AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Authentication: ಆಧಾರ್​ ಸಾರ್ವತ್ರಿಕ ದೃಢೀಕರಣಕ್ಕೆ ಸ್ಮಾರ್ಟ್​ಫೋನ್ ಬಳಕೆ ಬಗ್ಗೆ ಸುಳಿವು

ಸ್ಮಾರ್ಟ್​ಫೋನ್​ಗಳನ್ನು ಆಧಾರ್​ನ ಸಾರ್ವತ್ರಿಕ ದೃಢೀಕರಣಕ್ಕೆ ಬಳಸುವ ಬಗ್ಗೆ ಮಾತನಾಡಲಾಗಿದೆ. ಏನಿದು ಮತ್ತು ಹೇಗೆ ಅನುಕೂಲಕ ಎಂಬ ಮಾಹಿತಿ ಇಲ್ಲಿದೆ.

Aadhaar Authentication: ಆಧಾರ್​ ಸಾರ್ವತ್ರಿಕ ದೃಢೀಕರಣಕ್ಕೆ ಸ್ಮಾರ್ಟ್​ಫೋನ್ ಬಳಕೆ ಬಗ್ಗೆ ಸುಳಿವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 24, 2021 | 3:21 PM

Share

ಭಾರತ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನಿವಾಸಿಯ ಗುರುತನ್ನು ಸ್ಥಾಪಿಸಲು ಸ್ಮಾರ್ಟ್‌ಫೋನ್‌ಗಳನ್ನು “ಸಾರ್ವತ್ರಿಕ ದೃಢೀಕರಣ”ವನ್ನಾಗಿ ಬಳಸಲು ನೋಡುತ್ತಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಸದ್ಯಕ್ಕೆ, ಬೆರಳಚ್ಚು, ಐರಿಸ್ ಮತ್ತು ಒನ್-ಟೈಮ್ ಪಾಸ್‌ವರ್ಡ್ (OTP) ಅನ್ನು ದೃಢೀಕರಣಕ್ಕಾಗಿ ಬಳಸಲಾಗುತ್ತದೆ ಮತ್ತು ಅದರ ವ್ಯಾಪ್ತಿಯನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅದರ ಮುಖ್ಯ ಕಾರ್ಯನಿರ್ವಾಹಕ ಸೌರಭ್ ಗರ್ಗ್ ಅವರು ‘ETBFSI ಕನ್ವರ್ಜ್’ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿ, “ಸಾರ್ವತ್ರಿಕ ದೃಢೀಕರಣವಾಗಿ ಸ್ಮಾರ್ಟ್‌ಫೋನ್ ಹೇಗೆ ಅಭಿವೃದ್ಧಿ ಮಾಡಬಹುದು ಎಂಬುದನ್ನು ನಾವು ನೋಡುತ್ತಿದ್ದೇವೆ. ಇದು ಈಗ ಕೆಲಸ ನಡೆಯುತ್ತಿರುವ ಕ್ಷೇತ್ರವಾಗಿದೆ ಮತ್ತು ನಾವು ಆ ದಿಕ್ಕಿನಲ್ಲಿ ವೇಗವಾಗಿ ಮುಂದುವರಿಯಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತೇವೆ. ಜನರು ವಾಸ ಇರುವ, ಉಳಿಯುವ ಇತ್ಯಾದಿ ಸ್ಥಳದಿಂದಲೇ ದೃಢೀಕರಣವನ್ನು ಮಾಡಲು ಇದು ಸಹಾಯ ಮಾಡುತ್ತದೆ,” ಎಂದು ಹೇಳಿದ್ದಾರೆ.

ಸದ್ಯಕ್ಕೆ, ಒಟ್ಟಾರೆ 120 ಕೋಟಿ ಮೊಬೈಲ್ ಸಂಪರ್ಕಗಳಲ್ಲಿ 80 ಕೋಟಿ ಸ್ಮಾರ್ಟ್‌ಫೋನ್‌ಗಳನ್ನು ದೃಢೀಕರಣಕ್ಕಾಗಿ ಬಳಸಬಹುದಾಗಿದೆ ಎಂದು ಅವರು ಹೇಳಿದ್ದಾರೆ. ಆದರೂ ಸ್ಮಾರ್ಟ್‌ಫೋನ್ ಬಳಸಿಕೊಂಡು ಗುರುತಿನ ಪ್ರಕ್ರಿಯೆಯು ಹೇಗೆ ಪೂರ್ಣಗೊಳ್ಳುತ್ತದೆ ಎಂಬುದರ ಕುರಿತು ಯಾವುದೇ ಹೆಚ್ಚುವರಿ ವಿವರಗಳನ್ನು ಹಂಚಿಕೊಂಡಿಲ್ಲ. ಗೋಪ್ಯತೆ ಮತ್ತು ಡೇಟಾ ಸುರಕ್ಷತೆಯು ಪ್ರಾಧಿಕಾರಕ್ಕೆ ಮುಖ್ಯವಾಗಿದೆ ಎಂದು ಗರ್ಗ್ ಹೇಳಿದ್ದು, ಆಧಾರ್ ಸಂಖ್ಯೆಯು “ಸಾರ್ವತ್ರಿಕವಾಗಿ ಲಭ್ಯವಿರುವ ಮತ್ತು ದೃಢೀಕರಿಸಬಹುದಾದ ಒಂದು ಗುರುತು” ಆಗುವ ಹಾದಿಯಲ್ಲಿದೆ ಎಂದಿದ್ದಾರೆ. ಆಧಾರ್ ಮತ್ತು ಸಂಖ್ಯೆಯನ್ನು ಬಳಸಿಕೊಂಡು ಮಾಡಿದ ನೇರ ಲಾಭ ವರ್ಗಾವಣೆಯು ಸೋರಿಕೆ ಮತ್ತು ನಕಲುಗಳನ್ನು ತಡೆಯುವ ಮೂಲಕ ಸರ್ಕಾರಕ್ಕೆ 2 ಲಕ್ಷ ಕೋಟಿ ರೂಪಾಯಿಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿಂಗ್ ಮತ್ತು ಟೆಲಿಕಾಂ ಉದ್ಯಮವು ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಮಾನದಂಡಗಳನ್ನು ಪೂರೈಸಲು ಆಧಾರ್ ಸಂಖ್ಯೆಯನ್ನು ಶೀಘ್ರವಾಗಿ ಅಳವಡಿಸಿಕೊಂಡಿವೆ. 70 ಕೋಟಿ ಅಥವಾ ಒಟ್ಟಾರೆ ಬ್ಯಾಂಕ್ ಖಾತೆಗಳಲ್ಲಿ ಅರ್ಧದಷ್ಟು ಆಧಾರ್‌ನೊಂದಿಗೆ ಜೋಡಣೆ ಮಾಡಲಾಗಿದೆ ಎಂದಿದ್ದಾರೆ. ಆದರೂ ಪಿಂಚಣಿ ಖಾತೆಗಳ ಸಂಖ್ಯೆ (3 ಕೋಟಿ) ಮತ್ತು ಮ್ಯೂಚುವಲ್ ಫಂಡ್ ಹೊಂದಿರುವವರು (ಸುಮಾರು 10 ಕೋಟಿ) ತುಂಬಾ ಕಡಿಮೆ ಮತ್ತು ಅವು ಶೀಘ್ರವಾಗಿ ವ್ಯಾಪ್ತಿಯನ್ನು ವಿಸ್ತರಿಸಲು ಆಧಾರ್ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಯುಐಡಿಎಐ ಈಗ ಪೂರ್ಣ KYCಗಾಗಿ ಶುಲ್ಕವನ್ನು ಪ್ರತಿ ದೃಢೀಕರಣಕ್ಕೆ ರೂ. 3 ವಿಧಿಸುತ್ತದೆ ಮತ್ತು ಬಳಕೆಯನ್ನು ಹೆಚ್ಚಿಸುವ ಸಲುವಾಗಿ ಸರಳವಾದ ‘ಹೌದು ಅಥವಾ ಇಲ್ಲ’ ಎಂಬ ದೃಢೀಕರಣಕ್ಕಾಗಿ 50 ಪೈಸೆ ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಸದ್ಯಕ್ಕೆ, 130 ಕೋಟಿ ಆಧಾರ್ ಕಾರ್ಡ್‌ಗಳಿದ್ದು, ದೇಶದ ಜನಸಂಖ್ಯೆಯ ಶೇ 99.5ರಷ್ಟನ್ನು ಒಳಗೊಂಡಿದೆ. ಉಳಿದ ಶೇಕಡಾ 0.5 ನಿವಾಸಿಗಳನ್ನು ಸೇರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: Aadhaar Card Alert: ಆಧಾರ್​ ಕಾರ್ಡ್​ದಾರರೇ ಗಮನಿಸಿ, ಒಂದು ವೇಳೆ ಇಂಥ ತಪ್ಪಾದಲ್ಲಿ 10 ಸಾವಿರ ರೂ. ದಂಡ ಬೀಳುತ್ತೆ!

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು