AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 22ರಿಂದ ಜಿಎಸ್​ಟಿ ಕಡಿತ; ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳ ಬೆಲೆಯೂ ಕಡಿಮೆ ಆಗುತ್ತಾ?

GST rate cup effect: 56ನೇ ಜಿಎಸ್​ಟಿ ಕೌನ್ಸಿಲ್ ಬಹುತೇಕ ಎಲ್ಲಾ ವಸ್ತುಗಳ ಮೇಲಿನ ಜಿಎಸ್​ಟಿಯನ್ನು ಕಡಿಮೆ ಮಾಡಿದೆ. ಔಷಧಗಳು ಹಾಗೂ ವೈದ್ಯಕೀಯ ಸಾಧನಗಳ ಮೇಲೆ ಶೇ. 18ರಷ್ಟಿದ್ದ ಜಿಎಸ್​ಟಿಯನ್ನು ಶೇ 5ಕ್ಕೆ ಇಳಿಸಲಾಗಿದೆ. ಸೆ. 22ರಿಂದ ಹೊಸ ಜಿಎಸ್​ಟಿ ಜಾರಿಗೆ ಬರುತ್ತದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳ ಬೆಲೆಯೂ ಇಳಿಯುತ್ತಾ?

ಸೆ. 22ರಿಂದ ಜಿಎಸ್​ಟಿ ಕಡಿತ; ಈಗಾಗಲೇ ಮಾರುಕಟ್ಟೆಯಲ್ಲಿರುವ ಔಷಧಗಳ ಬೆಲೆಯೂ ಕಡಿಮೆ ಆಗುತ್ತಾ?
ಔಷಧ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 7:03 PM

Share

ನವದೆಹಲಿ, ಸೆಪ್ಟೆಂಬರ್ 16: ಸೆಪ್ಟೆಂಬರ್ 22ರಿಂದ ಹೊಸ ಜಿಎಸ್​ಟಿ ದರಗಳು (GST) ಚಾಲನೆಗೆ ಬರಲಿವೆ. ಹೆಚ್ಚಿನ ವಸ್ತುಗಳ ಮೇಲೆ ಜಿಎಸ್​ಟಿ ಕಡಿಮೆಗೊಳ್ಳಲಿದ್ದು, ಅದರ ಪರಿಣಾಮವಾಗಿ ಬೆಲೆಗಳೂ ತಗ್ಗಲಿವೆ. ಜಿಎಸ್​ಟಿ ದರ ಕಡಿತದ ಪರಿಣಾಮ ಜನಸಾಮಾನ್ಯರಿಗೂ ತಲುಪಬೇಕು ಎಂಬುದು ಸರ್ಕಾರದ ಆಶಯ. ಈಗಾಗಲೇ ಮಾರಾಟವಾಗದೇ ಇರುವ ಸರಕುಗಳಿಗೆ ಎಂಆರ್​ಪಿ ದರವನ್ನು ಪರಿಷ್ಕರಿಸಲು ಸರ್ಕಾರ ಅನುಮತಿ ನೀಡಿದೆ. ಈ ರೀತಿ ದರ ಪರಿಷ್ಕರಣೆಗೆ ಡಿಸೆಂಬರ್ 31ರವರೆಗೂ ಅವಕಾಶ ನೀಡಲಾಗಿದೆ.

ಇದೇ ವೇಳೆ, ಮಾರುಕಟ್ಟೆಯಲ್ಲಿ ಈಗಾಗಲೇ ಇರುವ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳ ಬೆಲೆಗಳನ್ನು ಕಡಿಮೆ ಮಾಡಲು ಕ್ರಮ ತೆಗೆದುಕೊರ್ಳಳಲಾಗಿದೆ. ಈ ಔಷಧಗಳನ್ನು ಹಿಂಪಡೆದು ಹೊಸ ಲೇಬಲ್​ನೊಂದಿಗೆ ಮತ್ತೆ ಬಿಡುಗಡೆ ಮಾಡುವ ಅವಶ್ಯಕತೆ ಇಲ್ಲ ಎಂದೂ ಔಷಧ ಬೆಲೆ ಪ್ರಾಧಿಕಾರವು (ಎನ್​ಪಿಪಿಎ- ನ್ಯಾಷನಲ್ ಫಾರ್ಮಾಸ್ಯೂಟಿಕಲ್ ಪ್ರೈಸಿಂಗ್ ಅಥಾರಿಟಿ) ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸೃಜನಶೀಲ ಮನಸ್ಸಿದ್ದರೆ ಸಾಕು..! ಕೇರಳದ ರಾಮಚಂದ್ರನ್ 17,000 ಕೋಟಿ ರೂ ಬ್ಯುಸಿನೆಸ್ ಸಾಮ್ರಾಜ್ಯ ಕಟ್ಟಿದ ಕಥೆ

ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಉತ್ಪನ್ನಗಳನ್ನು ಹಿಂಪಡೆಯುವುದು, ಲೇಬಲ್ ಬದಲಿಸುವುದು ಇತ್ಯಾದಿ ಕೆಲಸ ಕಡ್ಡಾಯವೇನಿಲ್ಲ. ಆದರೆ, ಈ ಉತ್ಪನ್ನಗಳ ತಯಾರಕರು ಮತ್ತು ಮಾರ್ಕೆಟಿಂಗ್ ಕಂಪನಿಗಳು ರೀಟೇಲ್ ಮಟ್ಟದಲ್ಲಿ ಪರಿಷ್ಕೃತ ದರದಲ್ಲಿ ಮಾರಾಟ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಎನ್​ಪಿಪಿಎ ಹೇಳಿದೆ.

ಜಿಎಸ್​ಟಿ ಕೌನ್ಸಿಲ್ ಎಲ್ಲಾ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್​ಟಿಯನ್ನು ಶೇ. 18ರಿಂದ ಶೇ. 5ಕ್ಕೆ ಇಳಿಸಿದೆ. ಇದರಿಂದ ಔಷಧಗಳ ಬೆಲೆ ಕನಿಷ್ಠವೆಂದರೂ ಶೇ. 10ರಷ್ಟು ಇಳಿಯಬೇಕು. ಜಿಎಸ್​ಟಿ ದರ ಕಡಿತವು ಸೆಪ್ಟೆಂಬರ್ 22ರಿಂದಲೇ ಜಾರಿಯಾಗಬೇಕು. ಅದಕ್ಕೆ ಮುಂಚೆ ಮಾರುಕಟ್ಟೆ ಬಂದಿರುವ ವಸ್ತುಗಳಿಗೂ ಜಿಎಸ್​ಟಿ ಕಡಿತ ಅನ್ವಯ ಆಗುವುದರಿಂದ, ಅವುಗಳ ಬೆಲೆಯೂ ಕಡಿಮೆಗೊಳ್ಳಬೇಕು ಎನ್ನುವುದು ಸರ್ಕಾರದ ಇರಾದೆ.

ಇದನ್ನೂ ಓದಿ: ಜಿಎಸ್​ಟಿ ಕಡಿತದ ಎಫೆಕ್ಟ್; ಮದರ್ ಡೈರಿ ಹಾಲು ಬೆಲೆ 2 ರೂ, ತುಪ್ಪದ ಬೆಲೆ 30 ರೂ ಇಳಿಕೆ

ಎಲ್ಲಾ ಔಷಧ ತಯಾರಕರು ಮತ್ತು ಮಾರ್ಕೆಟಿಂಗ್ ಕಂಪನಿಗಳು ಹೊಸ ಜಿಎಸ್​ಟಿ ದರಕ್ಕೆ ಅನುಗುಣವಾಗಿ ಔಷಧಗಳ ಮೇಲಿನ ಗರಿಷ್ಠ ರೀಟೇಲ್ ದರ ಅಥವಾ ಎಂಆರ್​ಪಿಯನ್ನು ಪರಿಷ್ಕರಿಸಬೇಕು. ಡೀಲರ್ಸ್ ಮತ್ತು ರೀಟೇಲರ್ಸ್​ಗೆ ನೀಡುವ ಫಾರ್ಮ್ 5 ಮತ್ತು 6 ಮೂಲಕ ಪರಿಷ್ಕೃತ ದರಪಟ್ಟಿಯನ್ನು ಕಂಪನಿಗಳು ಒದಗಿಸಬೇಕು ಎಂದು ಎನ್​ಪಿಪಿಎ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ