AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

Naresh Goyal Judicial Custody: ಮನಿ ಲಾಂಡರಿಂಗ್ ಕೇಸ್​ನಲ್ಲಿ ಆರೋಪ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥೆಯ ಸಂಸ್ಥಾಪಕ ನರೇಶ್ ಗೋಯಲ್ ಅವರ ಜುಡಿಶಿಯಲ್ ಕಸ್ಟಡಿ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಮುಂಬೈ ಕೋರ್ಟ್ ಆದೇಶಿಸಿದೆ. ಜಾರಿ ನಿರ್ದೇಶನಾಲಯವು ನರೇಶ್ ಗೋಯಲ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಕೆನರಾ ಬ್ಯಾಂಕ್ ದಾಖಲಿಸಿದ 538 ಕೋಟಿ ರೂ ಮೊತ್ತದ ಪ್ರಕರಣ ಇದಾಗಿದೆ.

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ
ನರೇಶ್ ಗೋಯಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 14, 2023 | 2:50 PM

ಮುಂಬೈ, ಸೆಪ್ಟೆಂಬರ್ 14: ಹಣ ಅಕ್ರಮ ವರ್ಗಾವಣೆ (Money Laundering) ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ (Naresh Goyal) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನಷ್ಟು 14 ದಿನಗಳ ಕಾಲ ವಿಸ್ತರಿಸಲಾಗಿದೆ. ಇಂದು (ಸೆ. 14) ಅವರ ಕಸ್ಟಡಿ ಅವಧಿ ಮುಗಿಯಬೇಕಿತ್ತು. ನಿನ್ನೆ ಮುಂಬೈ ಕೋರ್ಟ್​ವೊಂದಕ್ಕೆ ಗೋಯಲ್ ಅವರನ್ನು ಹಾಜರುಪಡಿಸಿದ ಜಾರಿ ನಿರ್ದೇಶನಾಲಯ, ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕೆಂದು ಕೋರಿತು. ಇದಕ್ಕೆ ನ್ಯಾಯಾಲಯ ಸಮ್ಮತಿಸಿದೆ. 74 ವರ್ಷದ ನರೇಶ್ ಗೋಯಲ್ ಅವರು ಸೆಪ್ಟೆಂಬರ್ 28ರವರೆಗೂ ಜುಡಿಷಿಯಲ್ ಕಸ್ಟಡಿಯಲ್ಲಿ ಮುಂದುವರಿಯಲಿದ್ದಾರೆ.

ಏನಿದು ಜೆಟ್ ಏರ್ವೇಸ್ ವಿರುದ್ಧದ ಪ್ರಕರಣ?

ತಮ್ಮ ಬ್ಯಾಂಕ್​ನಿಂದ ವಿವಿಧ ಅವಧಿಯಲ್ಲಿ, ವಿವಿಧ ಕಾರಣಗಳಿಗೆ ಪಡೆದಿದ್ದ 848.86 ಕೋಟಿ ರೂ ಮೊತ್ತದ ಸಾಲದಲ್ಲಿ 538.62 ಕೋಟಿ ರೂ ಹಣವನ್ನು ಜೆಟ್ ಏರ್ವೇಸ್ ಮರುಪಾವತಿಸದೇ ಬಾಕಿ ಉಳಿಸಿದೆ ಎಂದು ಕೆನರಾ ಬ್ಯಾಂಕ್ ದೂರು ನೀಡಿತ್ತು. ಆ ಸಂಬಂಧ ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಭಾರತದ ಐಎಂಇಇಸಿ ಕಾರಿಡಾರ್ ಅದೆಷ್ಟು ಐತಿಹಾಸಿಕ ಗೊತ್ತಾ? ಇತಿಹಾಸಕಾರ ವಿಲಿಯಂ ಹೇಳೋದಿದು

ಕೆನರಾ ಬ್ಯಾಂಕ್ ಸಂಸ್ಥೆ ಇದೇ ವೇಳೆ ಜೆಟ್ ಏರ್ವೇಸ್​ನ ಲೆಕ್ಕಪತ್ರಗಳನ್ನು ಪರಿಶೀಲಿಸಿದಾಗ ಅನುಮಾನಾಸ್ಪದ ಎನಿಸುವ ವಹಿವಾಟುಗಳು ಕಂಡುಬಂದಿದ್ದವು. ವೃತ್ತಿಪರ ಮತ್ತು ಕನ್ಸಲ್ಟೆನ್ಸಿ ಸೇವೆಗಳಿಗೆಂದು ಜೆಟ್ ಏರ್ವೇಸ್ ಸಂಸ್ಥೆ 1,152.62 ಕೋಟಿ ರೂ ಪಾವತಿ ಮಾಡಿತ್ತು. ಇದರಲ್ಲಿ 197.57 ಕೋಟಿ ರೂ ಮೊತ್ತದ ವಹಿವಾಟುಗಳು ಸಂಸಯಾಸ್ಪದ ಎನಿಸಿವೆ. ಇನ್ವಾಯ್ಸ್​ನಲ್ಲಿರುವ ಸರ್ವಿಸ್​ಗೆ ಸಂಬಂಧವೇ ಇಲ್ಲದ ಸಂಸ್ಥೆಗಳಿಗೆ 420 ಕೋಟಿ ರೂ ಹಣ ಪಾವತಿ ಮಾಡಲಾಗಿದೆ ಎಂಬುದು ಕೆನರಾ ಬ್ಯಾಂಕ್​ನ ಆರೋಪ.

ಮೊದಲಿಗೆ ಸಿಬಿಐ ಈ ಪ್ರಕರಣ ದಾಖಸಿತು. ಬಳಿಕ ಜಾರಿ ನಿರ್ದೇಶನಾಲಯವು ಪಿಎಂಎಲ್​ಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದೆ. ಈ ಸಂಬಂಧ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿ ಕಸ್ಟಡಿಗೆ ಪಡೆದಿದೆ.

ಇದನ್ನೂ ಓದಿ: ಅಮೆರಿಕಕ್ಕೆ ಪೆಟ್ರೋಲ್ ಕಾಟ; ಆಗಸ್ಟ್​ನಲ್ಲಿ ಹಣದುಬ್ಬರ ಏರಿಕೆ; ಭಾರತ ಸೇರಿದಂತೆ ಜಾಗತಿಕವಾಗಿ ಏನು ಪರಿಣಾಮ?

ಬ್ಯಾಂಕ್​ನಿಂದ ಪಡೆದ ಸಾಲವನ್ನು ನಿಗದಿತ ಉದ್ದೇಶಕ್ಕೆ ಬಳಸದೇ ಅಕ್ರಮವಾಗಿ ಸಾಗಿಸಿ ವಿದೇಶೀ ಖಾತೆಗಳಲ್ಲಿ ಇಡಲಾಗಿದೆ. ಈ ಅಕ್ರಮ ಹಣವನ್ನು ನೋಡಿಕೊಳ್ಳಲು ಯುಎಇ ದೇಶದಲ್ಲಿ ಒಬ್ಬ ವ್ಯಕ್ತಿ ಇದ್ದಾರೆ ಎಂದೂ ಜಾರಿ ನಿರ್ದೇಶನಾಲಯ ಮುಂಬೈನ ನ್ಯಾಯಾಲಯಕ್ಕೆ ತಿಳಿಸಿದರೆಂದು ಹೇಳಲಾಗುತ್ತಿದೆ. ಇಡಿ ಅಧಿಕಾರಿಗಳ ವಾದವನ್ನು ಪುರಸ್ಕರಿಸಿದ ಕೋರ್ಟ್, ನರೇಶ್ ಗೋಯಲ್ ಅವರನ್ನು ಇನ್ನಷ್ಟು 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್