Sign In

By signing in or creating an account, you agree with Associated Broadcasting Company's Terms & Conditions and Privacy Policy.

Mobile Payment: ಎಟಿಎಂ ವಿಥ್​ಡ್ರಾ ಸಂಖ್ಯೆಯನ್ನೂ ಮೀರಿಸಿದ ಮೊಬೈಲ್ ಪಾವತಿ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಳೆದ ವರ್ಷ ಎಟಿಎಂಗಳಲ್ಲಿ ವಿಥ್​ಡ್ರಾ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮೊಬೈಲ್ ಪಾವತಿ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇನ್ಫಿನಿಟಿ ಫೋರಂನಲ್ಲಿ ಹೇಳಿದ್ದಾರೆ.

Mobile Payment: ಎಟಿಎಂ ವಿಥ್​ಡ್ರಾ ಸಂಖ್ಯೆಯನ್ನೂ ಮೀರಿಸಿದ ಮೊಬೈಲ್ ಪಾವತಿ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Dec 03, 2021 | 12:31 PM

ಫಿನ್‌ಟೆಕ್ ವಲಯದ ಚಿಂತನಾ ನಾಯಕತ್ವ ವೇದಿಕೆಯಾದ ಇನ್ಫಿನಿಟಿ ಫೋರಂ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 3ನೇ ತಾರೀಕಿನ ಶುಕ್ರವಾರದ ಬೆಳಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ತಮ್ಮ ಭಾಷಣದ ವೇಳೆ ಮೊಬೈಲ್ ಪಾವತಿಗಳ ಬೆಳವಣಿಗೆಯನ್ನು ಶ್ಲಾಘಿಸಿದ ಅವರು, ಕಳೆದ ವರ್ಷ ಮೊದಲ ಬಾರಿಗೆ ಎಟಿಎಂನಲ್ಲಿ ಹಣ ವಿಥ್​ಡ್ರಾ ಮಾಡುವುದರ ಪ್ರಮಾಣವನ್ನೂ ಮೊಬೈಲ್ ಪಾವತಿ ಮೀರಿದೆ ಎಂದು ಹೇಳಿದರು. “ಯಾವುದೇ ಭೌತಿಕ ಶಾಖೆಗಳಿಲ್ಲದ ಸಂಪೂರ್ಣ ಡಿಜಿಟಲ್ ಬ್ಯಾಂಕ್‌ಗಳು ಈಗಾಗಲೇ ವಾಸ್ತವದಲ್ಲಿ ಜಾರಿ ಆಗಿವೆ ಮತ್ತು ಒಂದು ದಶಕಕ್ಕಿಂತ ಕಡಿಮೆ ಅವಧಿಯಲ್ಲಿ ಭಾರತವು ಸಾಮಾನ್ಯ ಸ್ಥಳವಾಗಿದ್ದು, ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಅಥವಾ ಅದರ ಸುತ್ತಲೂ ಆವಿಷ್ಕಾರದ ವಿಚಾರಕ್ಕೆ ಬಂದಾಗ ಯಾವುದಕ್ಕೂ ಕಡಿಮೆ ಇಲ್ಲ ಎಂಬುದನ್ನು ಜಗತ್ತಿಗೆ ಸಾಬೀತುಪಡಿಸಿದೆ,” ಎಂದು ಅವರು ಹೇಳಿದರು.

GIFT ಸಿಟಿ ಮತ್ತು ಬ್ಲೂಮ್‌ಬರ್ಗ್‌ನ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರಗಳ ಪ್ರಾಧಿಕಾರ (IFSCA) ಆಯೋಜಿಸುತ್ತಿರುವ ಕಾರ್ಯಕ್ರಮದ ಆರಂಭಿಕ ಭಾಷಣದಲ್ಲಿ ಈ ವಿಚಾರ ತಿಳಿಸಿದರು. ಪ್ರಧಾನ ಮಂತ್ರಿಗಳ ಕಚೇರಿ (PMO) ಈ ಹಿಂದೆ ಹೊರಡಿಸಿದ್ದ ಹೇಳಿಕೆಯಲ್ಲಿ, ಇನ್ಫಿನಿಟಿ ಫೋರಮ್ ನೀತಿ, ವ್ಯವಹಾರ ಮತ್ತು ತಂತ್ರಜ್ಞಾನದ ಭಾಗೀದಾರರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುತ್ತದೆ ಮತ್ತು ತಂತ್ರಜ್ಞಾನ ಹಾಗೂ ನಾವೀನ್ಯತೆಗಳನ್ನು ಫಿನ್‌ಟೆಕ್ ಉದ್ಯಮದಿಂದ ಹೇಗೆ ಬಳಕೆಗೆ ತರಬಹುದು ಎಂಬುದನ್ನು ಚರ್ಚಿಸುತ್ತದೆ ಎಂದು ತಿಳಿಸಿತ್ತು.

ಸರ್ಕಾರದ ಪ್ರಮುಖ ಡಿಜಿಟಲ್ ಇಂಡಿಯಾ ಯೋಜನೆಯಡಿ “ಪರಿವರ್ತನೆಯ ಉಪಕ್ರಮಗಳನ್ನು” ಮೋದಿ ತಿಳಿಸಿದರು. “ಆಡಳಿತದಲ್ಲಿ ಅನ್ವಯಿಸಲು ನವೀನ ಫಿನ್‌ಟೆಕ್ ಸಲ್ಯೂಷನ್​ಗಳಿಗೆ ಬಾಗಿಲು ತೆರೆದಿದೆ,” ಎಂದರು. “ಈಗ ಈ ಫಿನ್‌ಟೆಕ್ ಉಪಕ್ರಮಗಳನ್ನು ಫಿನ್‌ಟೆಕ್ ಕ್ರಾಂತಿಯಾಗಿ ಪರಿವರ್ತಿಸುವ ಸಮಯ ಬಂದಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಆರ್ಥಿಕ ಸಬಲೀಕರಣವನ್ನು ಸಾಧಿಸಲು ಸಹಾಯ ಮಾಡುವ ಕ್ರಾಂತಿ ಇದು. ನಮ್ಮ ಅನುಭವಗಳು ಮತ್ತು ಪರಿಣತಿಯನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳುವುದನ್ನು ಮತ್ತು ಅವರಿಂದ ಕಲಿಯುವುದನ್ನು ನಾವು ನಂಬುತ್ತೇವೆ. ನಮ್ಮ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಪರಿಹಾರಗಳು ಪ್ರಪಂಚದಾದ್ಯಂತದ ನಾಗರಿಕರ ಜೀವನವನ್ನು ಸುಧಾರಿಸಬಹುದು,” ಎಂದು ಅವರು ಹೇಳಿದರು.

ಎರಡು ದಿನಗಳ ಈ ಕಾರ್ಯಕ್ರಮದಲ್ಲಿ 70 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಫೋರಂನ ಪ್ರಮುಖ ಭಾಷಣಕಾರರಲ್ಲಿ ಮಲೇಷ್ಯಾದ ಹಣಕಾಸು ಸಚಿವ ತೆಂಗು ಜಫ್ರುಲ್ ಅಜೀಜ್, ಇಂಡೋನೇಷ್ಯಾದ ಹಣಕಾಸು ಸಚಿವರಾದ ಮುಲ್ಯಾನಿ ಇಂದ್ರಾವತಿ, ಸೃಜನಾತ್ಮಕ ಆರ್ಥಿಕತೆ ಸಚಿವರಾದ ಇಂಡೋನೇಷ್ಯಾ ಸ್ಯಾಂಡಿಯಾಗ ಎಸ್. ಯುನೊ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ, ಸಾಫ್ಟ್‌ಬ್ಯಾಂಕ್ ಗ್ರೂಪ್ ಕಾರ್ಪೊರೇಷನ್ ಅಧ್ಯಕ್ಷ ಮತ್ತು ಸಿಇಒ ಮಸಯೋಶಿ ಸನ್, IBM ಕಾರ್ಪೊರೇಷನ್ ಅಧ್ಯಕ್ಷ ಮತ್ತು ಸಿಇಒ ಅರವಿಂದ್ ಕೃಷ್ಣ, ಕೊಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ ಎಂ.ಡಿ. ಮತ್ತು ಸಿಇಒ ಉದಯ್ ಕೊಟಕ್ ಮತ್ತಿತರರು ಇತರರಿದ್ದಾರೆ.

ಇದನ್ನೂ ಓದಿ:Digital Payments: ಡಿಜಿಟಲ್ ಪಾವತಿ ಜನಪ್ರಿಯತೆಗೆ ಆಸಕ್ತಿಕರವಾದ ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ 

ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು