AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಡಿಆರ್ ಶುಲ್ಕ ಜಾರಿಯಾದರೆ 3,000 ರೂಗಿಂತ ಹೆಚ್ಚಿನ ಪಾವತಿಗೆ ಶೇ. 53 ಮಂದಿ ಹಿಂದೇಟು; ಸಮೀಕ್ಷೆ ಅಭಿಪ್ರಾಯ

53% may stop using UPI for payments above ₹3,000 if MDR returns, survey claims: ದೊಡ್ಡ ಮೊತ್ತದ ಯುಪಿಐ ಪಾವತಿಗಳ ಮೇಲೆ ಎಂಡಿಆರ್ ಶುಲ್ಕದ ವ್ಯವಸ್ಥೆ ತರಲು ಆರ್​ಬಿಐ ಚಿಂತಿಸುತ್ತಿದೆ. ಇದೇನಾದರೂ ಜಾರಿಗೆ ಬಂದರೆ ಶೇ. 53ರಷ್ಟು ಜನರು ದೊಡ್ಡ ಮೊತ್ತದ ಯುಪಿಐ ಪಾವತಿ ನಿಲ್ಲಿಸಬಹುದು ಎನ್ನುತ್ತಿದೆ ಒಂದು ಸಮೀಕ್ಷೆ. ಶೇ. 20ರಷ್ಟು ಜನರು ನಗದು ಬಳಕೆಗೆ ಮರಳಬಹುದು ಎನ್ನುತ್ತಿದೆ ಲೋಕಲ್ ಸರ್ಕಲ್ಸ್ ಸಮೀಕ್ಷೆ.

ಎಂಡಿಆರ್ ಶುಲ್ಕ ಜಾರಿಯಾದರೆ 3,000 ರೂಗಿಂತ ಹೆಚ್ಚಿನ ಪಾವತಿಗೆ ಶೇ. 53 ಮಂದಿ ಹಿಂದೇಟು; ಸಮೀಕ್ಷೆ ಅಭಿಪ್ರಾಯ
ಯುಪಿಐImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 04, 2026 | 5:37 PM

Share

ನವದೆಹಲಿ, ಆಗಸ್ಟ್ 4: ಯುಪಿಐ (UPI) ವಹಿವಾಟುಗಳ ಮೇಲೆ ಮೆರ್ಚೆಂಟ್ ಡಿಸ್ಕೌಂಟ್ ರೇಟ್ (MDR – Merchant Discount Rate) ಶುಲ್ಕವನ್ನು ಸರ್ಕಾರ ಅಥವಾ ಆರ್‌ಬಿಐ ಮತ್ತೆ ಜಾರಿಗೆ ತಂದರೆ, ಶೇ. 53 ರಷ್ಟು ಗ್ರಾಹಕರು ₹3,000 ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗಳನ್ನು ಮಾಡುವುದನ್ನೇ ನಿಲ್ಲಿಸಲಿದ್ದಾರೆ ಎಂದು ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸ್ಥಳೀಯ ಸಮೀಕ್ಷಾ ಸಂಸ್ಥೆಯಾದ ‘ಲೋಕಲ್ ಸರ್ಕಲ್ಸ್’ (LocalCircles) ನಡೆಸಿದ ಈ ಸಮೀಕ್ಷೆಯಲ್ಲಿ ಸಾವಿರಾರು ಡಿಜಿಟಲ್ ಪಾವತಿ ಬಳಕೆದಾರರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಏನಿದು ಎಂಡಿಆರ್ (MDR) ಶುಲ್ಕ?

ವ್ಯಾಪಾರಿಗಳು (Merchants) ಡಿಜಿಟಲ್ ಪಾವತಿಗಳನ್ನು (ಡೆಬಿಟ್/ಕ್ರೆಡಿಟ್ ಕಾರ್ಡ್, ಯುಪಿಐ ಇತ್ಯಾದಿ) ಸ್ವೀಕರಿಸಲು ಬ್ಯಾಂಕ್ ಹಾಗೂ ಪಾವತಿ ಸೇವಾ ಪೂರೈಕೆದಾರರಿಗೆ (Payment Service Providers) ಪಾವತಿಸುವ ಸೇವಾ ಶುಲ್ಕವನ್ನು MDR ಎನ್ನಲಾಗುತ್ತದೆ. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಮಾಡಲಾಗುವ ಪಾವತಿಗಳಿಗೆ ಸದ್ಯಕ್ಕೆ ಎಂಡಿಆರ್ ಶುಲ್ಕ ವಸೂಲಿ ಜಾರಿಯಲ್ಲಿದೆ. ಹಿಂದೆ ದೊಡ್ಡ ಮೊತ್ತದ ಯುಪಿಐ ಪಾವತಿಗೆ ವರ್ತಕರಿಂದ ಎಂಡಿಆರ್ ವಸೂಲಿ ಮಾಡಲಾಗುತ್ತಿತ್ತು. ಗ್ರಾಹಕರಿಗೆ ಇದರ ನೇರ ಹೊರೆ ಇರುವುದಿಲ್ಲ.

ಇದನ್ನೂ ಓದಿ: ಕಂಪನಿ ಎಂಡಿ ಮತ್ತು ನಿರ್ದೇಶಕರಾಗಲು 21 ಅಲ್ಲ, 18 ವರ್ಷ ವಯಸ್ಸಾಗಿದ್ದರೂ ಸಾಕು; ಸರ್ಕಾರದ ಮುಂದಿದೆ ಪ್ರಸ್ತಾಪ

2020 ರ ಜನವರಿಯಿಂದ ಸಾಮಾನ್ಯ ಯುಪಿಐ ಮತ್ತು ರುಪೇ (RuPay) ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಎಂಡಿಆರ್ ಶುಲ್ಕವನ್ನು ಕೇಂದ್ರ ಸರ್ಕಾರ ಶೂನ್ಯ (Zero-MDR) ಮಾಡಿತ್ತು. ಆದರೆ, ಯುಪಿಐ ನೆಟ್‌ವರ್ಕ್ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ವರ್ತಕರು ಮತ್ತು ಸಂಸ್ಥೆಗಳಿಗೆ ₹3,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿಗೆ ಅಲ್ಪ ಪ್ರಮಾಣದ ಎಂಡಿಆರ್ ಶುಲ್ಕ ಮರುಜಾರಿಗೊಳಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಏನು?

  • ₹3,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್‌ ಮಾಡುವುದು: 53%
  • ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್‌ಗೆ ಬದಲಾಗುವುದು: 22%
  • ನಗದು (Cash) ಪಾವತಿಗೆ ಮರಳುವುದು: 20%
  • ಶುಲ್ಕ ಬಿದ್ದರೂ ಯುಪಿಐ ಮುಂದುವರಿಸುವುದು: 5%

ಗ್ರಾಹಕರು ಮತ್ತು ವ್ಯಾಪಾರಿಗಳ ಮೇಲಾಗುವ ಪರಿಣಾಮ

  • ನಗದು ವಹಿವಾಟು ಹೆಚ್ಚಳ: ಯುಪಿಐ ಉಚಿತ ಎನ್ನುವ ಕಾರಣಕ್ಕೆ ಸಣ್ಣ ಹಾಗೂ ದೊಡ್ಡ ವಹಿವಾಟುಗಳಿಗೆ ಜನರು ಆನ್‌ಲೈನ್ ಪಾವತಿ ಮಾಡುತ್ತಿದ್ದರು. ಒಮ್ಮೆ ಶುಲ್ಕ ಅಥವಾ ಹೆಚ್ಚುವರಿ ಹೊರೆ ಬಿದ್ದರೆ, ಜನರು ಮತ್ತೆ ನಗದು (Cash) ಬಳಕೆಗೆ ಮರಳುವ ಸಾಧ್ಯತೆಯಿದೆ.
  • ವ್ಯಾಪಾರಿಗಳ ಆತಂಕ: ಒಂದು ವೇಳೆ ಎಂಡಿಆರ್ ಶುಲ್ಕವನ್ನು ವ್ಯಾಪಾರಿಗಳೇ ಭರಿಸಬೇಕಾಗಿ ಬಂದರೂ, ಅವರು ಆ ವೆಚ್ಚವನ್ನು ಪರೋಕ್ಷವಾಗಿ ಗ್ರಾಹಕರ ಮೇಲೆಯೇ (ವಸ್ತುಗಳ ಬೆಲೆ ಏರಿಕೆ ಮೂಲಕ) ವರ್ಗಾಯಿಸುವ ಸಾಧ್ಯತೆಯಿರುತ್ತದೆ.
  • ಡಿಜಿಟಲ್ ಪಾವತಿಗಳ ಬೆಳವಣಿಗೆಗೆ ಹಿನ್ನಡೆ: ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ಪಾವತಿ ಕ್ರಾಂತಿಗೆ ‘ಉಚಿತ ಯುಪಿಐ’ ಪ್ರಮುಖ ಕಾರಣವಾಗಿತ್ತು. ಹೊಸ ಶುಲ್ಕಗಳು ಈ ವೇಗಕ್ಕೆ ತಡೆ ಒಡ್ಡಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆರ್​ಬಿಐ ಹೊಸ ಮಾರ್ಗಸೂಚಿ; ಅ. 1ರಿಂದ ಬದಲಾಗಲಿವೆ ಬ್ಯಾಂಕ್ ಡೆಪಾಸಿಟ್ ನಿಯಮಗಳು

ಭಿನ್ನ ಯೋಚನೆ

ಕ್ರೆಡಿಟ್ ಕಾರ್ಡ್ ಪಾವತಿಗಳಿಗೆ ಎಂಡಿಆರ್ ಶುಲ್ಕ ಇದ್ದರೂ ಜನರು ಅಂಥ ಪೇಮೆಂಟ್​ಗಳನ್ನು ಬಳಸಲು ಹಿಂದೆ ಮುಂದೆ ನೋಡುವುದಿಲ್ಲ. ಹೀಗಾಗಿ, ಯುಪಿಐನಲ್ಲೂ ಎಂಡಿಆರ್ ಬಂದರೆ ಜನರು ಹಣ ಪಾವತಿಗೆ ಹಿಂದೇಟು ಹಾಕುವ ಸಾಧ್ಯತೆ ಕಡಿಮೆ ಎನ್ನುವ ಅಭಿಪ್ರಾಯ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ