AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಐ, ಪೇನೌ ಶೀಘ್ರ ಲಿಂಕ್; ಭಾರತ, ಸಿಂಗಾಪುರ ಮಧ್ಯೆ ಹಣ ವರ್ಗಾವಣೆ ಇನ್ನಷ್ಟು ಸುಲಭ

ಪೇನೌ ಎಂಬುದು ಭಾರತದ ರೂಪೇ ಕಾರ್ಡ್ ಪಾವತಿ ವ್ಯವಸ್ಥೆಗೆ ಸಮನಾಗಿ ಸಿಂಗಾಪುರದಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆಯಾಗಿದೆ. ಯುಪಿಐ ಜತೆ ಲಿಂಕ್ ಮಾಡುವುದರಿಂದ ಭಾರತೀಯರನ್ನೂ ಬೆಸೆಯಲಿದೆ ಎಂದು ಹೈಕಮಿಷನರ್​ಗೆ ತಿಳಿಸಿದ್ದಾರೆ.

ಯುಪಿಐ, ಪೇನೌ ಶೀಘ್ರ ಲಿಂಕ್; ಭಾರತ, ಸಿಂಗಾಪುರ ಮಧ್ಯೆ ಹಣ ವರ್ಗಾವಣೆ ಇನ್ನಷ್ಟು ಸುಲಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 11, 2022 | 10:24 AM

Share

ನವದೆಹಲಿ: ಭಾರತ ಮತ್ತು ಸಿಂಗಾಪುರದ ಪಾವತಿ ವ್ಯವಸ್ಥೆ ಯುಪಿಐ (UPI) ಮತ್ತು ಪೇನೌ (PayNow) ಅನ್ನು ಲಿಂಕ್ ಮಾಡಲು ಉಭಯ ದೇಶಗಳು ಮುಂದಾಗಿವೆ. ಇದರಿಂದಾಗಿ ಎರಡೂ ದೇಶಗಳ ನಡುವಣ ಹಣ ವರ್ಗಾವಣೆ ಇನ್ನಷ್ಟು ಸುಲಭ ಮತ್ತು ಸರಳವಾಗಲಿವೆ. ಜತೆಗೆ, ಅತಿ ಕಡಿಮೆ ವೆಚ್ಚದಲ್ಲಿ ಹಣ ವರ್ಗಾವಣೆ ಮಾಡಬಹುದಾಗಿದೆ ಎಂದು ಸಿಂಗಾಪುರದಲ್ಲಿರುವ ಭಾರತದ ಹೈಕಮಿಷನರ್ ಪಿ. ಕುಮಾರನ್ ತಿಳಿಸಿದ್ದಾರೆ. ಮೊಬೈಲ್ ಫೋನ್ ಸಂಖ್ಯೆ ಮೂಲಕ ಭಾರತದಿಂದ ಸಿಂಗಾಪುರಕ್ಕೆ ಹಾಗೂ ಸಿಂಗಾಪುರದಿಂದ ಭಾರತಕ್ಕೆ ಯುಪಿಐ ಪಾವತಿ ವ್ಯವಸ್ಥೆ ಮೂಲಕ ಹಣ ವರ್ಗಾವಣೆ ಮಾಡಬಹುದಾಗಿದೆ. ಉಭಯ ಪಾವತಿ ವ್ಯವಸ್ಥೆಗಳ ಲಿಂಕಿಂಗ್​ಗೆ ವಿಪಿಎ (VPA) ಎಂದು ಹೆಸರಿಸಲಾಗಿದೆ ಎಂಬುದಾಗಿ ‘ಎಎನ್​ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರ್​ಬಿಐ ಮತ್ತು ಮಾನಿಟರಿ ಅಥಾರಿಟಿ ಆಫ್ ಸಿಂಗಾಪುರ (ಎಂಎಎಸ್) ಸಹಯೋಗದಲ್ಲಿ ಪಾವತಿ ವ್ಯವಸ್ಥೆಗಳನ್ನು ಲಿಂಕ್ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ವರದಿ ತಿಳಿಸಿದೆ.

ಕೆಲವೇ ತಿಂಗಳುಗಳಲ್ಲಿನ ಚಾಲನೆ

ಇದನ್ನೂ ಓದಿ
Image
Rs 2000 Currency Notes: ಚಲಾವಣೆಗೆ ಸಿಗುತ್ತಿಲ್ಲ 2,000 ರೂ. ನೋಟು! ಕಾರಣ ಇಲ್ಲಿದೆ ನೋಡಿ
Image
ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು
Image
ಆರ್ಥಿಕ ಹಿಂಜರಿತದ ವೇಳೆ ಉದ್ಯೋಗ ಉಳಿಸಿಕೊಳ್ಳಲು ಇಲ್ಲಿದೆ ಟಿಪ್ಸ್
Image
ಆನ್​ಲೈನ್ ಹಣಕಾಸು ವಂಚನೆಗಳಿಂದ ರಕ್ಷಣೆಗೆ ಈ ವಿಚಾರಗಳನ್ನು ಗಮನಿಸಿ

‘ಭಾರತದ ಯುಪಿಐ ಜತೆ ಪೇನೌ ಅನ್ನು ಲಿಂಕ್ ಮಾಡಲು ಸಿಂಗಾಪುರ ಬಯಸಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ಈ ಯೋಜನೆ ಸಾಕಾರಗೊಳ್ಳಲಿದೆ. ಈ ಮೂಲಕ ಸಿಂಗಾಪುರದಲ್ಲಿ ಕುಳಿತುಕೊಂಡು ಭಾರತದಲ್ಲಿರುವ ತಮ್ಮ ಕುಟುಂಬದವರಿಗೆ ಹಣ ಕಳುಹಿಸುವುದು ಭಾರತೀಯರಿಗೆ ಸುಲಭವಾಗಲಿದೆ’ ಎಂದು ಹೈಕಮಿಷನರ್ ಪಿ. ಕುಮಾರನ್ ಹೇಳಿದ್ದಾರೆ.

ಏನಿದು ಪೇನೌ?

ಪೇನೌ ಎಂಬುದು ಭಾರತದ ರೂಪೇ ಕಾರ್ಡ್ ಪಾವತಿ ವ್ಯವಸ್ಥೆಗೆ ಸಮನಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆಯಾಗಿದೆ. ಇದು ಏಷ್ಯಾದ ದೇಶಗಳ ಜತೆ ಲಿಂಕ್ ಆಗಿದೆ. ಯುಪಿಐ ಜತೆ ಲಿಂಕ್ ಮಾಡುವುದರಿಂದ ಭಾರತೀಯರನ್ನೂ ಬೆಸೆಯಲಿದೆ ಎಂದು ಹೈಕಮಿಷನರ್​ಗೆ ತಿಳಿಸಿದ್ದಾರೆ.

ಭಾರತೀಯರಿಗೆ ಈಗೇಕೆ ಸಮಸ್ಯೆ?

ಸಿಂಗಾಪುರಕ್ಕೆ ಬರುವ ಅನೇಕ ಭಾರತೀಯರು ರುಪೇ ಕಾರ್ಡ್ ಹೊಂದಿರುವುದಿಲ್ಲ. ಒಂದು ವೇಳೆ ಹೊಂದಿದ್ದರೂ ದೇಶೀಯ ಕಾರ್ಡ್ ಮಾತ್ರ ಇರುತ್ತದೆ. ಡಿಜಿಟಲೈಸೇಷನ್ ಪರಿಣಾಮವಾಗಿ ಭವಿಷ್ಯದಲ್ಲಿ ಹೆಚ್ಚಿನ ಪ್ರವಾಸಿಗರು ನಗದಿಗಿಂತ ಡಿಜಿಟಲ್ ರೂಪದಲ್ಲಿಯೇ ಹಣ ಇಟ್ಟುಕೊಳ್ಳಲಿದ್ದಾರೆ. ಆಗ ಅವರು ಅಂತಾರಾಷ್ಟ್ರೀಯ ಕ್ರೆಡಿಟ್ ಕಾರ್ಡ್ ಬಳಸಿದರೆ ಹೆಚ್ಚು ಶುಲ್ಕ ಪಾವತಿಸಬೇಕಾಗುತ್ತದೆ. ಯುಪಿಐ ಹಾಗೂ ಪೇನೌ ಲಿಂಕ್ ಮಾಡುವುದರಿಂದ ಅತಿ ಕಡಿಮೆ ಶುಲ್ಕದಲ್ಲಿ ಹಣ ವರ್ಗಾವಣೆ ಸಾಧ್ಯ ಎಂದು ಹೈಕಮಿಷನರ್ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಪ್ರಯೋಜನ

ಸದ್ಯ ಸಿಂಗಾಪುರಕ್ಕೆ ಬರುವ ಭಾರತದ ವಲಸೆ ಕಾರ್ಮಿಕರು ಹಣ ಕಳುಹಿಸಲು ಸುಮಾರು ಶೇಕಡಾ 10ರ ವರೆಗೆ ಬ್ಯಾಂಕ್​ಗಳಿಗೆ ಶುಲ್ಕ ಪಾವತಿಸಬೇಕಾಗುತ್ತದೆ. ಯುಪಿಐ-ಪೇನೌ ಲಿಂಕ್ ಮಾಡುವುದರಿಂದ ಅವರಿಗೆ ಪ್ರಯೋಜನವಾಗಲಿದೆ. ಬಹು ಕಡಿಮೆ ವೆಚ್ಚದಲ್ಲಿ ಹಣ ವರ್ಗಾವಣೆ ಮಾಡಬಹುದಾಗಿದೆ ಎಂದು ಪಿ. ಕುಮಾರನ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Fri, 11 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ