AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

Satya Nadella warns AI could leave entire industries struggling: ಕೃತಕ ಬುದ್ಧಿಮತ್ತೆ ಇರುವ ಭವಿಷ್ಯದ ಕರಾಳ ಮುಖವನ್ನು, ಹಾಗೂ ಅದನ್ನು ತಡೆಯುವ ಉಪಾಯವನ್ನು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ತಿಳಿಸಿದ್ದಾರೆ. ಎಐ ಟೆಕ್ನಾಲಜಿಯ ಪೂರ್ಣ ಮೌಲ್ಯ ಮತ್ತು ಲಾಭವು ಕೆಲವೇ ದೈತ್ಯ ಕಂಪನಿಗಳ ಕೈಗೆ ಸಿಗಬಹುದು ಎಂದು ಎಚ್ಚರಿಸಿದ್ದಾರೆ. ಜಾಗತೀಕರಣದ ಸಂದರ್ಭದಲ್ಲಿ ಆಗಿದ್ದ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ
ಸತ್ಯ ನಾಡೆಳ್ಳಾImage Credit source: AP
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2026 | 4:46 PM

Share

ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ

ಹಿಂದೆ ಜಾಗತೀಕರಣದ (Globalization) ಆರಂಭಿಕ ದಿನಗಳಲ್ಲಿ ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಉದ್ಯೋಗಗಳು ಒಂದೆಡೆಯಿಂದ ಮತ್ತೊಂದೆಡೆಗೆ ವಲಸೆ ಹೋದವು. ಕಾಗದದ ಮೇಲೆ ಆರ್ಥಿಕ ಬೆಳವಣಿಗೆ ಕಂಡರೂ, ಸ್ಥಳೀಯ ಮಟ್ಟದಲ್ಲಿ ಹಲವು ಕೈಗಾರಿಕೆಗಳು ಮತ್ತು ಸಮುದಾಯಗಳು ಸಂಪೂರ್ಣವಾಗಿ ಹಾನಿಗೊಳಗಾದವು. ಇಂತಹ ತಪ್ಪು ಈಗ ಎಐ ಬೆಳವಣಿಗೆ ವೇಳೆ ಆಗದಂತೆ ಎಚ್ಚರವಹಿಸಬೇಕು ಎಂದು ಮೈಕ್ರೋಸಾಫ್ಟ್ ಸಿಇಒ ಸಲಹೆ ನೀಡಿದ್ದಾರೆ.

“ಕೆಲವೇ ಕೆಲವು ಎಐ ಮಾದರಿಗಳು (AI Models) ಇಡೀ ಮಾರುಕಟ್ಟೆಯನ್ನು ನುಂಗಿ ನೀರು ಕುಡಿಯುವ ಮತ್ತು ಎಲ್ಲಾ ಆರ್ಥಿಕ ಲಾಭಗಳನ್ನು ತಾವೇ ಬಾಚಿಕೊಳ್ಳುವ ಪರಿಸ್ಥಿತಿಯನ್ನು ಸಮಾಜ ಮತ್ತು ಜಾಗತಿಕ ಆರ್ಥಿಕತೆ ಎಂದಿಗೂ ಸಹಿಸುವುದಿಲ್ಲ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ತಡೆಯಬೇಕಿದೆ” ಎಂದು ಸತ್ಯ ನಾಡೆಲ್ಲಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ

ಕಂಪನಿಗಳಿಗೆ ಹೊಸ ಸೂತ್ರ: ಎರಡು ರೀತಿಯ ಬಂಡವಾಳ

ಭವಿಷ್ಯದಲ್ಲಿ ಉದ್ಯಮಗಳು ಬದುಕುಳಿಯಲು ಕೇವಲ ಬೇರೆ ಕಂಪನಿಗಳ AI ಮಾದರಿಗಳನ್ನು ನಂಬಿ ಕೂರಬಾರದು. ಬದಲಿಗೆ ತಮ್ಮದೇ ಆದ ಎರಡು ಪ್ರಮುಖ ಬಂಡವಾಳಗಳನ್ನು (Capital) ವೃದ್ಧಿಸಿಕೊಳ್ಳಬೇಕು ಎಂದಿದ್ದಾರೆ ಆಂಧ್ರ ಸಂಜಾತ ಮೈಕ್ರೋಸಾಫ್ಟ್ ಸಿಇಒ. ಅವರು ಹೆಸರಿಸಿದ ಎರಡು ಬಂಡವಾಳವೆಂದರೆ ಅವು ಮಾನವ ಬಂಡವಾಳ ಮತ್ತು ಟೋಕನ್ ಬಂಡವಾಳ.

ಮಾನವ ಬಂಡವಾಳವೆಂದರೆ ನೌಕರರ ಜ್ಞಾನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಪರಸ್ಪರ ಸಂಬಂಧಗಳು ಮತ್ತು ಸೃಜನಶೀಲತೆ. AI ಬಂದ ತಕ್ಷಣ ಮಾನವನ ಅಗತ್ಯ ಕಡಿಮೆ ಆಗುವುದಿಲ್ಲ, ಬದಲಿಗೆ ಅವರ ಮೌಲ್ಯ ಮತ್ತಷ್ಟು ಹೆಚ್ಚುತ್ತದೆ.

ಇನ್ನು ಟೋಕನ್ ಬಂಡವಾಳ (Token Capital) ಎಂದರೆ ಒಂದು ಕಂಪನಿಯು ಸ್ವತಃ ಅಭಿವೃದ್ಧಿಪಡಿಸುವ ಮತ್ತು ತನ್ನ ಸ್ವಂತ ಸ್ವಾಮ್ಯದಲ್ಲಿ ಇಟ್ಟುಕೊಳ್ಳುವ AI ಸಾಮರ್ಥ್ಯಗಳು.

ಇದನ್ನೂ ಓದಿ: ಎನ್​ಆರ್​ಐಗಳ ಡೆಪಾಸಿಟ್​ಗಳನ್ನು ಕೈಬೀಸಿ ಕರೆಯುತ್ತಿವೆ ಭಾರತದ ಹೊಸ FCNR(B) ದರಗಳು; ಅನಿವಾಸಿ ಭಾರತೀಯರಿಗೆ ಹೇಗೆ ಲಾಭ?

ಕಂಪನಿ ಹಿರಿಯರ ಬೌದ್ಧಿಕ ಜ್ಞಾನ ಉಳಿಯಬಲ್ಲುದಾ?

“ಕಂಪನಿಗಳು ತಮ್ಮ ಆಂತರಿಕ ಜ್ಞಾನ ಮತ್ತು ಬೌದ್ಧಿಕ ಆಸ್ತಿಯನ್ನು (IP) ರಕ್ಷಿಸಿಕೊಳ್ಳಲು ತಮ್ಮದೇ ಆದ ಕಲಿಕಾ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು. ಒಂದು ವೇಳೆ ನಿಮ್ಮ ಕಂಪನಿಯು ಬಳಸುತ್ತಿರುವ ಪ್ರಮುಖ ‘AI ಮಾಡೆಲ್’ ಅನ್ನು ಬದಲಾಯಿಸಿದರೂ ಸಹ, ನಿಮ್ಮ ಕಂಪನಿಯ ಹಿರಿಯ ನೌಕರನಿಗಿರುವಂತಹ (Company Veteran) ರಹಸ್ಯ ಜ್ಞಾನ ಮತ್ತು ಕಾರ್ಯಕ್ಷಮತೆ ನಿಮ್ಮ ಸಿಸ್ಟಮ್‌ನಲ್ಲಿ ಹಾಗೇ ಉಳಿಯಬೇಕು. ಆ ಮಟ್ಟಿಗೆ ಕಂಪನಿಗಳು ಸ್ವಾವಲಂಬನೆ ಸಾಧಿಸಬೇಕು” ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ