Layoff Effect: ಅಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕಿದ್ದು ಸಂಸ್ಥೆಯ ನೈತಿಕ ಸ್ಥೈರ್ಯ ಉಡುಗಿಸಿತು: ಗೂಗಲ್ ಸಿಇಒ ಸುಂದರ್ ಪಿಚೈ

Google CEO Speaks: 12,000 ಮಂದಿಯನ್ನು ಕೆಲಸದಿಂದ ತೆಗೆದುಹಾಕಿದ ಕ್ರಮ ಸಂಸ್ಥೆಯ ನೈತಿಕ ಸ್ಥೈರ್ಯವನ್ನು ಉಡುಗಿಸಿತು ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಆಲ್ಫಬೆಟ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳ ಸಭೆಯೊಂದರಲ್ಲಿ 51 ವರ್ಷದ ಸುಂದರ್ ಪಿಚೈಗೆ ಈ ಪ್ರಶ್ನೆ ಎದುರಾಗಿತ್ತು. ಕಳೆದ ವರ್ಷ ಗೂಗಲ್​ನ ಮಾತೃಸಂಸ್ಥೆ ಆಲ್ಫಬೆಟ್ 12,000 ಮಂದಿಯನ್ನು ಕೆಲಸದಿಂದ ತೆಗೆದುಹಾಕಿತ್ತು.

Layoff Effect: ಅಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕಿದ್ದು ಸಂಸ್ಥೆಯ ನೈತಿಕ ಸ್ಥೈರ್ಯ ಉಡುಗಿಸಿತು: ಗೂಗಲ್ ಸಿಇಒ ಸುಂದರ್ ಪಿಚೈ
ಗೂಗಲ್
Follow us
|

Updated on: Dec 20, 2023 | 10:28 AM

ನವದೆಹಲಿ, ಡಿಸೆಂಬರ್ 20: ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವುದು, ಕೆಲಸ ಬಿಡುವುದು ಸಾಮಾನ್ಯವೇ. ಆದರೆ. ಭಾರೀ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದರೆ (Mass Layoffs) ಹೇಗಾಗಬಹುದು. ವರ್ಷದ ಹಿಂದೆ ಅಮೇಜಾನ್, ಗೂಗಲ್ ಸಂಸ್ಥೆಗಳು 10,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಮಾಸ್ ಆಗಿ ತೆಗೆದುಹಾಕಿದ್ದವು. ಅಷ್ಟು ದೊಡ್ಡ ಪ್ರಮಾಣದಲ್ಲಿ ಲೇ ಆಫ್ ಮಾಡಿದ ಪರಿಣಾಮವಾಗಿ ಗೂಗಲ್​ನ ಮಾತೃ ಸಂಸ್ಥೆ ಆಲ್ಫಬೆಟ್ ಸಂಸ್ಥೆ (Alphabet Inc) ನೈತಿಕ ಸ್ಥೈರ್ಯ ಕಳೆದುಕೊಂಡಿದೆಯಂತೆ. ಆಲ್ಫಬೆಟ್ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ (Sundar Pichai) ಇದನ್ನು ಒಪ್ಪಿಕೊಂಡಿದ್ದಾರೆ. ಗೂಗಲ್ ಸಂಸ್ಥೆ ಕಳೆದ ವರ್ಷ 12,000 ಮಂದಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿತ್ತು.

ಅಂದು ಅಷ್ಟು ಮಂದಿಯನ್ನು ತೆಗೆಯುವಾಗ ಗೂಗಲ್ ಸಂಸ್ಥೆ ಹೊರ ಹೋಗುತ್ತಿದ್ದ ಉದ್ಯೋಗಿಗಳ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದು ಹೌದು. ಇದೀಗ ಆ ವಿಚಾರದ ಬಗ್ಗೆ ಮೊದಲ ಬಾರಿಗೆ ಮಾತನಾಡಿರುವ ಸುಂದರ್ ಪಿಚೈ, 12,000 ಮಂದಿಯನ್ನು ಕೆಲಸದಿಂದ ತೆಗೆದುಹಾಕುವುದು ಸರಿಯಾದ ಕ್ರಮವಾಗಿರಲಿಲ್ಲ. ಸಂಸ್ಥೆಯ ನೈತಿಕ ಸ್ಥೈರ್ಯ ಕುಸಿಯುಂತಎ ಮಾಡಿತು ಎಂದಿದ್ದಾರೆ.

ಇದನ್ನೂ ಓದಿ: Poverty: ಭಾರತೀಯ ರಾಜ್ಯಗಳ ಪೈಕಿ ಕೇರಳದಲ್ಲಿ ಅತಿಕಡಿಮೆ ಬಡತನ; ಕರ್ನಾಟಕದಲ್ಲೆಷ್ಟಿದೆ? ಬಡತನ ಅಳತೆ ಹೇಗೆ?

ಇತ್ತೀಚೆಗೆ ನಡೆದ ಗೂಗಲ್​ನ ಎಲ್ಲಾ ಉದ್ಯೋಗಿಗಳ ಸಭೆಯಲ್ಲಿ ಸಿಇಒಗೆ ಈ ಪ್ರಶ್ನೆ ಎದುರಾಗಿತ್ತು. ಈ ಸಂದರ್ಭದಲ್ಲಿ ಸುಂದರ್ ಪಿಚೈ ಅಂದಿನ ಮಾಸ್ ಲೇ ಆಫ್ ಕ್ರಮದ ಬಗ್ಗೆ ವಿಷಾದ ವ್ಯಕ್ತಪಡಿಸಿದರು. 25 ವರ್ಷದ ಸಂಸ್ಥೆಯ ಇತಿಹಾಸದಲ್ಲಿ ಅಂಥ ಕ್ಷಣ ಎದುರಾಗಿರಲಿಲ್ಲ. ಅಷ್ಟು ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು ತೆಗೆಯುವುದರ ಬದಲು ಪರ್ಯಾಯ ಮಾರ್ಗಗಳನ್ನು ಅವಲೋಕಿಸಬಹುದಿತ್ತು ಎಂದು ಸಿಇಒ ಅಭಿಪ್ರಾಯಪಟ್ಟರು ಎನ್ನಲಾಗಿದೆ.

ಆರ್ಥಿಕ ಹಿಂಜರಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಹಲವು ಟೆಕ್ ಸಂಸ್ಥೆಗಳು ನೂರಾರು, ಸಾವಿರಾರು ಉದ್ಯೋಗಿಗಳನ್ನು ಲೇ ಆಫ್ ಮಾಡಿದ್ದವು. ಗೂಗಲ್ ಸಂಸ್ಥೆ ಕೂಡ ಇದೇ ಕಾರಣಕ್ಕೆ ಲೇ ಆಫ್ ಕ್ರಮ ಕೈಗೊಂಡಿತ್ತು.

ಇದನ್ನೂ ಓದಿ: ಪೇಟೆಂಟ್ ವ್ಯಾಜ್ಯ; ಆ್ಯಪಲ್​ನ ಸ್ಮಾರ್ಟ್​ವಾಚ್​ಗಳಿಗೆ ಅಮೆರಿಕದಲ್ಲಿ ನಿಷೇಧ ಸಾಧ್ಯತೆ; ಏನಿದು ಬಿಕ್ಕಟ್ಟು?

‘ಯಾವುದೇ ಸಂಸ್ಥೆಗೂ ಕೂಡ ಇದು ಸವಾಲಿನ ಸಮಯವಾಗಿದೆ. 25 ವರ್ಷದಲ್ಲಿ ಗೂಗಲ್​ನಲ್ಲಿ ಇಂಥ ಸ್ಥಿತಿ ಬಂದೊದಗಿರಲಿಲ್ಲ. ನಾವೇನಾದರೂ ಕ್ರಮ ಕೈಗೊಳ್ಳದೇ ಇದ್ದಿದ್ದರೆ ಇನ್ನಷ್ಟು ವಿಕೋಪಕ್ಕೆ ಹೋಗುವ ಅವಕಾಶ ಇತ್ತು’ ಎಂದು 51 ವರ್ಷದ ಆಲ್ಫಬೆಟ್ ಮತ್ತು ಗೂಗಲ್ ಸಿಇಒ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ