Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಲ್ಲಿ ಸಂಜೆ ಬ್ಯಾಚ್ ಮಾಡಿದ್ರೆ ಯಾರಿಗೆ ಲಾಭ?; ಷೇರುಮಾರುಕಟ್ಟೆಯಲ್ಲಿ ಟ್ರೇಡಿಂಗ್ ಅವಧಿ ವಿಸ್ತರಿಸುವ ಪ್ರಸ್ತಾಪಕ್ಕೆ ವ್ಯಂಗ್ಯ

Extended Trading Session: ಸಂಜೆ 9 ಗಂಟೆಯವರೆಗೂ ಟ್ರೇಡಿಂಗ್ ಸೆಷನ್ ಅವಧಿ ವಿಸ್ತರಿಸಲು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಮಾಡಿರುವ ಪ್ರಸ್ತಾಪಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಟ್ರೇಡರ್​ಗಳು ಈ ಪ್ರಸ್ತಾಪವನ್ನು ವಿರೋಧಿಸಿದ್ದಾರೆ. ಈ ಕ್ರಮ ಜಾರಿಯಾದರೆ ಷೇರು ವಿನಿಮಯ ಕೇಂದ್ರಕ್ಕೆ ಲಾಭ ಆಗುತ್ತದೆ ಹೊರತು ಟ್ರೇಡರ್​ಗಳಿಗೆ ಯಾವ ಲಾಭವೂ ಆಗುವುದಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕಾಲೇಜಲ್ಲಿ ಸಂಜೆ ಬ್ಯಾಚ್ ಮಾಡಿದ್ರೆ ಯಾರಿಗೆ ಲಾಭ?; ಷೇರುಮಾರುಕಟ್ಟೆಯಲ್ಲಿ ಟ್ರೇಡಿಂಗ್ ಅವಧಿ ವಿಸ್ತರಿಸುವ ಪ್ರಸ್ತಾಪಕ್ಕೆ ವ್ಯಂಗ್ಯ
ಷೇರು ಮಾರುಕಟ್ಟೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 29, 2023 | 12:35 PM

ಮುಂಬೈ, ಸೆಪ್ಟೆಂಬರ್ 29: ಸಂಜೆ 9 ಗಂಟೆಯವರೆಗೂ ಟ್ರೇಡಿಂಗ್ ಸೆಷನ್ ಅವಧಿ ವಿಸ್ತರಿಸಲು (extended trading session) ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಮಾಡಿರುವ ಪ್ರಸ್ತಾಪಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಟ್ರೇಡರ್​ಗಳು ಈ ಪ್ರಸ್ತಾಪವನ್ನು ವಿರೋಧಿಸಿದ್ದಾರೆ. ಈ ಕ್ರಮ ಜಾರಿಯಾದರೆ ಷೇರು ವಿನಿಮಯ ಕೇಂದ್ರಕ್ಕೆ ಲಾಭ ಆಗುತ್ತದೆ ಹೊರತು ಟ್ರೇಡರ್​ಗಳಿಗೆ ಯಾವ ಲಾಭವೂ ಆಗುವುದಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಆದರೆ, ಜಾಗತಿಕ ಮಾರುಕಟ್ಟೆಯೊಂದಿಗೆ ತಾಳೆಯಾಗುವ ಸಲುವಾಗಿ ಟ್ರೇಡಿಂಗ್ ಅವಧಿ ವಿಸ್ತರಿಸುತ್ತಿರುವುದಾಗಿ ಎನ್​ಎಸ್​ಇ ಹೇಳಿದೆ. ಆದರೆ, ಇದು ಪ್ರಾಯೋಗಿಕವಾಗಿ ಅಸಾಧ್ಯ ಎಂಬುದು ವಿರೋಧಿಗಳ ತಗಾದೆ. ಒಬ್ಬರಂತೂ ಈ ಟ್ರೇಡಿಂಗ್ ಅವಧಿ ವಿಸ್ತರಿಸುವ ಆಲೋಚನೆಯನ್ನು ಕಾಲೇಜಿನಲ್ಲಿ ಎರಡನೇ ಬ್ಯಾಚ್ ಆರಂಭಿಸುವ ಕ್ರಮಕ್ಕೆ ಹೋಲಿಸಿದ್ದಾರೆ.

‘ನಾನಿರುವ ಸ್ಥಳದ ಬಳಿ ಇರುವ ಒಂದು ಕಾಲೇಜಿನಲ್ಲಿ ತರಗತಿಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುತ್ತಿದ್ದವು. ಇನ್ನಷ್ಟು ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅನುಕೂಲವಾಗುತ್ತದೆಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆಗೆಯವರೆಗೆ ಇನ್ನೊಂದು ಬ್ಯಾಚ್ ಆರಂಭಿಸುವುದಾಗಿ ಕಾಲೇಜು ಹೇಳಿತು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ಎಂದು ಕಾಲೇಜು ಹೇಳಿತಾದರೂ ವಾಸ್ತವವಾಗಿ ಅದು ಕಾಲೇಜಿಗೆ ಹೆಚ್ಚು ಆದಾಯ ಸೃಷ್ಟಿಸಿಕೊಳ್ಳಲು ಮಾಡಿದ ಐಡಿಯಾ’ ಎಂದು ಕೃಪಾಕರನ್ ರಾಜೇಂದ್ರನ್ ಎಂಬ ಷೇರು ಟ್ರೇಡರ್ ಹೇಳಿದ್ದಾರೆ.

‘ಟ್ರೇಡಿಂಗ್ ಅವಧಿಯನ್ನು ಹೆಚ್ಚಿಸುವುದರಿಂದ ಅತಿಹೆಚ್ಚು ಲಾಭವಾಗುವುದು ಎಕ್ಸ್​ಚೇಂಜ್​ಗಳಿಗೆ. ಷೇರು ವಿನಿಮಯ ಕೇಂದ್ರಗಳಿಗೆ ಹೆಚ್ಚುವರಿ ಆದಾಯ ಮೂಲ ಸೃಷ್ಟಿಯಾಗುತ್ತದೆ. ಡಿಸ್ಕೌಂಟ್ ಬ್ರೋಕರ್​ಗಳಿಗೂ ಲಾಭ ಆಗಬಹುದು’ ಎಂದು ರಾಜೇಂದ್ರನ್ ಹೇಳಿದರೆಂದು ಮನಿಕಂಟ್ರೋಲ್ ವರದಿ ಮಾಡಿದೆ.

ಇದನ್ನೂ ಓದಿ: ಎರಡು ಸಾವಿರ ರೂ ನೋಟುಗಳ ವಿನಿಮಯಕ್ಕೆ ಡೆಡ್​ಲೈನ್ ವಿಸ್ತರಣೆ; ಅಕ್ಟೋಬರ್​ವರೆಗೂ ಕಾಲಾವಕಾಶ ಸಿಗುವ ಸಾಧ್ಯತೆ

ಟ್ರೇಡಿಂಗ್ ಅವಧಿ ಹೇಗೆ ವಿಸ್ತರಣೆ?

ಷೇರು ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಅವಧಿ ಬೆಳಗ್ಗೆ 9:15ರಿಂದ ಮಧ್ಯಾಹ್ನ 3:30ರವರೆಗೂ ಇದೆ. ಇದಾದ ಬಳಿಕ ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ ಅನ್ನು ರಾತ್ರಿ 11:30ರವರೆಗೂ ವಿಸ್ತರಿಸುವ ಪ್ರಸ್ತಾವನೆ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿದೆ. ಮೊದಲ ಹಂತದಲ್ಲಿ, ಎಫ್ ಅಂಡ್ ಒ ಇಂಡೆಕ್ಸ್ ಟ್ರೇಡಿಂಗ್ ಅನ್ನು ಸಂಜೆ 6ಗಂಟೆಯಿಂದ 9 ಗಂಟೆಗೆ ವಿಸ್ತರಿಸುವ ಉದ್ದೇಶ ಇದೆ.

ಎರಡನೇ ಹಂತದಲ್ಲಿ ಈ ಅವಧಿಯನ್ನು ರಾತ್ರಿ 11:30ರವರೆಗೆ ವಿಸ್ತರಿಸಲಾಗುತ್ತದೆ. ಮೂರನೇ ಹಂತದಲ್ಲಿ ಕ್ಯಾಷ್ ಮಾರ್ಕೆಟ್ ಟ್ರೇಡಿಂಗ್ ಅವಧಿಯನ್ನೂ ಸಂಜೆ 5 ಗಂಟೆಯವರೆಗೆ ವಿಸ್ತರಿಸುವ ಆಲೋಚನೆ ಎನ್​ಎಸ್​ಇನದ್ದು.

ಮಾರುಕಟ್ಟೆ ಸಂಚಲನಕ್ಕೆ ಕಾರಣವಾಗುವ ಸುದ್ದಿಗಳು ಬರುವುದು ಸಂಜೆಯ ನಂತರವಾದ್ದರಿಂದ ಅದಕ್ಕೆ ಅನುಗುಣವಾಗಿ ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ ಅವಧಿಯನ್ನು ವಿಸ್ತರಿಸುವುದು ಅನುಕೂಲಕರ ಎಂಬುದು ಲೆಕ್ಕಾಚಾರ.

ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲನ್ಸ್ ಇಲ್ಲದಿದ್ದರೆ ದಂಡ ಎಷ್ಟು ಕಟ್ಟಬೇಕು? ಶೂನ್ಯ ಬ್ಯಾಲನ್ಸ್ ಇದ್ದರೆ ಏನಾಗುತ್ತದೆ? ಇಲ್ಲಿದೆ ಡೀಟೇಲ್ಸ್

ಟ್ರೇಡರ್ ವೈಯಕ್ತಿಕ ಜೀವನ, ಸಂಶೋಧನೆ ಕಥೆ ಕಷ್ಟ ಕಷ್ಟ…

ಟ್ರೇಡರ್ ಆದವರಿಗೆ ಮಾರುಕಟ್ಟೆ ಸಂಶೋಧನೆ ಬಹಳ ಅಗತ್ಯ. ವಿವಿಧ ಕ್ಷೇತ್ರಗಳು ಮತ್ತು ಕಂಪನಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಕಷ್ಟು ಅವಧಿ ವ್ಯಯಿಸಬೇಕಾಗುತ್ತದೆ. ಟ್ರೇಡಿಂಗ್ ಅವಧಿ ವಿಸ್ತರಿಸಿಬಿಟ್ಟರೆ ಈ ರೀಸರ್ಚ್ ಕಾರ್ಯಕ್ಕೆ ಕಷ್ಟವಾಗುತ್ತದೆ. ಟ್ರೇಡರ್​ನ ವೈಯಕ್ತಿಕ ಜೀವನಕ್ಕೂ ಕಷ್ಟವಾಗುತ್ತದೆ ಎಂಬ ಅಭಿಪ್ರಾಯ ಇದೆ.

ಟ್ರೇಡಿಂಗ್ ಅವಧಿ ವಿಸ್ತರಣೆಯಿಂದ ಟ್ರೇಡರ್​ಗಳಿಗೆ ಲಾಭವೂ ಆಗುವುದಿಲ್ಲ. ಅವರ ವರ್ಕ್ ಲೈಫ್ ಬ್ಯಾಲನ್ಸ್ ತಪ್ಪಿಹೋಗುತ್ತದೆ. ಷೇರುವಿನಿಮಯ ಕೇಂದ್ರಕ್ಕೆ ಹೆಚ್ಚುವರಿ ಆದಾಯ ಸೃಷ್ಟಿಯಾಗುತ್ತದೆಯೇ ಹೊರತು ಬೇರೇನಿಲ್ಲ ಎಂದು ಸಾಕಷ್ಟು ಟ್ರೇಡರ್​ಗಳು ಹೇಳಿರುವುದುಂಟು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ