AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ

Maruti Suzuki to hike prices of its various model cars: ಮಾರುತಿ ಸುಜುಕಿಯ ಎಸ್ ಪ್ರೆಸ್ಸೋದಿಂದ ಹಿಡಿದು ಇನ್ವಿಕ್ಟೋವರೆಗೆ ವಿವಿಧ ಕಾರುಗಳ ಬೆಲೆ ಏರಿಕೆಯಾಗಲಿದೆ. ಕಂಪನಿ ಪ್ರಕಟಣೆ ಪ್ರಕಾರ ಆಗಸ್ಟ್ ತಿಂಗಳಿಂದಲೇ ಬೆಲೆ ಏರಿಕೆ ಜಾರಿಗೆ ಬರಬಹುದು. ಕಾರು ತಯಾರಿಕೆಗೆ ಆಗುತ್ತಿರುವ ವೆಚ್ಚದಲ್ಲಿ ಹೆಚ್ಚಳ ಆಗಿರುವುದು ಕಾರುಗಳ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ
ಮಾರುತಿ ಸುಜುಕಿ ಸ್ವಿಫ್ಟ್ ಕಾರುImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2026 | 7:58 PM

Share

ನವದೆಹಲಿ, ಜುಲೈ 21: ಭಾರತದ ನಂಬರ್ ಒನ್ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ವಿವಿಧ ಕಾರುಗಳ ಬೆಲೆಯನ್ನು ಏರಿಸಲಿದೆ. ಮುಂದಿನ ತಿಂಗಳಿಂದ (ಆಗಸ್ಟ್ 2026) ಜಾರಿಗೆ ಬರುವಂತೆ ಮಾರುತಿ ಸುಜುಕಿ (Maruti Suzuki) ತನ್ನ ವಿವಿಧ ಮಾಡಲ್​ಗಳ ಕಾರುಗಳ ಬೆಲೆಯನ್ನು ₹30,000 ವರೆಗೆ ಏರಿಕೆ ಮಾಡುವುದಾಗಿ ಘೋಷಿಸಿದೆ.

ಕಾರು ಉತ್ಪಾದನಾ ವೆಚ್ಚಗಳು (Input costs) ಮತ್ತು ಹಣದುಬ್ಬರದ ಒತ್ತಡ ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ಷೇರು ಮಾರುಕಟ್ಟೆಗೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ. ಹೊಸ ಬೆಲೆ ಏರಿಕೆಯು ಆಗಸ್ಟ್ 2026 ರಿಂದ ಜಾರಿಗೆ ಬರಲಿದ್ದು, ಕಾರಿನ ಮಾಡಲ್ ಹಾಗೂ ವೇರಿಯೆಂಟ್‌ಗಳಿಗೆ ಅನುಗುಣವಾಗಿ ದರ ಹೆಚ್ಚಳದ ಪ್ರಮಾಣ ಬದಲಾಗಲಿದೆ.

ಇದನ್ನೂ ಓದಿ: ಅದೃಷ್ಟ ಮತ್ತು ಅಂಡಾಶಯದ ಲಾಟರಿ; ತಮ್ಮ ಯಶಸ್ಸಿನ ಸೀಕ್ರೆಟ್ ಬಿಚ್ಚಿಟ್ಟ ವಾರನ್ ಬಫೆಟ್

ಎಂಟ್ರಿ ಲೆವೆಲ್ S-Presso ನಿಂದ ಹಿಡಿದು ಪ್ರೀಮಿಯಂ MPV Invicto ವರೆಗಿನ ಮಾಡೆಲ್‌ಗಳ ಮೇಲೆ ಈ ದರ ಏರಿಕೆ ಪರಿಣಾಮ ಬೀರಲಿದೆ. ಪ್ರಸ್ತುತ ಮಾರುತಿ ಕಾರುಗಳ ದರ ₹3.5 ಲಕ್ಷದಿಂದ ₹28.70 ಲಕ್ಷದ ವ್ಯಾಪ್ತಿಯಲ್ಲಿದೆ.

ಜೂನ್ ತಿಂಗಳಲ್ಲಿ ಪ್ರೈಸ್ ಪ್ರೊಟೆಕ್ಷನ್ ಆಫರ್ ಕೊಟ್ಟಿದ್ದ ಮಾರುತಿ

ಮಾರುತಿ ಸುಜುಕಿ ಜೂನ್ ತಿಂಗಳಿನಲ್ಲೂ ಕಾರುಗಳ ದರವನ್ನು ಹೆಚ್ಚಿಸಿತ್ತು. ಆಗ ಸಣ್ಣ ಕಾರು ಖರೀದಿದಾರರಿಗೆ (Alto K10, S-Presso, Celerio, WagonR) ‘ಬೆಲೆ ರಕ್ಷಣೆ’ (Price Protection) ಸೌಲಭ್ಯವನ್ನು ನೀಡಿತ್ತು. ಆದರೆ ಆಗಸ್ಟ್ ತಿಂಗಳ ಏರಿಕೆಗೆ ಇಂತಹ ಸೌಲಭ್ಯ ನೀಡಲಾಗುವುದೇ ಎಂಬುದನ್ನು ಕಂಪನಿ ಇನ್ನೂ ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: ಹೆಲ್ತ್ ಇನ್ಷೂರೆನ್ಸ್ ಖರೀದಿಸುವ ಮುನ್ನ, ಈ 5 ಅಂಶಗಳು ಗಮನದಲ್ಲಿರಲಿ…

ಜಾಗತಿಕ ವ್ಯಾಪಾರ ಅಡಚಣೆಗಳು ಹಾಗೂ ಕಚ್ಚಾವಸ್ತುಗಳ ವೆಚ್ಚ ಹೆಚ್ಚಾದ ಕಾರಣ ಟಾಟಾ ಮೋಟಾರ್ಸ್, ಮಹೀಂದ್ರಾ ಮತ್ತು ಹ್ಯುಂಡೈ ಸಂಸ್ಥೆಗಳು ಸಹ ಇತ್ತೀಚೆಗೆ ತಮ್ಮ ವಾಹನಗಳ ಬೆಲೆಯನ್ನು ಏರಿಸಿವೆ. ನೀವು ಹೊಸ ಮಾರುತಿ ಕಾರು ಖರೀದಿಸುವ ಯೋಜನೆಯಲ್ಲಿದ್ದರೆ, ಆಗಸ್ಟ್ ತಿಂಗಳು ಆರಂಭವಾಗುವ ಮುನ್ನವೇ ಬುಕ್ ಮಾಡುವುದರಿಂದ ದರ ಏರಿಕೆಯಿಂದ ಬಚಾವಾದರೂ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ