AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meta: ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರ್​ ರದ್ದುಗೊಳಿಸಿದ ಮೆಟಾ

ಇತ್ತೀಚೆಗಷ್ಟೇ ಉದ್ಯೋಗಿಗಳ ಸಾಮೂಹಿಕ ವಜಾ ನಿರ್ಧಾರ ಕೈಗೊಂಡಿದ್ದ ಮಾರ್ಕ್ ಝುಕರ್​​ಬರ್ಗ್​ ಒಡೆತನದ ಮೆಟಾ ಇದೀಗ ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರನ್ನೂ ರದ್ದುಗೊಳಿಸಿದೆ. ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಕಠಿಣ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ಹೇಳಿದೆ.

Meta: ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರ್​ ರದ್ದುಗೊಳಿಸಿದ ಮೆಟಾ
ಮೆಟಾ
Follow us
TV9 Web
| Updated By: Ganapathi Sharma

Updated on:Jan 12, 2023 | 4:52 PM

ನವದೆಹಲಿ: ಇತ್ತೀಚೆಗಷ್ಟೇ ಉದ್ಯೋಗಿಗಳ ಸಾಮೂಹಿಕ ವಜಾ ನಿರ್ಧಾರ ಕೈಗೊಂಡಿದ್ದ ಮಾರ್ಕ್ ಝುಕರ್​​ಬರ್ಗ್(Mark Zuckerberg) ಒಡೆತನದ ಮೆಟಾ (Meta) ಇದೀಗ ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರನ್ನೂ ರದ್ದುಗೊಳಿಸಿದೆ. ಜಾಗತಿಕ ಆರ್ಥಿಕ ಹಿಂಜರಿತ (Global Recession) ಮತ್ತು ಕಠಿಣ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ಹೇಳಿದೆ. ಸದ್ಯದ ಪರಿಸ್ಥಿತಿಯಲ್ಲಿ ನೇಮಕಾತಿ ಅಗತ್ಯಗಳ ಬಗ್ಗೆ ನಾವು ಪರಾಮರ್ಶಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸಣ್ಣ ಸಂಖ್ಯೆಯ ಪೂರ್ಣಾವಧಿ ಉದ್ಯೋಗದ ಆಫರ್​​ಗಳನ್ನು ರದ್ದುಗೊಳಿಸಬೇಕಾಗಿ ಬಂದಿದೆ ಎಂದು ಮೆಟಾ ವಕ್ತಾರರು ಅಮೆರಿಕ ಮೂಲದ ಟೆಕ್ ವೆಬ್​ಸೈಟ್​​ ‘ಟೆಕ್​ಕ್ರಂಚ್’ಗೆ ತಿಳಿಸಿದ್ದಾರೆ.

2023ರಲ್ಲಿ ನೇಮಕಾತಿ ಹೊಂದಾಣಿಕೆ, ಆದ್ಯತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. ಮೆಟಾದ 11,000 ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ 2022ರ ನವೆಂಬರ್​ನಲ್ಲಿ ಮಾರ್ಕ್ ಝುಕರ್​​ಬರ್ಗ್ ಘೋಷಿಸಿದ್ದರು.

ಇದನ್ನೂ ಓದಿ: Meta: ಟಾಟಾ ಕ್ಲಿಕ್ ಮಾಜಿ ಸಿಇಒ ವಿಕಾಸ್ ಪುರೋಹಿತ್​ಗೆ ಮೆಟಾ ಉನ್ನತ ಹುದ್ದೆ

ಮೆಟಾದ ಲಂಡನ್ ಕಚೇರಿಯಲ್ಲಿ ಸುಮಾರು 20 ಪೂರ್ಣಾವಧಿ ಉದ್ಯೋಗದ ಆಫರ್​​ ಅನ್ನು ಇತ್ತಿಚೆಗೆ ರದ್ದುಪಡಿಸಲಾಗಿತ್ತು ಎಂದು ಎಂಜಿನಿಯರ್, ಬರಹಗಾರ ಗಾರ್ಗ್​​ಲಿ ಒರೊಝ್​ ಟ್ವೀಟ್ ಮಾಡಿದ್ದಾರೆ. 2023ರಲ್ಲಿ ಲಂಡನ್​ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಬೇಸಗೆ ಇಂಟರ್ನ್​ಶಿಪ್​ ಅನ್ನು ರದ್ದುಗೊಳಿಸುವುದಾಗಿ ಮೆಟಾ ಇತ್ತೀಚೆಗೆ ತಿಳಿಸಿತ್ತು. ಇಂಟರ್ನ್​ಶಿಪ್ ಅನ್ನು 2023ರ ಜನವರಿಯಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು.

ಸಾಮಾಜಿಕ ಮಾಧ್ಯಮಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಮ್ ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್​ಆ್ಯಪ್ ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ 11,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ಮಾರ್ಕ್ ಝುಕರ್​ಬರ್ಗ್ ನವೆಂಬರ್​​ನಲ್ಲಿ ಘೋಷಿಸಿದ್ದರು. ಜತೆಗೆ ಅನಿವಾರ್ಯವಾಗಿ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ಉದ್ಯೋಗಿಗಳ ಬಳಿ ಕ್ಷಮೆಯಾಚಿಸಿದ್ದರು. ಮೆಟಾ ಕಂಪನಿಯ ಅಂಗಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಗೆ ತಡೆ ಒಡ್ಡಿರುವುದು ಮುಂದುವರಿಯಲಿದೆ ಎಂದೂ ಅವರು ಹೇಳಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 12 January 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ