AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm: ಪೇಟಿಎಂನ ಶೇ 75ರಷ್ಟು ಮಾರುಕಟ್ಟೆ ಬಂಡವಾಳ ಮೌಲ್ಯ ನಾಲ್ಕು ತಿಂಗಳಲ್ಲಿ ಉಡೀಸ್

ಪೇಟಿಎಂ ಕಂಪೆನಿ ಮಾತೃಸಂಸ್ಥೆಯಾದ ಒನ್​97 ಕಮ್ಯುನಿಕೇಷನ್ಸ್​ ಮಾರುಕಟ್ಟೆ ಬಂಡವಾಳ ಮೌಲ್ಯವು ಶೇ 75ರಷ್ಟು ಕೊಚ್ಚಿಹೋಗಿದೆ. ಷೇರಿನ ಬೆಲೆ ವಾರ್ಷಿಕ ಕನಿಷ್ಠ ಮಟ್ಟವನ್ನು ಮುಟ್ಟಿದೆ.

Paytm: ಪೇಟಿಎಂನ ಶೇ 75ರಷ್ಟು ಮಾರುಕಟ್ಟೆ ಬಂಡವಾಳ ಮೌಲ್ಯ ನಾಲ್ಕು ತಿಂಗಳಲ್ಲಿ ಉಡೀಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 22, 2022 | 1:18 PM

Share

ಷೇರು ಮಾರ್ಕೆಟ್​ನಲ್ಲಿ ಲಾಭದ ಸನ್ನಿವೇಶಗಳು ಪಾಠ ಕಲಿಸುವುದಷ್ಟೇ ಅಲ್ಲ, ನಷ್ಟ ಸಹ ಅದರದೇ ಪಾಠಗಳನ್ನು ಹೇಳುತ್ತವೆ. ಈಗಿನ ಉದಾಹರಣೆಯನ್ನೇ ನೋಡಿ, ಅಂದರೆ ಒನ್​97 ಕಮ್ಯುನಿಕೇಷನ್ಸ್ (Paytm) ಷೇರುಗಳ ಬೆಲೆ ಅದ್ಯಾವ ಪರಿ ದರ ಕುಸಿದಿದೆ ಅಂದರೆ, ಉಹುಂ ನೀವೇ ಇಲ್ಲಿನ ಲೆಕ್ಕಾಚಾರವನ್ನು ಓದಿ. ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಷೇರಿನ ಬೆಲೆ ವಾರ್ಷಿಕ ಕನಿಷ್ಠ ಮಟ್ಟದ ಕೆಟ್ಟ ದಾಖಲೆಯನ್ನು ಬರೆಯಿತು ಹೂಡಿಕೆದಾರರು ಈ ಸ್ಟಾಕ್​ನಲ್ಲಿ ಹಣ ಕಳೆದುಕೊಳ್ಳುವುದು ಮುಂದುವರಿದಿದೆ. ಬಿಎಸ್​ಇ ಸೂಚ್ಯಂಕದಲ್ಲಿ ಫಿನ್​ಟೆಕ್​ ಕಂಪೆನಿಯಾದ ಪೇಟಿಎಂನ ಮಾತೃ ಸಂಸ್ಥೆಯಾದ ಒನ್​97 ಕಮ್ಯುನಿಕೇಷನ್ಸ್​ ಷೇರಿನ ಬೆಲೆ ವಾರ್ಷಿಕ ಕನಿಷ್ಠ ಮಟ್ಟವಾದ 541.20 ರೂಪಾಯಿ ತಲುಪಿತ್ತು. ಈಗಿನ ಹೊಸ ಕುಸಿತದೊಂದಿಗೆ ಪೇಟಿಎಂನಲ್ಲಿ ಹಣ ಹೂಡಿದವರ ಆಸ್ತಿ ಶೇ 75ರಷ್ಟು ಕೊಚ್ಚಿಹೋಗಿದೆ. ಈ ಸ್ಟಾಕ್​ ಅನ್ನು 2150 ರೂಪಾಯಿಗೆ ಐಪಿಒದಲ್ಲಿ ವಿತರಿಸಲಾಗಿತ್ತು. ಆ ನಂತರ 2021ನೇ ಇಸವಿಯ ನವೆಂಬರ್​ನಲ್ಲಿ ಲಿಸ್ಟಿಂಗ್ ಆಗಿತ್ತು.

ಪೇಟಿಎಂ ಸ್ಟಾಕ್ ಲಿಸ್ಟಿಂಗ್ ಆದಾಗಿನಿಂದ ಮಾರುಕಟ್ಟೆ ಬಂಡವಾಳ ಮೌಲ್ಯ 1.03 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರದಿ ಸಿದ್ಧವಾಗುವ ಹೊತ್ತಿಗೆ ಮಾರುಕಟ್ಟೆ ಬಂಡವಾಳ ಅಂತ ಇದ್ದದ್ದು 35,500 ಕೋಟಿ ರೂಪಾಯಿಗಿಂತ ಸ್ವಲ್ಪ ಹೆಚ್ಚು ಮಾತ್ರ. ಐಪಿಒ ಸಂದರ್ಭದಲ್ಲಿ ಇದ್ದದ್ದು 1.38 ಲಕ್ಷ ಕೋಟಿ ರೂಪಾಯಿ. ಮಾರ್ಚ್ 11, 2022ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಪೇಟಿಎಂ ಪೇಮೆಂಟ್ಸ್​ ಬ್ಯಾಂಕ್​ ಅನ್ನು ಹೊಸದಾಗಿ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ನಿಷೇಧಿಸಿತ್ತು. ಕೆಲವು ನಿಗಾ ಆತಂಕದ ಕಾರಣಕ್ಕೆ ತಕ್ಷಣದಿಂದಲೇ ಅನ್ವಯ ಆಗುವಂತೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವಂತಿಲ್ಲ ಎಂದಿತ್ತು.

ಅಂದಹಾಗೆ ಜಾಗತಿಕ ಬ್ರೋಕರೇಜ್ ಸಂಸ್ಥೆ ಮಾಕ್ವೆರಿಯಿಂದ ಪೇಟಿಎಂನ ಟಾರ್ಗೆಟ್ ದರ 450 ರೂಪಾಯಿಗೆ ಇಳಿಸಲಾಗಿದೆ. ಇದಕ್ಕೂ ಮುನ್ನ 750 ರೂಪಾಯಿ ಇತ್ತು. ಇತ್ತೀಚಿನ ಬೆಳವಣಿಗೆಗಳಿಂದ ಪೇಟಿಎಂಗೆ ಸಾಲ ನೀಡುವುದಕ್ಕೆ ಬ್ಯಾಂಕಿಂಗ್ ಲೈಸೆನ್ಸ್ ಸಿಗುವ ಸಾಧ್ಯತೆಯನ್ನು ಮಹತ್ತರವಾಗಿ ಕಡಿಮೆ ಮಾಡಿದೆ.

ಇದನ್ನೂ ಓದಿ: Paytm Payments Bank: ಪೇಟಿಎಂ ಪೇಮೆಂಟ್ಸ್​ ಬ್ಯಾಂಕ್​ಗೆ ಹೊಸ ಗ್ರಾಹಕರ ಸೇರ್ಪಡೆ ಮಾಡದಂತೆ ಆರ್​ಬಿಐ ಸೂಚನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?