AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MEIL: ಕರ್ನಾಟಕದ ಕೈಗಾದಲ್ಲಿ 2 ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ 12,800 ಕೋಟಿ ರೂ ಗುತ್ತಿಗೆ ಪಡೆದ ಎಂಇಐಎಲ್

Contracts for building Kaiga nuclear power units: ಹೈದರಾಬಾದ್ ಮೂಲದ ಎಂಇಐಎಲ್ ಸಂಸ್ಥೆ ಕರ್ನಾಟಕದ ಕೈಗಾದಲ್ಲಿ ಎರಡು ಪರಣಾಮ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ 12,800 ಕೋಟಿ ರೂ ಮೊತ್ತದ ಗುತ್ತಿಗೆ ಪಡೆದಿದೆ. ನ್ಯಾಷನಲ್ ಪವರ್ ಕಾರ್ಪೊರೇಶನ್ ಸಂಸ್ಥೆ ಈವರೆಗೆ ನೀಡಿದ ಅತಿದೊಡ್ಡ ಗುತ್ತಿಗೆ ಇದಾಗಿದೆ. ಮುಂಬೈನ ಎನ್​​ಪಿಸಿಐಎಲ್ ಕಚೇರಿಯಲ್ಲಿ ಗುತ್ತಿಗೆಯ ಪರ್ಚೇಸ್ ಆರ್ಡರ್ ಅನ್ನು ಎಂಇಐಎಲ್​​ನ ಅಧಿಕಾರಿಗಳಿಗೆ ನೀಡಲಾಗಿದೆ.

MEIL: ಕರ್ನಾಟಕದ ಕೈಗಾದಲ್ಲಿ 2 ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ 12,800 ಕೋಟಿ ರೂ ಗುತ್ತಿಗೆ ಪಡೆದ ಎಂಇಐಎಲ್
ಎಂಇಐಎಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 23, 2025 | 5:14 PM

Share

ಮುಂಬೈ, ಏಪ್ರಿಲ್ 23: ಮೇಘಾ ಎಂಜಿನಿಯರಿಂಗ್ ಅಂಡ್ ಇನ್​​ಫ್ರಾಸ್ಟ್ರಕ್ಚರ್ (ಎಂಇಐಎಲ್) ಸಂಸ್ಥೆ ಕರ್ನಾಟಕದ ಕೈಗಾರದಲ್ಲಿ 700 ಎಂವಿ ಸಾಮರ್ಥ್ಯದ ಎರಡು ಅಣುಸ್ಥಾವರಗಳನ್ನು ನಿರ್ಮಿಸುವ ದೊಡ್ಡ ಗುತ್ತಿಗೆಯನ್ನು ಪಡೆದಿದೆ. ಕೈಗಾದಲ್ಲಿ 5 ಮತ್ತು 6ನೇ ಅಣು ವಿದ್ಯುತ್ ಘಟಕಗಳ ಸ್ಥಾಪನೆಗೆ ಎಂಇಐಎಲ್​​ಗಗೆ 12,800 ಕೋಟಿ ರೂ ಇಪಿಸಿ ಗುತ್ತಿಗೆ ಸಿಕ್ಕಿದೆ. ನ್ಯಾಷನಲ್ ಪವರ್ ಕಾರ್ಪೊರೇಶನ್ (ಎನ್​​ಪಿಸಿಐಎಲ್) ಈ ಗುತ್ತಿಗೆಗೆ ಅಧಿಕೃತವಾಗಿ ಎಂಇಐಎಲ್​​ಗೆ ಪರ್ಚೇಸ್ ಆರ್ಡರ್ ನೀಡಿದೆ. ಮುಂಬೈನಲ್ಲಿರುವ ಎನ್​​ಪಿಸಿಐಎಲ್​​ನ ಮುಖ್ಯಕಚೇರಿಯಲ್ಲಿ ಗುತ್ತಿಗೆಯ ಪರ್ಚೇಸ್ ಆರ್ಡರ್ ಅನ್ನು ಎಂಇಐಎಲ್​ನ ಪ್ರಾಜೆಕ್ಟ್ ವಿಭಾಗದ ನಿರ್ದೇಶಕ ಸುಬ್ಬಯ್ಯ ಅವರಿಗೆ ಹಸ್ತಾಂತರಿಸಲಾಯಿತು.

ಎನ್​​ಪಿಸಿಎಲ್ ಸಂಸ್ಥೆ ಈವರೆಗೂ ನೀಡಿರುವ ಅತಿದೊಡ್ಡ ಗುತ್ತಿಗೆ ಇದು ಎಂದು ಹೇಳಲಾಗುತ್ತಿದೆ. ಎಂಜಿನಿಯರಿಂಗ್, ಕನ್ಸ್​​ಟ್ರಕ್ಷನ್, ವಾಹನ ಕ್ಷೇತ್ರದಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಮೇಘಾ ಎಂಜಿನಿಯರಿಂಗ್ ಇನ್​​ಫ್ರಾಸ್ಟ್ರಕ್ಚರ್ ಸಂಸ್ಥೆಗೆ ಇದು ಪರಮಾಣ ಶಕ್ತಿ ಕ್ಷೇತ್ರದತ್ತ ಮೊದಲ ದೊಡ್ಡ ಹೆಜ್ಜೆಯಾಗಿದೆ. ಭಾರತದ ಇಂಧನ ಭದ್ರತೆ ದೃಷ್ಟಿಯಿಂದ ಈ ಯೋಜನೆಗಳು ಬಹಳ ಮಹತ್ವದ್ದಾಗಿದೆ. ಮಾಲಿನ್ಯರಹಿತವಾಗಿ ವಿದ್ಯುತ್ ಉತ್ಪಾದನೆ ಮಾಡಲು ಸಹಾಯವಾಗುತ್ತದೆ.

ಇದನ್ನೂ ಓದಿ: ಲಕ್ಷುರಿ ವಸ್ತುಗಳಿಗೆ ಟಿಸಿಎಸ್: ಅಧಿಸೂಚನೆ ಪ್ರಕಟ; ಇಲ್ಲಿದೆ ಐಷಾರಾಮಿ ವಸ್ತುಗಳ ಪಟ್ಟಿ

ಬಿಎಚ್​​ಇಎಲ್, ಎಲ್ ಅಂಡ್ ಟಿಯಂತಹ ಬಲಿಷ್ಠ ಸಂಸ್ಥೆಗಳನ್ನು ಸೋಲಿಸಿದ ಮೇಘಾ

ಕೈಗಾದಲ್ಲಿ ಎರಡು ಅಣುಘಟಕಗಳ ಸ್ಥಾಪನೆಯ ಯೋಜನೆಯನ್ನು ನೀಡಲು ಎನ್​​ಪಿಸಿಐಎಲ್ ಈ ಬಾರಿ ಬೇರೆಯೇ ವಿಧಾನ ಅನುಸರಿಸಿದೆ. ಗುಣಮಟ್ಟ ಮತ್ತು ವೆಚ್ಚ ಆಧಾರಿತವಾದ ಆಯ್ಕೆ ವಿಧಾನ (ಕ್ಯುಸಿಬಿಎಸ್) ಇದು. ಬಿಎಚ್​​ಇಎಲ್, ಎಲ್ ಅಂಡ್ ಟಿ ಮುಂತಾದ ದೊಡ್ಡ ಕಂಪನಿಗಳು ಈ ಯೋಜನೆ ಪಡೆಯಲು ಯತ್ನಿಸಿದ್ದವು. ಆದರೆ, ಮೇಘಾ ಇಂಜಿನಿಯರಿಂಗ್ ಇನ್​​ಫ್ರಾಸ್ಟ್ರಕ್ಚರ್ ಸಂಸ್ಥೆ ಈ ಯೋಜನೆಗೆ ಪ್ರಸ್ತಾಪಿಸಿದ ತಾಂತ್ರಿಕ ಅಂಶಗಳು ಹಾಗೂ ಸ್ಪರ್ಧಾತ್ಮಕ ಬೆಲೆಗಳು ಅದಕ್ಕೆ ಗೆಲುವು ತಂದುಕೊಟ್ಟಿವೆ.

ದೇಶದ ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಇದು…

ಬೆಳೆಯುತ್ತಿರುವ ಭಾರತದ ಆರ್ಥಿಕತೆಗೆ ಮುಂದಿನ ದಿನಗಳಲ್ಲಿ ವಿದ್ಯುತ್​​ಗೆ ಬೇಡಿಕೆ ತೀವ್ರವಾಗಿ ಹೆಚ್ಚಲಿದೆ. ಅದರಲ್ಲೂ ಮಾಲಿನ್ಯರಹಿತ ವಿದ್ಯುತ್​​ನ ಅಗತ್ಯ ಹಿಂದೆಂದಿಗಿಂತ ಹೆಚ್ಚಿದೆ. ಸ್ವಚ್ಛ ಇಂಧನಗಳಲ್ಲಿ ಪರಮಾಣ ವಿದ್ಯುತ್ ಕೂಡ ಒಂದು. ಹೀಗಾಗಿ, ಕೈಗಾ ಸೇರಿದಂತೆ ದೇಶದ ವಿವಿಧೆಡೆ ಮತ್ತಷ್ಟು ಪರಮಾಣು ವಿದ್ಯುತ್ ಉತ್ಪಾದಕ ಘಟಕಗಳನ್ನು ಸರ್ಕಾರ ನಿರ್ಮಿಸುತ್ತಿದೆ. ಈ ಬಾಗವಾಗಿ ಕೈಗಾದಲ್ಲಿ 5 ಮತ್ತು 6ನೇ ಘಟಕವನ್ನು ನಿರ್ಮಿಸುವ ಗುತ್ತಿಗೆಯು ಮೇಘಾ ಎಂಜಿನಿಯರಿಂಗ್​​ಗೆ ಲಭಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Wed, 23 April 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!