AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zain Nadella: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಮಗ 26 ವರ್ಷದ ಝೈನ್ ನಿಧನ

Satya Nadella's Son Death: ಮೈಕ್ರೋಸಾಫ್ಟ್ ಕಾರ್ಪೊರೇಷನ್​ನ ಸಿಇಒ ಸತ್ಯ ನಾಡೆಲ್ಲ ಅವರ ಮಗ 26 ವರ್ಷದ ಝೈನ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ಕಂಪೆನಿಯು ಇಮೇಲ್​ನಲ್ಲಿ ತಿಳಿಸಿದೆ.

Zain Nadella: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಮಗ 26 ವರ್ಷದ ಝೈನ್ ನಿಧನ
ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 01, 2022 | 12:22 PM

Share

ಮೈಕ್ರೋಸಾಫ್ಟ್ ಕಾರ್ಪೊರೇಷನ್ (Microsoft Corp.) ತಿಳಿಸಿರುವ ಪ್ರಕಾರ, ಸಿಇಒ ಸತ್ಯ ಮತ್ತು ಅನು ಅವರ ಮಗ ಝೈನ್ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 26 ವರ್ಷ ವಯಸ್ಸಾಗಿತ್ತು. ಹುಟ್ಟುವಾಗಲೇ ಸೆರೆಬ್ರಲ್ ಪಾಲ್ಸಿ ಸಮಸ್ಯೆ ಇತ್ತು. ತನ್ನ ಸಿಬ್ಬಂದಿಗೆ ಇಮೇಲ್​ ಮೂಲಕ ಝೈನ್​ ನಿಧನದ ಬಗ್ಗೆ ಮೈಕ್ರೋಸಾಫ್ಟ್ ಮಾಹಿತಿ ನೀಡಿದೆ. ಈ ದುಃಖವನ್ನು ಭರಿಸುವುದಕ್ಕೆ ಕುಟುಂಬದ ಆಲೋಚನೆ ಮತ್ತು ಪ್ರಾರ್ಥನೆಗೆ ಖಾಸಗಿತನದ ಅವಶ್ಯಕತೆ ಇದ್ದು, ಅದಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

2014ರಲ್ಲಿ ಸತ್ಯ ನಾಡೆಲ್ಲ ಮೈಕ್ರೋಸಾಫ್ಟ್​ನ ಸಿಇಒ ಹುದ್ದೆಯನ್ನು ಅಲಂಕರಿಸಿದ್ದರು. ಆಗಿನಿಂದಲೂ ವೈಕಲ್ಯ ಇರುವಂಥ ಬಳಕೆದಾರರಿಗೆ ಅನುಕೂಲ ಆಗುವಂತೆ ಉತ್ಪನ್ನಗಳನ್ನು ರೂಪಿಸುವುದಕ್ಕೆ ಕಂಪೆನಿಯು ಗಮನ ಕೇಂದ್ರೀಕರಿಸಿತ್ತು. ತಮ್ಮ ಮಗ ಝೈನ್​ ಬೆಳವಣಿಗೆ ಹಾಗೂ ಅಗತ್ಯ ಇರುವ ಬೆಂಬಲವನ್ನು ನೀಡಲು ಏನು ಬೇಕೋ ಅದನ್ನು ನೀಡುವುದನ್ನು ಕಲಿತಿದ್ದರು.

ಕಳೆದ ವರ್ಷ, ಝೈನ್ ಬಹುತೇಕ ಚಿಕಿತ್ಸೆ ಪಡೆದ ಮಕ್ಕಳ ಆಸ್ಪತ್ರೆಯು ಸಿಯಾಟಲ್ ಚಿಲ್ಡ್ರನ್ಸ್ ಸೆಂಟರ್ ಫಾರ್ ಇಂಟಿಗ್ರೇಟಿವ್ ಮೆದುಳು ಸಂಶೋಧನೆ ಭಾಗವಾಗಿ ಪೀಡಿಯಾಟ್ರಿಕ್ ನ್ಯೂರೋಸೈನ್ಸ್‌ನಲ್ಲಿ ಜೈನ್ ನಾಡೆಲ್ಲಾ ಎಂಡೋವ್ಡ್ ಚೇರ್ ಅನ್ನು ಸ್ಥಾಪಿಸಲು ನಾಡೆಲ್ಲ ಜತೆಗೂಡಿತು. “ಝೈನ್ ಅವರಿಗೆ ಸಂಗೀತದಲ್ಲಿ ಇದ್ದ ಅಭಿರುಚಿ, ಅವರ ಪ್ರಕಾಶಮಾನವಾದ ನಗು ಮತ್ತು ಅವರ ಕುಟುಂಬಕ್ಕೆ ಹಾಗೂ ಅವರನ್ನು ಪ್ರೀತಿಸಿದ ಎಲ್ಲರಿಗೂ ತಂದ ಅಪಾರ ಸಂತೋಷಕ್ಕಾಗಿ ನೆನಪಿಸಿಕೊಳ್ಳುತ್ತೇವೆ,” ಎಂದು ಮಕ್ಕಳ ಆಸ್ಪತ್ರೆಯ ಸಿಇಒ ಜೆಫ್ ಸ್ಪೆರಿಂಗ್ ತಮ್ಮ ಮಂಡಳಿಗೆ ಸಂದೇಶದಲ್ಲಿ ಬರೆದಿದ್ದಾರೆ. ಅದನ್ನು ಮೈಕ್ರೋಸಾಫ್ಟ್ ಕಾರ್ಯನಿರ್ವಾಹಕರೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Satya Nadella: 53 ವರ್ಷದ ಸತ್ಯ ನಾಡೆಲ್ಲಾಗೆ 143 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯದ ಮೈಕ್ರೋಸಾಫ್ಟ್ ಕಂಪೆನಿಯ ನೇತೃತ್ವ

Published On - 12:00 pm, Tue, 1 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ