AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meta: ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರ್​ ರದ್ದುಗೊಳಿಸಿದ ಮೆಟಾ

ಇತ್ತೀಚೆಗಷ್ಟೇ ಉದ್ಯೋಗಿಗಳ ಸಾಮೂಹಿಕ ವಜಾ ನಿರ್ಧಾರ ಕೈಗೊಂಡಿದ್ದ ಮಾರ್ಕ್ ಝುಕರ್​​ಬರ್ಗ್​ ಒಡೆತನದ ಮೆಟಾ ಇದೀಗ ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರನ್ನೂ ರದ್ದುಗೊಳಿಸಿದೆ. ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಕಠಿಣ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ಹೇಳಿದೆ.

Meta: ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರ್​ ರದ್ದುಗೊಳಿಸಿದ ಮೆಟಾ
ಮೆಟಾ
TV9 Web
| Edited By: |

Updated on:Jan 12, 2023 | 4:52 PM

Share

ನವದೆಹಲಿ: ಇತ್ತೀಚೆಗಷ್ಟೇ ಉದ್ಯೋಗಿಗಳ ಸಾಮೂಹಿಕ ವಜಾ ನಿರ್ಧಾರ ಕೈಗೊಂಡಿದ್ದ ಮಾರ್ಕ್ ಝುಕರ್​​ಬರ್ಗ್(Mark Zuckerberg) ಒಡೆತನದ ಮೆಟಾ (Meta) ಇದೀಗ ಮೊದಲ ಬಾರಿಗೆ ಪೂರ್ಣಾವಧಿ ಉದ್ಯೋಗದ ಆಫರನ್ನೂ ರದ್ದುಗೊಳಿಸಿದೆ. ಜಾಗತಿಕ ಆರ್ಥಿಕ ಹಿಂಜರಿತ (Global Recession) ಮತ್ತು ಕಠಿಣ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ಹೇಳಿದೆ. ಸದ್ಯದ ಪರಿಸ್ಥಿತಿಯಲ್ಲಿ ನೇಮಕಾತಿ ಅಗತ್ಯಗಳ ಬಗ್ಗೆ ನಾವು ಪರಾಮರ್ಶಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸಣ್ಣ ಸಂಖ್ಯೆಯ ಪೂರ್ಣಾವಧಿ ಉದ್ಯೋಗದ ಆಫರ್​​ಗಳನ್ನು ರದ್ದುಗೊಳಿಸಬೇಕಾಗಿ ಬಂದಿದೆ ಎಂದು ಮೆಟಾ ವಕ್ತಾರರು ಅಮೆರಿಕ ಮೂಲದ ಟೆಕ್ ವೆಬ್​ಸೈಟ್​​ ‘ಟೆಕ್​ಕ್ರಂಚ್’ಗೆ ತಿಳಿಸಿದ್ದಾರೆ.

2023ರಲ್ಲಿ ನೇಮಕಾತಿ ಹೊಂದಾಣಿಕೆ, ಆದ್ಯತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. ಮೆಟಾದ 11,000 ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ 2022ರ ನವೆಂಬರ್​ನಲ್ಲಿ ಮಾರ್ಕ್ ಝುಕರ್​​ಬರ್ಗ್ ಘೋಷಿಸಿದ್ದರು.

ಇದನ್ನೂ ಓದಿ: Meta: ಟಾಟಾ ಕ್ಲಿಕ್ ಮಾಜಿ ಸಿಇಒ ವಿಕಾಸ್ ಪುರೋಹಿತ್​ಗೆ ಮೆಟಾ ಉನ್ನತ ಹುದ್ದೆ

ಮೆಟಾದ ಲಂಡನ್ ಕಚೇರಿಯಲ್ಲಿ ಸುಮಾರು 20 ಪೂರ್ಣಾವಧಿ ಉದ್ಯೋಗದ ಆಫರ್​​ ಅನ್ನು ಇತ್ತಿಚೆಗೆ ರದ್ದುಪಡಿಸಲಾಗಿತ್ತು ಎಂದು ಎಂಜಿನಿಯರ್, ಬರಹಗಾರ ಗಾರ್ಗ್​​ಲಿ ಒರೊಝ್​ ಟ್ವೀಟ್ ಮಾಡಿದ್ದಾರೆ. 2023ರಲ್ಲಿ ಲಂಡನ್​ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಬೇಸಗೆ ಇಂಟರ್ನ್​ಶಿಪ್​ ಅನ್ನು ರದ್ದುಗೊಳಿಸುವುದಾಗಿ ಮೆಟಾ ಇತ್ತೀಚೆಗೆ ತಿಳಿಸಿತ್ತು. ಇಂಟರ್ನ್​ಶಿಪ್ ಅನ್ನು 2023ರ ಜನವರಿಯಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು.

ಸಾಮಾಜಿಕ ಮಾಧ್ಯಮಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಮ್ ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್​ಆ್ಯಪ್ ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ 11,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ಮಾರ್ಕ್ ಝುಕರ್​ಬರ್ಗ್ ನವೆಂಬರ್​​ನಲ್ಲಿ ಘೋಷಿಸಿದ್ದರು. ಜತೆಗೆ ಅನಿವಾರ್ಯವಾಗಿ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ಉದ್ಯೋಗಿಗಳ ಬಳಿ ಕ್ಷಮೆಯಾಚಿಸಿದ್ದರು. ಮೆಟಾ ಕಂಪನಿಯ ಅಂಗಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಗೆ ತಡೆ ಒಡ್ಡಿರುವುದು ಮುಂದುವರಿಯಲಿದೆ ಎಂದೂ ಅವರು ಹೇಳಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 12 January 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ