಜಿಸ್ಟರ್​ನಲ್ಲಿ

Unique ID Number For Medical Professionals: ವೈದ್ಯಕೀಯ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ವಿಶೇಷ ಗುರುತಿನ ಸಂಖ್ಯೆ ಕೊಡಲಾಗುತ್ತಿದೆ. ಇದು ಇಲ್ಲದೇ ಯಾರೂ ವೈದ್ಯಕೀಯ ವೃತ್ತಿ ಮಾಡುವಂತಿಲ್ಲ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿಸೂಚನೆ ಹೊರಡಿಸಿದೆ.

Doctors: ವೈದ್ಯರಿಗೆ ಯೂನಿಕ್ ಐಡಿ ಕಡ್ಡಾಯ; ದೇಶದ ಎಲ್ಲಾ ವೈದ್ಯರ ಹೆಸರು ನ್ಯಾಷನಲ್ ಮೆಡಿಕಲ್ ರಿಜಿಸ್ಟರ್​ನಲ್ಲಿ
ವೈದ್ಯ
Follow us
|

Updated on: May 15, 2023 | 11:40 AM

ನವದೆಹಲಿ: ಭಾರತದಲ್ಲಿ ವೈದ್ಯಕೀಯ ವೃತ್ತಿ ನಡೆಸುವ ಎಲ್ಲಾ ವೈದ್ಯರೂ ವಿಶೇಷ ಗುರುತಿನ ಸಂಖ್ಯೆ (UID- Unique Identification Number) ಹೊಂದಿರುವುದು ಕಡ್ಡಾಯ. ನ್ಯಾಷನಲ್ ಮೆಡಿಕಲ್ ಕಮಿಷನ್​ನ (NMC- National Medical Commission) ಎಥಿಕ್ಸ್ ಬೋರ್ಡ್ ಈ ಯೂನಿಕ್ ಐಡಿಯನ್ನು ಒದಗಿಸುತ್ತದೆ. ಭಾರತದಲ್ಲಿ ವೈದ್ಯಕೀಯ ಸೇವೆ ನೀಡಲು ವೈದ್ಯರಿಗೆ ಇದು ಅಗತ್ಯವಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧಿಸೂಚನೆಯಲ್ಲಿ ಇದನ್ನು ಪ್ರಕಟಿಸಲಾಗಿದೆ. ದೇಶದಲ್ಲಿರುವ ಎಲ್ಲಾ ನೊಂದಾಯಿತ ವೈದ್ಯರ ರಾಷ್ಟ್ರೀಯ ವೈದ್ಯಕೀಯ ನೊಂದಣಿ (NMR- National Medical Register) ಇಡಲಾಗುತ್ತದೆ. ಎನ್​ಎಂಸಿಯ ಎಥಿಕ್ಸ್ ಮತ್ತು ಮೆಡಿಕಲ್ ರಿಜಿಸ್ಟ್ರೇಷನ್ ಬೋರ್ಡ್ ಈ ರಿಜಿಸ್ಟರ್ ಅನ್ನು ನಿರ್ವಹಿಸುತ್ತದೆ.

ರಾಜ್ಯ ವೈದ್ಯಕೀಯ ಮಂಡಳಿಗಳ ರಿಜಿಸ್ಟರ್​ಗಳಲ್ಲಿರುವ ಎಲ್ಲಾ ನೊಂದಾಯಿತ ವೈದ್ಯರನ್ನು ರಾಷ್ಟ್ರೀಯ ವೈದ್ಯಕೀಯ ರಿಜಿಸ್ಟರ್​ಗೆ ಸೇರಿಸಲಾಗುತ್ತದೆ. ಈ ರಿಜಿಸ್ಟರ್​ನಲ್ಲಿ ವೈದ್ಯರ ಸ್ಪೆಷಲ್ ಕ್ವಾಲಿಫಿಕೇಶನ್, ತೇರ್ಗಡೆ ವರ್ಷ, ಯೂನಿವರ್ಸಿಟಿ ಅಥವಾ ಶಿಕ್ಷಣ ಸಂಸ್ಥೆಯ ಹೆಸರು, ಕೆಲಸ ಮಾಡುವ ಸಂಸ್ಥೆ ಹೆಸರು ಇತ್ಯಾದಿ ವಿವರಗಳು ಇರುತ್ತವೆ. ಈ ಎಲ್ಲಾ ದತ್ತಾಂಶಗಳನ್ನು ಎನ್​ಎಂಸಿಯ ಅಧಿಕೃತ ವೆಬ್​ಸೈಟ್ www.nmc.org.in ಅನ್ನು ಯಾರು ಬೇಕಾದರೂ ವೀಕ್ಷಿಸಬಹುದು.

ಇದನ್ನೂ ಓದಿMultibagger: ಒಂದು ವರ್ಷದಲ್ಲಿ 16 ಪಟ್ಟು ಹೆಚ್ಚು ಲಾಭ; ಶೇ. 30 ಡಿವಿಡೆಂಡ್; ಸೌತ್ ಇಂಡಿಯನ್ ಬ್ಯಾಂಕ್​ನ ಷೇರಿಗೆ ಸಖತ್ ಬೇಡಿಕೆ

ಪ್ರತೀ 5 ವರ್ಷಕ್ಕೆ ವೈದ್ಯರು ಪರವಾನಿಗೆ ನವೀಕರಿಸಬೇಕು

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧಿಸೂಚನೆ ಪ್ರಕಾರ ವೈದ್ಯಕೀಯ ವೃತ್ತಿಯಲ್ಲಿರುವವರು ಪ್ರತೀ 5 ವರ್ಷಕ್ಕೆ ಲೈಸೆನ್ಸ್ ನವೀಕರಿಸಬೇಕು ಎಂದು ಸೂಚಿಸಿದೆ. ಪರವಾನಿಗೆ ಅವಧಿ ಮುಗಿಯುವ ದಿನಕ್ಕೆ ಕನಿಷ್ಠ 3 ತಿಂಗಳು ಮುಂಚೆ ರಿನಿವಲ್​ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆದರೆ, ಪರವಾನಿಗೆ ನವೀಕರಣಕ್ಕೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಪರವಾನಿಗೆ ನವೀಕರಣಕ್ಕೆ ಅರ್ಜಿಯನ್ನು ರಾಜ್ಯ ವೈದ್ಯಕೀಯ ಮಂಡಳಿಗೆ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ರಾಜ್ಯ ಮಂಡಳಿಯು ಲೈಸೆನ್ಸ್ ನವೀಕರಣಕ್ಕೆ ನಿರಾಕರಿಸಿದರೆ ಆ ವೈದ್ಯರು ಎನ್​ಎಂಸಿಯ ಎಥಿಮ್ಸ್ ಅಂಡ್ ಮೆಡಿಕಲ್ ರೆಗ್ಯುಲೇಶನ್ ಬೋರ್ಡ್​ಗೆ ಮನವಿ ಮಾಡಬಹುದು. ಆದರೆ, ಇದು 30 ದಿನದೊಳಗೆ ಆಗಬೇಕು. ಅಂದರೆ ಲೈಸೆನ್ಸ್ ನವೀಕರಣ ಅರ್ಜಿ ತಿರಸ್ಕೃತವಾಗಿ 30 ದಿನದೊಳಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ರಾಜ್ಯ ವೈದ್ಯಕೀಯ ಮಂಡಳಿಗೆ ಸಲ್ಲಿಸಿದ ಮೂಲ ಅರ್ಜಿಯನ್ನು ಸೇರಿಸಿ ಎನ್​ಎಂಸಿಯ ಕಾರ್ಯದರ್ಶಿಗೆ ವೈದ್ಯರು ಮೇಲ್ಮನವಿ ಹೋಗಬಹುದು. ಇದಕ್ಕೆ ಪ್ರೋಸಸಿಂಗ್ ಶುಲ್ಕ ಇರುತ್ತದೆ.

ಇದನ್ನೂ ಓದಿBill Gates: ನಾನು ಓದುವಾಗಲೇ ತಿಳಿಯಬೇಕಿತ್ತು: 5 ಸೂತ್ರ ಬಿಚ್ಚಿಟ್ಟ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್

30 ದಿನದೊಳಗೆ ಈ ಮೇಲ್ಮನವಿ ಅರ್ಜಿಯ ಬಗ್ಗೆ ಅಂತಿಮ ತೀರ್ಮಾನ ಆಗುತ್ತದೆ. ಈ ತೀರ್ಮಾನವೇ ಅಂತಿಮ ಆಗಿರುತ್ತದೆ. ಲೈಸೆನ್ಸ್ ನವೀಕರಿಸಬೇಕೆಂದು ಇಲ್ಲಿ ತೀರ್ಮಾನವಾದಲ್ಲಿ ರಾಜ್ಯ ವೈದ್ಯಕೀಯ ಮಂಡಳಿ ಅದನ್ನು ತಪ್ಪದೇ ಪಾಲಿಸಬೇಕು. ಒಂದು ವೇಳೆ, ಈ ಮೊದಲ ಮನವಿ ಅರ್ಜಿ ತಿರಸ್ಕೃತವಾದಲ್ಲಿ ಎರಡನೇ ಬಾರಿ ಮೇಲ್ಮನವಿ ಸಲ್ಲಿಸುವ ಅವಕಾಶವೂ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್